Advertisement
Opinion

ಡಿ.23ಕ್ಕೆ ವೈಕುಂಠ ಏಕಾದಶಿ | ಏಳು ಜನ್ಮಗಳ ಪಾಪ ಕಳೆದು ಮೋಕ್ಷ ಸಂಪಾದಿಸುವ ದಿನ..!

Share

ಏಳು ಜನ್ಮಗಳ ಪಾಪ ಕಳೆದು ಮೋಕ್ಷ ಸಂಪಾದಿಸುವ ದಿನವೇ ವೈಕುಂಠ ಏಕಾದಶಿ(Vaikunta Ekadashi). ಧನುರ್ಮಾಸದಲ್ಲಿ(solar month of Dhanu) ಬರುವ ಏಕಾದಶಿಯನ್ನು ಮುಕ್ಕೋಟಿ ಏಕಾದಶಿ ಎಂತಲೂ ಕರೆಯುವರು. ಈ ದಿನ ದೇವಾಲಯದ ಉತ್ತರ ದ್ವಾರದಲ್ಲಿ ಹೂವಿನ ಅಲಂಕಾರ(Flower Decoration) ಮಾಡಿ ವಿಶೇಷ ಪೂಜೆ ನೆರವೇರಿಸುತ್ತಾರೆ. ಸೂರ್ಯನು(Sun) ಉತ್ತರಾಯಣಕ್ಕೆ ಬದಲಾಗುವ ಮೊದಲು ಧನುರ್ಮಾಸದ ಏಕಾದಶಿಯನ್ನು ವೈಕುಂಠ ಏಕಾದಶಿ ಎಂದು ಕರೆಯುತ್ತಾರೆ. ಸೂರ್ಯನು ಧನಸ್ಸು ರಾಶಿ ಪ್ರವೇಶ ಮಾಡಿ ಮಕರ ಸಂಕ್ರಮಣದವರೆಗೂ ಈ ರಾಶಿಯಲ್ಲಿ ಇರುತ್ತಾನೆ.

Advertisement
Advertisement
Advertisement
Advertisement

ಗರುಡವಾಹನನಾದ ವಿಷ್ಣು ವೈಕುಂಠದಿಂದ ಮೂರು ಕೋಟಿ ದೇವತೆಗಳೊಂದಿಗೆ ಭೂಲೋಕದಲ್ಲಿ ಇಳಿದು ಬಂದು ಭಕ್ತರಿಗೆ ದರ್ಶನ ನೀಡುತ್ತಾನೆ. ಆದುದರಿಂದ ಈ ದಿನವನ್ನು ಮುಕ್ಕೋಟಿ ಏಕಾದಶಿ ಎನ್ನುವರು. ಈ ದಿನ ಉಪವಾಸವಿದ್ದು ವಿಷ್ಣುವಿನ ದರ್ಶನ ಮಾಡಬೇಕು. ಮಾಸದ ಏಕಾದಶಿಯ ದಿನ ಶ್ರೀಮನ್ನಾರಾಯಣನು ಯೋಗನಿದ್ರೆಯಿಂದ ಏಳುವನು. ಈ ದಿನ ವಿಷ್ಣು ದರ್ಶನ ಮಾತ್ರದಿಂದ ವೈಕುಂಠ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಆದ್ದರಿಂದ ಈ ದಿನಕ್ಕೆ ಅಷ್ಟು ಮಹತ್ವವಿದೆ.

Advertisement

ಮಹಾವಿಷ್ಣುವು ಮುರ ಎಂಬ ರಾಕ್ಷಸನನ್ನು ಸಂಹರಿಸಿದ ದಿನವೇ ಇದು. ಬಹಳ ದಿನಗಳವರೆಗೆ ಮುರ ಅಕ್ಕಿಯಲ್ಲಿ ಬಚ್ಚಿಟ್ಟುಕೊಂಡಿದ್ದ. ಅದಕ್ಕಾಗಿ ಈ ದಿನ ಅಕ್ಕಿ ಸೇವೆನೆ ಮಾಡಬಾರದು. ಏಕಾದಶಿ ದೇವಿಯನ್ನು ಉಪವಾಸದಿಂದ ದರ್ಶನದಿಂದ ಪೂಜಿಸಿ ಪಾಪ ಪರಿಹಾರ ಮಾಡಿಕೊಳ್ಳಬೇಕು ಐದು ಜ್ಞಾನೇಂದ್ರಿಯಗಳು ಐದು ಕರ್ಮೇಂದ್ರಿಯಗಳು ಮತ್ತು ಮನಸ್ಸು ಒಟ್ಟು 11- ಹನ್ನೊಂದು ಇಂದ್ರಿಯಗಳನ್ನು ನಿಗ್ರಹ ಮಾಡಿ ಭಗವಂತನ ಅನುಗ್ರಹಕ್ಕೆ ಪಾತ್ರರಾಗಬೇಕು.

ಅಮೃತ ಮತ್ತು ಹಾಲಾಹಲ ಉದ್ಭವಿಸಿದ ದಿನವಿದು. ಶಿವ ನೀಲಕಂಠನಾದ ದಿನ. ಈ ದಿನ ದೇವರ ದರ್ಶನ ಮಾಡಿ ಹರಿ ನಾಮ ಸಂಕೀರ್ತನೆ, ವಿಷ್ಣು ಸಹಸ್ರನಾಮ ಪಾರಾಯಣ ಮಾಡಬೇಕು. ತುಳಸಿ ಎಲೆ ಅರ್ಪಿಸಬೇಕು. ಇದರಿಂದ ಮೋಕ್ಷ ಪ್ರಾಪ್ತಿ ಖಂಡಿತವಾಗಿ ಲಭಿಸುವುದು. ಪುಷ್ಯ ಮಾಸವನ್ನು ಶೂನ್ಯಮಾಸವೆಂತಲು ಕರೆಯುವರು. ಈ ಸಮಯದಲ್ಲಿ ಯಾವುದೇ ಮದುವೆ, ನಾಮಕರಣ, ಗೃಹಪ್ರವೇಶ ಮುಂತಾದ ಶುಭಕಾರ್ಯಗಳನ್ನು ಮಾಡುವುದಿಲ್ಲ. ಕಾರಣ ಇಲ್ಲಿ ಪ್ರತಿಫಲ ಶೂನ್ಯ. ಆದ್ದರಿಂದ ಈ ಪೂರ್ತಿ ಮಾಸವನ್ನು ವಿಷ್ಣುವನ್ನು ಆರಾಧಿಸುವುದರ ಮೂಲಕ ವಿಷ್ಣುವಿಗೆ ಅರ್ಪಣೆ ಮಾಡಬೇಕು.

Advertisement

ಮೂಲ – ಡಿಜಿಟಲ್‌ ಮೀಡಿಯಾ

Vaikuntha Ekadashi is a Hindu occasion and festival. It is primarily observed by Vaishnavas, who regard it to be a special ekadashi. It coincides with Mokshada Ekadashi or Putrada Ekadashi. It is observed on the 11th lunar day of the waxing lunar fortnight of the solar month of Dhanu.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

3 days ago