ಡಾ| ಎಂ ಮಹಾದೇವಪ್ಪ ಭಾರತದಲ್ಲಿ ಹೈಬ್ರಿಡ್ ಭತ್ತದ ಯೋಜನೆಯ ಪಿತಾಮಹರಾಗಿ, ನಾಡಿನ ಶ್ರೇಷ್ಠ ಕೃಷಿ ವಿಜ್ಞಾನಿಗಳಾಗಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾಗಿ ಹೆಸರಾಗಿದ್ದವರು. ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಖ್ಯಾತಿ ಹೊಂದಿದ್ದ ಮಹಾದೇವಪ್ಪ ಅವರು 1937 ಆಗಸ್ಟ್ 4 ರಂದು ಚಾಮರಾಜನಗರ ಜಿಲ್ಲೆಯ ಮಾದಾಪುರದಲ್ಲಿ ಜನಿಸಿದರು. ತಂದೆ ಮಾದಪ್ಪ. ತಾಯಿ ಪುಟ್ಟಬಸಮ್ಮ. ಸ್ಥಳೀಯ ಸರ್ಕಾರಿ ಶಾಲೆಯಲ್ಲಿಯೇ ಕಲಿತ ಇವರು ನಂತರ ಮೈಸೂರು, ಕೊಯಮತ್ತೂರಿನಲ್ಲಿ ಉನ್ನತ ವ್ಯಾಸಂಗ ನಡೆಸಿದರು.
ಮಹಾದೇವಪ್ಪನವರು ಮೈಸೂರಿನ ಸಿ.ಎಫ್.ಟಿ.ಆರ್.ಐ ನಲ್ಲಿ ಹಿರಿಯ ಸಂಶೋಧಕರಾಗಿ ಸೇವೆ ಸಲ್ಲಿಸಿ, ಬೆಂಗಳೂರಿನ ಕೃಷಿ ವಿವಿಯಲ್ಲಿ ಜೋಳ ಅಭಿವೃದ್ಧಿ ತಜ್ಞರಾಗಿ (ಬ್ರೀಡರ್) ಹಾಗೂ ಮಂಡ್ಯದ ವಿ.ಸಿ ಫಾರ್ಮನಲ್ಲಿ ಭತ್ತ ಸಸ್ಯ ವಿಜ್ಞಾನಿಯಾಗಿ ಸೇವೆ ಸಲ್ಲಿಸಿದರು. ಪಿಲಿಪೈನ್ಸ್ ನ ಅಂತಾರಾಷ್ಟ್ರೀಯ ಭತ್ತ ಸಂಶೋಧನಾ ಸಂಸ್ಥೆಯಲ್ಲಿ ಸಂಶೋಧನೆ (1977-1980) ನಡೆಸಿದ ಮಹಾದೇವಪ್ಪನವರು ಮತ್ತೆ ಕರ್ನಾಟಕಕ್ಕೆ ಬಂದು ಹಲವು ಕಡೆ ಸೇವೆ ಸಲ್ಲಿಸಿ 1994 -2000 ಅವಧಿಯಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಸೇವೆ ಸಲ್ಲಿಸಿದ್ದರು.
ಮಹಾದೇವಪ್ಪನವರು ಫಿಲಿಪೈನ್ಸ್ ಅಲ್ಲದೆ ಜಪಾನ್, ತೈವಾನ್, ಥೈಲ್ಯಾಂಡ್, ಮಲೇಷಿಯಾ, ಚೈನಾ, ಇಂಗ್ಲೆಂಡ್, ಆಸ್ಟ್ರೇಲಿಯಾ, ಅಮೆರಿಕಾ, ಕ್ಯೂಬಾ, ರಷ್ಯಾ, ಕೀನ್ಯಾ ದೇಶಗಳಲ್ಲಿ ಸಂಚರಿಸಿ ತಮ್ಮ ಸಂಶೋಧನೆ ಹಾಗೂ ಕಾರ್ಯವ್ಯಾಪ್ತಿಯನ್ನು ಜಗತ್ತಿನಾದ್ಯಂತ ವಿಸ್ತರಿಸಿದ್ದರು. ಡಾ| ಎಂ ಮಹಾದೇವಪ್ಪನವರು ಕೆಆರ್ಎಚ್-1 ಹಾಗೂ 2 ಎನ್ನುವ ಹೆಸರಿನ ಭತ್ತದ ತಳಿಗಳನ್ನು ರೂಪಿಸಲು ರಾಷ್ಟ್ರಮಟ್ಟದಲ್ಲಿ ಮುಂದಾಳತ್ವ ವಹಿಸಿದವರು. ಭತ್ತದ ಬೆಳೆಯಲ್ಲಿ ಕಟಾವು ಹಾಗೂ ಕಟಾವಿನ ನಂತರ ಆಗುವ ನಷ್ಟವನ್ನು ತಗ್ಗಿಸಲು ಅವರು ವಿಶಿಷ್ಟವಾದ ತಂತ್ರಜ್ಞಾನ ರೂಪಿಸಿದರು. ನೀರಿನ ಕೊರತೆ ನಡುವೆಯೂ ಅತ್ಯುತ್ತಮವಾಗಿ ಭತ್ತ ಬೆಳೆಯುವ ಮಾರ್ಗೋಪಾಯಗಳನ್ನು ಹಾಕಿಕೊಟ್ಟರು.
ಡಾ| ಮಹಾದೇವಪ್ಪನವರಿಗೆ ಪದ್ಮಶ್ರೀ, ಪದ್ಮಭೂಷಣ, ಹೂಕರ್ ಪ್ರಶಸ್ತಿ, ಕರ್ನಾಟಕ ರಾಜೋತ್ಸವ ಪ್ರಶಸ್ತಿ, ಭಾರತ ರತ್ನ ಎಂ ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಜೀವಮಾನ ಸಾಧನೆಗಾಗಿನ ಗೌರವ ಸೇರಿದಂತೆ ಅನೇಕ ಗೌರವಗಳು ಸಂದಿದ್ದವು. ಕೃಷಿಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ ಡಾ| ಎಂ ಮಹಾದೇವಪ್ಪ 2021 ಮಾರ್ಚ್ 6 ರಂದು ಲಿಂಗೈಕ್ಯರಾದರು.
ಮೂಲ : social network
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…