Opinion

ಡಿ.23ಕ್ಕೆ ವೈಕುಂಠ ಏಕಾದಶಿ | ಏಳು ಜನ್ಮಗಳ ಪಾಪ ಕಳೆದು ಮೋಕ್ಷ ಸಂಪಾದಿಸುವ ದಿನ..!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಏಳು ಜನ್ಮಗಳ ಪಾಪ ಕಳೆದು ಮೋಕ್ಷ ಸಂಪಾದಿಸುವ ದಿನವೇ ವೈಕುಂಠ ಏಕಾದಶಿ(Vaikunta Ekadashi). ಧನುರ್ಮಾಸದಲ್ಲಿ(solar month of Dhanu) ಬರುವ ಏಕಾದಶಿಯನ್ನು ಮುಕ್ಕೋಟಿ ಏಕಾದಶಿ ಎಂತಲೂ ಕರೆಯುವರು. ಈ ದಿನ ದೇವಾಲಯದ ಉತ್ತರ ದ್ವಾರದಲ್ಲಿ ಹೂವಿನ ಅಲಂಕಾರ(Flower Decoration) ಮಾಡಿ ವಿಶೇಷ ಪೂಜೆ ನೆರವೇರಿಸುತ್ತಾರೆ. ಸೂರ್ಯನು(Sun) ಉತ್ತರಾಯಣಕ್ಕೆ ಬದಲಾಗುವ ಮೊದಲು ಧನುರ್ಮಾಸದ ಏಕಾದಶಿಯನ್ನು ವೈಕುಂಠ ಏಕಾದಶಿ ಎಂದು ಕರೆಯುತ್ತಾರೆ. ಸೂರ್ಯನು ಧನಸ್ಸು ರಾಶಿ ಪ್ರವೇಶ ಮಾಡಿ ಮಕರ ಸಂಕ್ರಮಣದವರೆಗೂ ಈ ರಾಶಿಯಲ್ಲಿ ಇರುತ್ತಾನೆ.

Advertisement

ಗರುಡವಾಹನನಾದ ವಿಷ್ಣು ವೈಕುಂಠದಿಂದ ಮೂರು ಕೋಟಿ ದೇವತೆಗಳೊಂದಿಗೆ ಭೂಲೋಕದಲ್ಲಿ ಇಳಿದು ಬಂದು ಭಕ್ತರಿಗೆ ದರ್ಶನ ನೀಡುತ್ತಾನೆ. ಆದುದರಿಂದ ಈ ದಿನವನ್ನು ಮುಕ್ಕೋಟಿ ಏಕಾದಶಿ ಎನ್ನುವರು. ಈ ದಿನ ಉಪವಾಸವಿದ್ದು ವಿಷ್ಣುವಿನ ದರ್ಶನ ಮಾಡಬೇಕು. ಮಾಸದ ಏಕಾದಶಿಯ ದಿನ ಶ್ರೀಮನ್ನಾರಾಯಣನು ಯೋಗನಿದ್ರೆಯಿಂದ ಏಳುವನು. ಈ ದಿನ ವಿಷ್ಣು ದರ್ಶನ ಮಾತ್ರದಿಂದ ವೈಕುಂಠ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಆದ್ದರಿಂದ ಈ ದಿನಕ್ಕೆ ಅಷ್ಟು ಮಹತ್ವವಿದೆ.

ಮಹಾವಿಷ್ಣುವು ಮುರ ಎಂಬ ರಾಕ್ಷಸನನ್ನು ಸಂಹರಿಸಿದ ದಿನವೇ ಇದು. ಬಹಳ ದಿನಗಳವರೆಗೆ ಮುರ ಅಕ್ಕಿಯಲ್ಲಿ ಬಚ್ಚಿಟ್ಟುಕೊಂಡಿದ್ದ. ಅದಕ್ಕಾಗಿ ಈ ದಿನ ಅಕ್ಕಿ ಸೇವೆನೆ ಮಾಡಬಾರದು. ಏಕಾದಶಿ ದೇವಿಯನ್ನು ಉಪವಾಸದಿಂದ ದರ್ಶನದಿಂದ ಪೂಜಿಸಿ ಪಾಪ ಪರಿಹಾರ ಮಾಡಿಕೊಳ್ಳಬೇಕು ಐದು ಜ್ಞಾನೇಂದ್ರಿಯಗಳು ಐದು ಕರ್ಮೇಂದ್ರಿಯಗಳು ಮತ್ತು ಮನಸ್ಸು ಒಟ್ಟು 11- ಹನ್ನೊಂದು ಇಂದ್ರಿಯಗಳನ್ನು ನಿಗ್ರಹ ಮಾಡಿ ಭಗವಂತನ ಅನುಗ್ರಹಕ್ಕೆ ಪಾತ್ರರಾಗಬೇಕು.

ಅಮೃತ ಮತ್ತು ಹಾಲಾಹಲ ಉದ್ಭವಿಸಿದ ದಿನವಿದು. ಶಿವ ನೀಲಕಂಠನಾದ ದಿನ. ಈ ದಿನ ದೇವರ ದರ್ಶನ ಮಾಡಿ ಹರಿ ನಾಮ ಸಂಕೀರ್ತನೆ, ವಿಷ್ಣು ಸಹಸ್ರನಾಮ ಪಾರಾಯಣ ಮಾಡಬೇಕು. ತುಳಸಿ ಎಲೆ ಅರ್ಪಿಸಬೇಕು. ಇದರಿಂದ ಮೋಕ್ಷ ಪ್ರಾಪ್ತಿ ಖಂಡಿತವಾಗಿ ಲಭಿಸುವುದು. ಪುಷ್ಯ ಮಾಸವನ್ನು ಶೂನ್ಯಮಾಸವೆಂತಲು ಕರೆಯುವರು. ಈ ಸಮಯದಲ್ಲಿ ಯಾವುದೇ ಮದುವೆ, ನಾಮಕರಣ, ಗೃಹಪ್ರವೇಶ ಮುಂತಾದ ಶುಭಕಾರ್ಯಗಳನ್ನು ಮಾಡುವುದಿಲ್ಲ. ಕಾರಣ ಇಲ್ಲಿ ಪ್ರತಿಫಲ ಶೂನ್ಯ. ಆದ್ದರಿಂದ ಈ ಪೂರ್ತಿ ಮಾಸವನ್ನು ವಿಷ್ಣುವನ್ನು ಆರಾಧಿಸುವುದರ ಮೂಲಕ ವಿಷ್ಣುವಿಗೆ ಅರ್ಪಣೆ ಮಾಡಬೇಕು.

Advertisement

ಮೂಲ – ಡಿಜಿಟಲ್‌ ಮೀಡಿಯಾ

Advertisement

Vaikuntha Ekadashi is a Hindu occasion and festival. It is primarily observed by Vaishnavas, who regard it to be a special ekadashi. It coincides with Mokshada Ekadashi or Putrada Ekadashi. It is observed on the 11th lunar day of the waxing lunar fortnight of the solar month of Dhanu.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

4 hours ago

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ

ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…

4 hours ago

ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…

4 hours ago

ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…

4 hours ago

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…

14 hours ago

ಸ್ವಾತಂತ್ರ್ಯಕ್ಕಾಗಿ ಮದುವೆ

ಕುಟುಂಬ ಎಂಬುದು ಸಮಾಜದ ಆಧಾರ ಸ್ಥಂಭ. ಮದುವೆ ಎಂಬುದು ಈ ಸ್ಥಂಭದ ತಳಪಾಯ.…

14 hours ago