Opinion

ಕೃಷಿ ವಿಜ್ಞಾನಿ ಡಾ| ಎಂ ಮಹಾದೇವಪ್ಪ | ಹುಟ್ಟುಹಬ್ಬದಂದು ಅವರ ಸಾಧನೆಗೊಂದು ನಮನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಡಾ| ಎಂ ಮಹಾದೇವಪ್ಪ ಭಾರತದಲ್ಲಿ ಹೈಬ್ರಿಡ್ ಭತ್ತದ ಯೋಜನೆಯ ಪಿತಾಮಹರಾಗಿ, ನಾಡಿನ ಶ್ರೇಷ್ಠ ಕೃಷಿ ವಿಜ್ಞಾನಿಗಳಾಗಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾಗಿ ಹೆಸರಾಗಿದ್ದವರು. ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಖ್ಯಾತಿ ಹೊಂದಿದ್ದ ಮಹಾದೇವಪ್ಪ ಅವರು 1937 ಆಗಸ್ಟ್ 4 ರಂದು ಚಾಮರಾಜನಗರ ಜಿಲ್ಲೆಯ ಮಾದಾಪುರದಲ್ಲಿ ಜನಿಸಿದರು. ತಂದೆ ಮಾದಪ್ಪ. ತಾಯಿ ಪುಟ್ಟಬಸಮ್ಮ. ಸ್ಥಳೀಯ ಸರ್ಕಾರಿ ಶಾಲೆಯಲ್ಲಿಯೇ ಕಲಿತ ಇವರು ನಂತರ ಮೈಸೂರು, ಕೊಯಮತ್ತೂರಿನಲ್ಲಿ ಉನ್ನತ ವ್ಯಾಸಂಗ ನಡೆಸಿದರು.

Advertisement
Advertisement

ಮಹಾದೇವಪ್ಪನವರು ಮೈಸೂರಿನ ಸಿ.ಎಫ್.ಟಿ.ಆರ್.ಐ ನಲ್ಲಿ ಹಿರಿಯ ಸಂಶೋಧಕರಾಗಿ ಸೇವೆ ಸಲ್ಲಿಸಿ, ಬೆಂಗಳೂರಿನ ಕೃಷಿ ವಿವಿಯಲ್ಲಿ ಜೋಳ ಅಭಿವೃದ್ಧಿ ತಜ್ಞರಾಗಿ (ಬ್ರೀಡರ್) ಹಾಗೂ ಮಂಡ್ಯದ ವಿ.ಸಿ ಫಾರ್ಮನಲ್ಲಿ ಭತ್ತ ಸಸ್ಯ ವಿಜ್ಞಾನಿಯಾಗಿ ಸೇವೆ ಸಲ್ಲಿಸಿದರು. ಪಿಲಿಪೈನ್ಸ್ ನ ಅಂತಾರಾಷ್ಟ್ರೀಯ ಭತ್ತ ಸಂಶೋಧನಾ ಸಂಸ್ಥೆಯಲ್ಲಿ ಸಂಶೋಧನೆ (1977-1980) ನಡೆಸಿದ ಮಹಾದೇವಪ್ಪನವರು ಮತ್ತೆ ಕರ್ನಾಟಕಕ್ಕೆ ಬಂದು ಹಲವು ಕಡೆ ಸೇವೆ ಸಲ್ಲಿಸಿ 1994 -2000 ಅವಧಿಯಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಸೇವೆ ಸಲ್ಲಿಸಿದ್ದರು.

Advertisement

ಮಹಾದೇವಪ್ಪನವರು ಫಿಲಿಪೈನ್ಸ್ ಅಲ್ಲದೆ ಜಪಾನ್, ತೈವಾನ್, ಥೈಲ್ಯಾಂಡ್, ಮಲೇಷಿಯಾ, ಚೈನಾ, ಇಂಗ್ಲೆಂಡ್, ಆಸ್ಟ್ರೇಲಿಯಾ, ಅಮೆರಿಕಾ, ಕ್ಯೂಬಾ, ರಷ್ಯಾ, ಕೀನ್ಯಾ ದೇಶಗಳಲ್ಲಿ ಸಂಚರಿಸಿ ತಮ್ಮ ಸಂಶೋಧನೆ ಹಾಗೂ ಕಾರ್ಯವ್ಯಾಪ್ತಿಯನ್ನು ಜಗತ್ತಿನಾದ್ಯಂತ ವಿಸ್ತರಿಸಿದ್ದರು. ಡಾ| ಎಂ ಮಹಾದೇವಪ್ಪನವರು ಕೆಆರ್‌ಎಚ್-1 ಹಾಗೂ 2 ಎನ್ನುವ ಹೆಸರಿನ ಭತ್ತದ ತಳಿಗಳನ್ನು ರೂಪಿಸಲು ರಾಷ್ಟ್ರಮಟ್ಟದಲ್ಲಿ ಮುಂದಾಳತ್ವ ವಹಿಸಿದವರು. ಭತ್ತದ ಬೆಳೆಯಲ್ಲಿ ಕಟಾವು ಹಾಗೂ ಕಟಾವಿನ ನಂತರ ಆಗುವ ನಷ್ಟವನ್ನು ತಗ್ಗಿಸಲು ಅವರು ವಿಶಿಷ್ಟವಾದ ತಂತ್ರಜ್ಞಾನ ರೂಪಿಸಿದರು. ನೀರಿನ ಕೊರತೆ ನಡುವೆಯೂ ಅತ್ಯುತ್ತಮವಾಗಿ ಭತ್ತ ಬೆಳೆಯುವ ಮಾರ್ಗೋಪಾಯಗಳನ್ನು ಹಾಕಿಕೊಟ್ಟರು.

ಡಾ| ಮಹಾದೇವಪ್ಪನವರಿಗೆ ಪದ್ಮಶ್ರೀ, ಪದ್ಮಭೂಷಣ, ಹೂಕರ್ ಪ್ರಶಸ್ತಿ, ಕರ್ನಾಟಕ ರಾಜೋತ್ಸವ ಪ್ರಶಸ್ತಿ, ಭಾರತ ರತ್ನ ಎಂ ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಜೀವಮಾನ ಸಾಧನೆಗಾಗಿನ ಗೌರವ ಸೇರಿದಂತೆ ಅನೇಕ ಗೌರವಗಳು ಸಂದಿದ್ದವು. ಕೃಷಿಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ ಡಾ| ಎಂ ಮಹಾದೇವಪ್ಪ 2021 ಮಾರ್ಚ್ 6 ರಂದು ಲಿಂಗೈಕ್ಯರಾದರು.

Advertisement

ಮೂಲ : social network

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?

ಅಡಿಕೆ ನಿಷೇಧದ ತೂಗುಗತ್ತಿಯ ಮೇಲೆಯೇ ಉದ್ಯಮವನ್ನು ಮುನ್ನಡೆಸಬೇಕಾಗುತ್ತದೆ.ಇನ್ನಾದರೂ ಕಠಿಣ ಪರಿಶ್ರಮದೊಂದಿಗೆ ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ…

4 hours ago

ಮುಂದಿನ ಒಂದು ವರ್ಷ ಕೆಲವು ರಾಶಿಗಳಿಗೆ ಗುರು ಪ್ರವೇಶದಿಂದ ಆಗುವ ತೊಂದರೆಗಳು ಏನು..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

18 hours ago

ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …

ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…

1 day ago

ಅಡಿಕೆ ಧಾರಣೆ ಏರುಪೇರು ಯಾಕಾಗಿ?

ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…

1 day ago

ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ

ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…

2 days ago

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ – ಈಶ್ವರ ಖಂಡ್ರೆ

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…

2 days ago