Advertisement
Opinion

ಕೃಷಿ ವಿಜ್ಞಾನಿ ಡಾ| ಎಂ ಮಹಾದೇವಪ್ಪ | ಹುಟ್ಟುಹಬ್ಬದಂದು ಅವರ ಸಾಧನೆಗೊಂದು ನಮನ

Share

ಡಾ| ಎಂ ಮಹಾದೇವಪ್ಪ ಭಾರತದಲ್ಲಿ ಹೈಬ್ರಿಡ್ ಭತ್ತದ ಯೋಜನೆಯ ಪಿತಾಮಹರಾಗಿ, ನಾಡಿನ ಶ್ರೇಷ್ಠ ಕೃಷಿ ವಿಜ್ಞಾನಿಗಳಾಗಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾಗಿ ಹೆಸರಾಗಿದ್ದವರು. ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಖ್ಯಾತಿ ಹೊಂದಿದ್ದ ಮಹಾದೇವಪ್ಪ ಅವರು 1937 ಆಗಸ್ಟ್ 4 ರಂದು ಚಾಮರಾಜನಗರ ಜಿಲ್ಲೆಯ ಮಾದಾಪುರದಲ್ಲಿ ಜನಿಸಿದರು. ತಂದೆ ಮಾದಪ್ಪ. ತಾಯಿ ಪುಟ್ಟಬಸಮ್ಮ. ಸ್ಥಳೀಯ ಸರ್ಕಾರಿ ಶಾಲೆಯಲ್ಲಿಯೇ ಕಲಿತ ಇವರು ನಂತರ ಮೈಸೂರು, ಕೊಯಮತ್ತೂರಿನಲ್ಲಿ ಉನ್ನತ ವ್ಯಾಸಂಗ ನಡೆಸಿದರು.

Advertisement
Advertisement

ಮಹಾದೇವಪ್ಪನವರು ಮೈಸೂರಿನ ಸಿ.ಎಫ್.ಟಿ.ಆರ್.ಐ ನಲ್ಲಿ ಹಿರಿಯ ಸಂಶೋಧಕರಾಗಿ ಸೇವೆ ಸಲ್ಲಿಸಿ, ಬೆಂಗಳೂರಿನ ಕೃಷಿ ವಿವಿಯಲ್ಲಿ ಜೋಳ ಅಭಿವೃದ್ಧಿ ತಜ್ಞರಾಗಿ (ಬ್ರೀಡರ್) ಹಾಗೂ ಮಂಡ್ಯದ ವಿ.ಸಿ ಫಾರ್ಮನಲ್ಲಿ ಭತ್ತ ಸಸ್ಯ ವಿಜ್ಞಾನಿಯಾಗಿ ಸೇವೆ ಸಲ್ಲಿಸಿದರು. ಪಿಲಿಪೈನ್ಸ್ ನ ಅಂತಾರಾಷ್ಟ್ರೀಯ ಭತ್ತ ಸಂಶೋಧನಾ ಸಂಸ್ಥೆಯಲ್ಲಿ ಸಂಶೋಧನೆ (1977-1980) ನಡೆಸಿದ ಮಹಾದೇವಪ್ಪನವರು ಮತ್ತೆ ಕರ್ನಾಟಕಕ್ಕೆ ಬಂದು ಹಲವು ಕಡೆ ಸೇವೆ ಸಲ್ಲಿಸಿ 1994 -2000 ಅವಧಿಯಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಸೇವೆ ಸಲ್ಲಿಸಿದ್ದರು.

ಮಹಾದೇವಪ್ಪನವರು ಫಿಲಿಪೈನ್ಸ್ ಅಲ್ಲದೆ ಜಪಾನ್, ತೈವಾನ್, ಥೈಲ್ಯಾಂಡ್, ಮಲೇಷಿಯಾ, ಚೈನಾ, ಇಂಗ್ಲೆಂಡ್, ಆಸ್ಟ್ರೇಲಿಯಾ, ಅಮೆರಿಕಾ, ಕ್ಯೂಬಾ, ರಷ್ಯಾ, ಕೀನ್ಯಾ ದೇಶಗಳಲ್ಲಿ ಸಂಚರಿಸಿ ತಮ್ಮ ಸಂಶೋಧನೆ ಹಾಗೂ ಕಾರ್ಯವ್ಯಾಪ್ತಿಯನ್ನು ಜಗತ್ತಿನಾದ್ಯಂತ ವಿಸ್ತರಿಸಿದ್ದರು. ಡಾ| ಎಂ ಮಹಾದೇವಪ್ಪನವರು ಕೆಆರ್‌ಎಚ್-1 ಹಾಗೂ 2 ಎನ್ನುವ ಹೆಸರಿನ ಭತ್ತದ ತಳಿಗಳನ್ನು ರೂಪಿಸಲು ರಾಷ್ಟ್ರಮಟ್ಟದಲ್ಲಿ ಮುಂದಾಳತ್ವ ವಹಿಸಿದವರು. ಭತ್ತದ ಬೆಳೆಯಲ್ಲಿ ಕಟಾವು ಹಾಗೂ ಕಟಾವಿನ ನಂತರ ಆಗುವ ನಷ್ಟವನ್ನು ತಗ್ಗಿಸಲು ಅವರು ವಿಶಿಷ್ಟವಾದ ತಂತ್ರಜ್ಞಾನ ರೂಪಿಸಿದರು. ನೀರಿನ ಕೊರತೆ ನಡುವೆಯೂ ಅತ್ಯುತ್ತಮವಾಗಿ ಭತ್ತ ಬೆಳೆಯುವ ಮಾರ್ಗೋಪಾಯಗಳನ್ನು ಹಾಕಿಕೊಟ್ಟರು.

ಡಾ| ಮಹಾದೇವಪ್ಪನವರಿಗೆ ಪದ್ಮಶ್ರೀ, ಪದ್ಮಭೂಷಣ, ಹೂಕರ್ ಪ್ರಶಸ್ತಿ, ಕರ್ನಾಟಕ ರಾಜೋತ್ಸವ ಪ್ರಶಸ್ತಿ, ಭಾರತ ರತ್ನ ಎಂ ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಜೀವಮಾನ ಸಾಧನೆಗಾಗಿನ ಗೌರವ ಸೇರಿದಂತೆ ಅನೇಕ ಗೌರವಗಳು ಸಂದಿದ್ದವು. ಕೃಷಿಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ ಡಾ| ಎಂ ಮಹಾದೇವಪ್ಪ 2021 ಮಾರ್ಚ್ 6 ರಂದು ಲಿಂಗೈಕ್ಯರಾದರು.

ಮೂಲ : social network

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

6 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

7 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

7 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

7 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

7 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

8 hours ago