Advertisement
MIRROR FOCUS

ಕರಾವಳಿ – ಮಲೆನಾಡುಗಳಲ್ಲೂ ವಿಷರಹಿತ ಕೋಸು ಬೆಳೆ…! | ಕಾಸರಗೋಡು – ದಕ, ಉಡುಪಿಗಳಲ್ಲಿ ಕೋಸ್ ಬೆಳೆದ ರೈತರು

Share

ಕೇರಳದಲ್ಲಾಗಲೀ(Kerala) ಕರಾವಳಿ(Coastal), ಮಲೆನಾಡಿನಲ್ಲಾಗಲೀ(Malenadu) ಹೂಕೋಸು(Cauliflower), ಎಲೆಕೋಸು(Cabbage) ಕೃಷಿ(cultivation) ಸಾಧ್ಯವಾಗುವುದಿಲ್ಲ. ಆದರೆ ಕೇರಳ ಕೃಷಿ ವಿಶ್ವವಿದ್ಯಾಲಯದ ಡಾ. ನಾರಾಯಣನ್ ಕುಟ್ಟಿ ( ಈಗ ವಿಶ್ರಾಂತ) ಅವರ ಸತತ ಪ್ರಯತ್ನದಿಂದ ಈಗ ಚಳಿಗಾಲದಲ್ಲಿ ರಾಸಾಯನಿಕ ಬಳಸದೆ ಕ್ಯಾಬೇಜ್, ಕಾಲಿಫ್ಲವರ್, ಬ್ರೊಕೊಲಿಗಳನ್ನು(Broccoli) ಕೇರಳದಾದ್ಯಂತ ಬೆಳೆಸಲು ಸಾಧ್ಯವಾಗುತ್ತಿದೆ. ಕೋಸುಗಳನ್ನು ವಾಣಿಜ್ಯ(Commercial crop) ಮಟ್ಟದಲ್ಲೂ ಬೆಳೆಯುವವರಿದ್ದಾರೆ. ಕೆಲವರು ಕಾಸರಗೋಡು(Kasargodu) ಜಿಲ್ಲೆಯಲ್ಲೂ ಬೆಳೆದು ಮಾರುತ್ತಾರೆ. ಹಾಗಾಗಿ ಉಕ, ಸಾಗರ, ಸಕ್ಲೇಶಪುರದಲ್ಲೂ ಸಾಧ್ಯ ಅನಿಸುತ್ತಿದೆ.

ಕೆಲವೊಂದು ನಿರ್ದಿಷ್ಟ ತಳಿಗಳು ಮಾತ್ರ ಈ ಪ್ರದೇಶದಲ್ಲಿ ಬೆಳೆ ಕೊಡುತ್ತದೆ. ಈ ತಳಿಗಳಲ್ಲಿ ಹಲವನ್ನು ಕೇಕೃವಿಯವರು ಗುರುತಿಸಿ ಪ್ರಕಟಿಸಿದ್ದಾರೆ. ಆಯ್ಕೆ ಮಾಡುವ ತಳಿ ಬಹಳ ಮುಖ್ಯ. ನಮ್ಮಲ್ಲಿಗೆ ಹೊಂದದ ತಳಿಯಾದರೆ, ಅದು ಎಲೆ ಬೆಳೆಸೀತು ಆದರೆ ಹೂಕೋಸು, ಎಲೆಕೋಸುಗಳ ಖಾದ್ಯ ಭಾಗ ಬೆಳೆಯದು! ನೆಂಟರು – ಸ್ನೇಹಿತರ ಬಳಿ ಹೇಳಿ ಯಾವುದೋ ತಳಿಯ ಬೀಜ ಬಿತ್ತಿ ಬೆಳೆದು ಸೋತವರಿದ್ದಾರೆ.

“ ಈ ಬೆಳೆಗಳಿಗೆ ರಾತ್ರಿ ಸೂಕ್ತ ಉಷ್ಣತೆ ಇರಬೇಕು. ಹಗಲಿನದು ಲೆಕ್ಕವಿಲ್ಲ. 15ರಿಂದ 20 ಡಿಗ್ರಿ ಸೆಲ್ಶಿಯಸ್ ಅತ್ಯುತ್ತಮ. 18ರಿಂದ 22ರ ವರೆಗೂ ನಡೆಯುತ್ತದೆ. ಈ ಉಷ್ಣತೆಯ ಶ್ರೇಣಿ ಇರುವಲ್ಲಿ ಬೆಳೆಸಬಹುದು” ಎನ್ನುತ್ತಾರೆ ನಾರಾಯಣನ್ ಕುಟ್ಟಿ. ಕೋಸಿನದು ಎರಡೂವರೆ ತಿಂಗಳ ಬೆಳೆ. ನವೆಂಬರ್ ಮೊದಲ ವಾರದಲ್ಲಿ ನೆಡಬೇಕು. ದಶಂಬರ ಮೊದಲ ವಾರಕ್ಕಿಂತ ತಡ ಆಗಬಾರದು. ಕಾಸರಗೋಡು, ದಕ, ಉಡುಪಿ ಜಿಲ್ಲೆಗಳಲ್ಲಿ ಮನೆ ಮಟ್ಟಿಗೆ ಕೋಸು ಬೆಳೆದು ಗೆದ್ದವರಿದ್ದಾರೆ. ಉಕ, ಸಾಗರ, ಚಿಕ್ಕಮಗಳೂರು ಊರುಗಳಲ್ಲಿ ಸಾಧ್ಯವೇ? ಹವಾಮಾನದ ಅಂಕಿ-ಅಂಶ ಗಮನಿಸಿದರೆ ಸಾಧ್ಯ. ಕೃಷಿಯ ಪ್ರಯೋಗ ಮಾಡಬೇಕಾದರೆ ಸೂಕ್ತ ತಳಿಯ ಬೀಜ ಬೇಕು. ಅದನ್ನು ಪ್ರೋ ಟ್ರೇಯಲ್ಲಿ ಗಿಡ ಮಾಡಲು ಕಲಿಯಬೇಕು. “ಫೆಬ್ರವರಿ 15ರೊಳಗೆ ಕೊಯ್ಲು ಮುಗಿಯಬೇಕು. ಅನಂತರ ರಾತ್ರಿಯ ಉಷ್ಣತೆ ಏರುತ್ತದೆ” ಎನ್ನುತ್ತಾರೆ ಡಾ. ನಾರಾಯಣನ್ ಕುಟ್ಟಿ. ಪ್ರಯೋಗಕ್ಕೆ ಮುಂದಾಗುವ ಆಸಕ್ತರಿದ್ದಾರೆಯೇ?

ಬರಹ :
ಶ್ರೀ ಪಡ್ರೆ
, ಸಂಪಾದಕರು, ಅಡಿಕೆ ಪತ್ರಿಕೆ ( ತಮ್ಮ ಪೇಸ್‌ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದರು )
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

7 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

7 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

7 hours ago

ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ

ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…

7 hours ago

ಕ್ಯಾನ್ಸರ್ ಗುಣಪಡಿಸಲು ಗೋವಿನ ಉತ್ಪನ್ನಗಳು | ಮಧ್ಯಪ್ರದೇಶ ಸರ್ಕಾರ ಸಂಶೋಧನೆಗೆ 3.5 ಕೋಟಿ ಖರ್ಚು ಮಾಡಿದ ಹಣ ಎಲ್ಲಿ?

ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…

7 hours ago

ಭಾರತದ 44% ನಗರಗಳು ದೀರ್ಘಕಾಲದ ವಾಯು ಮಾಲಿನ್ಯ ಸಂಕಟದಲ್ಲಿ| CREA ಉಪಗ್ರಹ ಅಧ್ಯಯನದ ಶಾಕಿಂಗ್ ಬಹಿರಂಗ

ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…

7 hours ago