Advertisement
Opinion

ಕೃಷಿ ವಿಜ್ಞಾನಿ ಡಾ| ಎಂ ಮಹಾದೇವಪ್ಪ | ಹುಟ್ಟುಹಬ್ಬದಂದು ಅವರ ಸಾಧನೆಗೊಂದು ನಮನ

Share

ಡಾ| ಎಂ ಮಹಾದೇವಪ್ಪ ಭಾರತದಲ್ಲಿ ಹೈಬ್ರಿಡ್ ಭತ್ತದ ಯೋಜನೆಯ ಪಿತಾಮಹರಾಗಿ, ನಾಡಿನ ಶ್ರೇಷ್ಠ ಕೃಷಿ ವಿಜ್ಞಾನಿಗಳಾಗಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾಗಿ ಹೆಸರಾಗಿದ್ದವರು. ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಖ್ಯಾತಿ ಹೊಂದಿದ್ದ ಮಹಾದೇವಪ್ಪ ಅವರು 1937 ಆಗಸ್ಟ್ 4 ರಂದು ಚಾಮರಾಜನಗರ ಜಿಲ್ಲೆಯ ಮಾದಾಪುರದಲ್ಲಿ ಜನಿಸಿದರು. ತಂದೆ ಮಾದಪ್ಪ. ತಾಯಿ ಪುಟ್ಟಬಸಮ್ಮ. ಸ್ಥಳೀಯ ಸರ್ಕಾರಿ ಶಾಲೆಯಲ್ಲಿಯೇ ಕಲಿತ ಇವರು ನಂತರ ಮೈಸೂರು, ಕೊಯಮತ್ತೂರಿನಲ್ಲಿ ಉನ್ನತ ವ್ಯಾಸಂಗ ನಡೆಸಿದರು.

ಮಹಾದೇವಪ್ಪನವರು ಮೈಸೂರಿನ ಸಿ.ಎಫ್.ಟಿ.ಆರ್.ಐ ನಲ್ಲಿ ಹಿರಿಯ ಸಂಶೋಧಕರಾಗಿ ಸೇವೆ ಸಲ್ಲಿಸಿ, ಬೆಂಗಳೂರಿನ ಕೃಷಿ ವಿವಿಯಲ್ಲಿ ಜೋಳ ಅಭಿವೃದ್ಧಿ ತಜ್ಞರಾಗಿ (ಬ್ರೀಡರ್) ಹಾಗೂ ಮಂಡ್ಯದ ವಿ.ಸಿ ಫಾರ್ಮನಲ್ಲಿ ಭತ್ತ ಸಸ್ಯ ವಿಜ್ಞಾನಿಯಾಗಿ ಸೇವೆ ಸಲ್ಲಿಸಿದರು. ಪಿಲಿಪೈನ್ಸ್ ನ ಅಂತಾರಾಷ್ಟ್ರೀಯ ಭತ್ತ ಸಂಶೋಧನಾ ಸಂಸ್ಥೆಯಲ್ಲಿ ಸಂಶೋಧನೆ (1977-1980) ನಡೆಸಿದ ಮಹಾದೇವಪ್ಪನವರು ಮತ್ತೆ ಕರ್ನಾಟಕಕ್ಕೆ ಬಂದು ಹಲವು ಕಡೆ ಸೇವೆ ಸಲ್ಲಿಸಿ 1994 -2000 ಅವಧಿಯಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಸೇವೆ ಸಲ್ಲಿಸಿದ್ದರು.

ಮಹಾದೇವಪ್ಪನವರು ಫಿಲಿಪೈನ್ಸ್ ಅಲ್ಲದೆ ಜಪಾನ್, ತೈವಾನ್, ಥೈಲ್ಯಾಂಡ್, ಮಲೇಷಿಯಾ, ಚೈನಾ, ಇಂಗ್ಲೆಂಡ್, ಆಸ್ಟ್ರೇಲಿಯಾ, ಅಮೆರಿಕಾ, ಕ್ಯೂಬಾ, ರಷ್ಯಾ, ಕೀನ್ಯಾ ದೇಶಗಳಲ್ಲಿ ಸಂಚರಿಸಿ ತಮ್ಮ ಸಂಶೋಧನೆ ಹಾಗೂ ಕಾರ್ಯವ್ಯಾಪ್ತಿಯನ್ನು ಜಗತ್ತಿನಾದ್ಯಂತ ವಿಸ್ತರಿಸಿದ್ದರು. ಡಾ| ಎಂ ಮಹಾದೇವಪ್ಪನವರು ಕೆಆರ್‌ಎಚ್-1 ಹಾಗೂ 2 ಎನ್ನುವ ಹೆಸರಿನ ಭತ್ತದ ತಳಿಗಳನ್ನು ರೂಪಿಸಲು ರಾಷ್ಟ್ರಮಟ್ಟದಲ್ಲಿ ಮುಂದಾಳತ್ವ ವಹಿಸಿದವರು. ಭತ್ತದ ಬೆಳೆಯಲ್ಲಿ ಕಟಾವು ಹಾಗೂ ಕಟಾವಿನ ನಂತರ ಆಗುವ ನಷ್ಟವನ್ನು ತಗ್ಗಿಸಲು ಅವರು ವಿಶಿಷ್ಟವಾದ ತಂತ್ರಜ್ಞಾನ ರೂಪಿಸಿದರು. ನೀರಿನ ಕೊರತೆ ನಡುವೆಯೂ ಅತ್ಯುತ್ತಮವಾಗಿ ಭತ್ತ ಬೆಳೆಯುವ ಮಾರ್ಗೋಪಾಯಗಳನ್ನು ಹಾಕಿಕೊಟ್ಟರು.

ಡಾ| ಮಹಾದೇವಪ್ಪನವರಿಗೆ ಪದ್ಮಶ್ರೀ, ಪದ್ಮಭೂಷಣ, ಹೂಕರ್ ಪ್ರಶಸ್ತಿ, ಕರ್ನಾಟಕ ರಾಜೋತ್ಸವ ಪ್ರಶಸ್ತಿ, ಭಾರತ ರತ್ನ ಎಂ ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಜೀವಮಾನ ಸಾಧನೆಗಾಗಿನ ಗೌರವ ಸೇರಿದಂತೆ ಅನೇಕ ಗೌರವಗಳು ಸಂದಿದ್ದವು. ಕೃಷಿಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ ಡಾ| ಎಂ ಮಹಾದೇವಪ್ಪ 2021 ಮಾರ್ಚ್ 6 ರಂದು ಲಿಂಗೈಕ್ಯರಾದರು.

ಮೂಲ : social network

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

21 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

1 day ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

1 day ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago