MIRROR FOCUS

ಕರಾವಳಿ – ಮಲೆನಾಡುಗಳಲ್ಲೂ ವಿಷರಹಿತ ಕೋಸು ಬೆಳೆ…! | ಕಾಸರಗೋಡು – ದಕ, ಉಡುಪಿಗಳಲ್ಲಿ ಕೋಸ್ ಬೆಳೆದ ರೈತರು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇರಳದಲ್ಲಾಗಲೀ(Kerala) ಕರಾವಳಿ(Coastal), ಮಲೆನಾಡಿನಲ್ಲಾಗಲೀ(Malenadu) ಹೂಕೋಸು(Cauliflower), ಎಲೆಕೋಸು(Cabbage) ಕೃಷಿ(cultivation) ಸಾಧ್ಯವಾಗುವುದಿಲ್ಲ. ಆದರೆ ಕೇರಳ ಕೃಷಿ ವಿಶ್ವವಿದ್ಯಾಲಯದ ಡಾ. ನಾರಾಯಣನ್ ಕುಟ್ಟಿ ( ಈಗ ವಿಶ್ರಾಂತ) ಅವರ ಸತತ ಪ್ರಯತ್ನದಿಂದ ಈಗ ಚಳಿಗಾಲದಲ್ಲಿ ರಾಸಾಯನಿಕ ಬಳಸದೆ ಕ್ಯಾಬೇಜ್, ಕಾಲಿಫ್ಲವರ್, ಬ್ರೊಕೊಲಿಗಳನ್ನು(Broccoli) ಕೇರಳದಾದ್ಯಂತ ಬೆಳೆಸಲು ಸಾಧ್ಯವಾಗುತ್ತಿದೆ. ಕೋಸುಗಳನ್ನು ವಾಣಿಜ್ಯ(Commercial crop) ಮಟ್ಟದಲ್ಲೂ ಬೆಳೆಯುವವರಿದ್ದಾರೆ. ಕೆಲವರು ಕಾಸರಗೋಡು(Kasargodu) ಜಿಲ್ಲೆಯಲ್ಲೂ ಬೆಳೆದು ಮಾರುತ್ತಾರೆ. ಹಾಗಾಗಿ ಉಕ, ಸಾಗರ, ಸಕ್ಲೇಶಪುರದಲ್ಲೂ ಸಾಧ್ಯ ಅನಿಸುತ್ತಿದೆ.

Advertisement
Advertisement

ಕೆಲವೊಂದು ನಿರ್ದಿಷ್ಟ ತಳಿಗಳು ಮಾತ್ರ ಈ ಪ್ರದೇಶದಲ್ಲಿ ಬೆಳೆ ಕೊಡುತ್ತದೆ. ಈ ತಳಿಗಳಲ್ಲಿ ಹಲವನ್ನು ಕೇಕೃವಿಯವರು ಗುರುತಿಸಿ ಪ್ರಕಟಿಸಿದ್ದಾರೆ. ಆಯ್ಕೆ ಮಾಡುವ ತಳಿ ಬಹಳ ಮುಖ್ಯ. ನಮ್ಮಲ್ಲಿಗೆ ಹೊಂದದ ತಳಿಯಾದರೆ, ಅದು ಎಲೆ ಬೆಳೆಸೀತು ಆದರೆ ಹೂಕೋಸು, ಎಲೆಕೋಸುಗಳ ಖಾದ್ಯ ಭಾಗ ಬೆಳೆಯದು! ನೆಂಟರು – ಸ್ನೇಹಿತರ ಬಳಿ ಹೇಳಿ ಯಾವುದೋ ತಳಿಯ ಬೀಜ ಬಿತ್ತಿ ಬೆಳೆದು ಸೋತವರಿದ್ದಾರೆ.

“ ಈ ಬೆಳೆಗಳಿಗೆ ರಾತ್ರಿ ಸೂಕ್ತ ಉಷ್ಣತೆ ಇರಬೇಕು. ಹಗಲಿನದು ಲೆಕ್ಕವಿಲ್ಲ. 15ರಿಂದ 20 ಡಿಗ್ರಿ ಸೆಲ್ಶಿಯಸ್ ಅತ್ಯುತ್ತಮ. 18ರಿಂದ 22ರ ವರೆಗೂ ನಡೆಯುತ್ತದೆ. ಈ ಉಷ್ಣತೆಯ ಶ್ರೇಣಿ ಇರುವಲ್ಲಿ ಬೆಳೆಸಬಹುದು” ಎನ್ನುತ್ತಾರೆ ನಾರಾಯಣನ್ ಕುಟ್ಟಿ. ಕೋಸಿನದು ಎರಡೂವರೆ ತಿಂಗಳ ಬೆಳೆ. ನವೆಂಬರ್ ಮೊದಲ ವಾರದಲ್ಲಿ ನೆಡಬೇಕು. ದಶಂಬರ ಮೊದಲ ವಾರಕ್ಕಿಂತ ತಡ ಆಗಬಾರದು. ಕಾಸರಗೋಡು, ದಕ, ಉಡುಪಿ ಜಿಲ್ಲೆಗಳಲ್ಲಿ ಮನೆ ಮಟ್ಟಿಗೆ ಕೋಸು ಬೆಳೆದು ಗೆದ್ದವರಿದ್ದಾರೆ. ಉಕ, ಸಾಗರ, ಚಿಕ್ಕಮಗಳೂರು ಊರುಗಳಲ್ಲಿ ಸಾಧ್ಯವೇ? ಹವಾಮಾನದ ಅಂಕಿ-ಅಂಶ ಗಮನಿಸಿದರೆ ಸಾಧ್ಯ. ಕೃಷಿಯ ಪ್ರಯೋಗ ಮಾಡಬೇಕಾದರೆ ಸೂಕ್ತ ತಳಿಯ ಬೀಜ ಬೇಕು. ಅದನ್ನು ಪ್ರೋ ಟ್ರೇಯಲ್ಲಿ ಗಿಡ ಮಾಡಲು ಕಲಿಯಬೇಕು. “ಫೆಬ್ರವರಿ 15ರೊಳಗೆ ಕೊಯ್ಲು ಮುಗಿಯಬೇಕು. ಅನಂತರ ರಾತ್ರಿಯ ಉಷ್ಣತೆ ಏರುತ್ತದೆ” ಎನ್ನುತ್ತಾರೆ ಡಾ. ನಾರಾಯಣನ್ ಕುಟ್ಟಿ. ಪ್ರಯೋಗಕ್ಕೆ ಮುಂದಾಗುವ ಆಸಕ್ತರಿದ್ದಾರೆಯೇ?

ಬರಹ :
ಶ್ರೀ ಪಡ್ರೆ
, ಸಂಪಾದಕರು, ಅಡಿಕೆ ಪತ್ರಿಕೆ ( ತಮ್ಮ ಪೇಸ್‌ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದರು )
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

2 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

10 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

10 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

10 hours ago

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ…

11 hours ago