Advertisement
MIRROR FOCUS

ಕರಾವಳಿ – ಮಲೆನಾಡುಗಳಲ್ಲೂ ವಿಷರಹಿತ ಕೋಸು ಬೆಳೆ…! | ಕಾಸರಗೋಡು – ದಕ, ಉಡುಪಿಗಳಲ್ಲಿ ಕೋಸ್ ಬೆಳೆದ ರೈತರು

Share

ಕೇರಳದಲ್ಲಾಗಲೀ(Kerala) ಕರಾವಳಿ(Coastal), ಮಲೆನಾಡಿನಲ್ಲಾಗಲೀ(Malenadu) ಹೂಕೋಸು(Cauliflower), ಎಲೆಕೋಸು(Cabbage) ಕೃಷಿ(cultivation) ಸಾಧ್ಯವಾಗುವುದಿಲ್ಲ. ಆದರೆ ಕೇರಳ ಕೃಷಿ ವಿಶ್ವವಿದ್ಯಾಲಯದ ಡಾ. ನಾರಾಯಣನ್ ಕುಟ್ಟಿ ( ಈಗ ವಿಶ್ರಾಂತ) ಅವರ ಸತತ ಪ್ರಯತ್ನದಿಂದ ಈಗ ಚಳಿಗಾಲದಲ್ಲಿ ರಾಸಾಯನಿಕ ಬಳಸದೆ ಕ್ಯಾಬೇಜ್, ಕಾಲಿಫ್ಲವರ್, ಬ್ರೊಕೊಲಿಗಳನ್ನು(Broccoli) ಕೇರಳದಾದ್ಯಂತ ಬೆಳೆಸಲು ಸಾಧ್ಯವಾಗುತ್ತಿದೆ. ಕೋಸುಗಳನ್ನು ವಾಣಿಜ್ಯ(Commercial crop) ಮಟ್ಟದಲ್ಲೂ ಬೆಳೆಯುವವರಿದ್ದಾರೆ. ಕೆಲವರು ಕಾಸರಗೋಡು(Kasargodu) ಜಿಲ್ಲೆಯಲ್ಲೂ ಬೆಳೆದು ಮಾರುತ್ತಾರೆ. ಹಾಗಾಗಿ ಉಕ, ಸಾಗರ, ಸಕ್ಲೇಶಪುರದಲ್ಲೂ ಸಾಧ್ಯ ಅನಿಸುತ್ತಿದೆ.

ಕೆಲವೊಂದು ನಿರ್ದಿಷ್ಟ ತಳಿಗಳು ಮಾತ್ರ ಈ ಪ್ರದೇಶದಲ್ಲಿ ಬೆಳೆ ಕೊಡುತ್ತದೆ. ಈ ತಳಿಗಳಲ್ಲಿ ಹಲವನ್ನು ಕೇಕೃವಿಯವರು ಗುರುತಿಸಿ ಪ್ರಕಟಿಸಿದ್ದಾರೆ. ಆಯ್ಕೆ ಮಾಡುವ ತಳಿ ಬಹಳ ಮುಖ್ಯ. ನಮ್ಮಲ್ಲಿಗೆ ಹೊಂದದ ತಳಿಯಾದರೆ, ಅದು ಎಲೆ ಬೆಳೆಸೀತು ಆದರೆ ಹೂಕೋಸು, ಎಲೆಕೋಸುಗಳ ಖಾದ್ಯ ಭಾಗ ಬೆಳೆಯದು! ನೆಂಟರು – ಸ್ನೇಹಿತರ ಬಳಿ ಹೇಳಿ ಯಾವುದೋ ತಳಿಯ ಬೀಜ ಬಿತ್ತಿ ಬೆಳೆದು ಸೋತವರಿದ್ದಾರೆ.

“ ಈ ಬೆಳೆಗಳಿಗೆ ರಾತ್ರಿ ಸೂಕ್ತ ಉಷ್ಣತೆ ಇರಬೇಕು. ಹಗಲಿನದು ಲೆಕ್ಕವಿಲ್ಲ. 15ರಿಂದ 20 ಡಿಗ್ರಿ ಸೆಲ್ಶಿಯಸ್ ಅತ್ಯುತ್ತಮ. 18ರಿಂದ 22ರ ವರೆಗೂ ನಡೆಯುತ್ತದೆ. ಈ ಉಷ್ಣತೆಯ ಶ್ರೇಣಿ ಇರುವಲ್ಲಿ ಬೆಳೆಸಬಹುದು” ಎನ್ನುತ್ತಾರೆ ನಾರಾಯಣನ್ ಕುಟ್ಟಿ. ಕೋಸಿನದು ಎರಡೂವರೆ ತಿಂಗಳ ಬೆಳೆ. ನವೆಂಬರ್ ಮೊದಲ ವಾರದಲ್ಲಿ ನೆಡಬೇಕು. ದಶಂಬರ ಮೊದಲ ವಾರಕ್ಕಿಂತ ತಡ ಆಗಬಾರದು. ಕಾಸರಗೋಡು, ದಕ, ಉಡುಪಿ ಜಿಲ್ಲೆಗಳಲ್ಲಿ ಮನೆ ಮಟ್ಟಿಗೆ ಕೋಸು ಬೆಳೆದು ಗೆದ್ದವರಿದ್ದಾರೆ. ಉಕ, ಸಾಗರ, ಚಿಕ್ಕಮಗಳೂರು ಊರುಗಳಲ್ಲಿ ಸಾಧ್ಯವೇ? ಹವಾಮಾನದ ಅಂಕಿ-ಅಂಶ ಗಮನಿಸಿದರೆ ಸಾಧ್ಯ. ಕೃಷಿಯ ಪ್ರಯೋಗ ಮಾಡಬೇಕಾದರೆ ಸೂಕ್ತ ತಳಿಯ ಬೀಜ ಬೇಕು. ಅದನ್ನು ಪ್ರೋ ಟ್ರೇಯಲ್ಲಿ ಗಿಡ ಮಾಡಲು ಕಲಿಯಬೇಕು. “ಫೆಬ್ರವರಿ 15ರೊಳಗೆ ಕೊಯ್ಲು ಮುಗಿಯಬೇಕು. ಅನಂತರ ರಾತ್ರಿಯ ಉಷ್ಣತೆ ಏರುತ್ತದೆ” ಎನ್ನುತ್ತಾರೆ ಡಾ. ನಾರಾಯಣನ್ ಕುಟ್ಟಿ. ಪ್ರಯೋಗಕ್ಕೆ ಮುಂದಾಗುವ ಆಸಕ್ತರಿದ್ದಾರೆಯೇ?

ಬರಹ :
ಶ್ರೀ ಪಡ್ರೆ
, ಸಂಪಾದಕರು, ಅಡಿಕೆ ಪತ್ರಿಕೆ ( ತಮ್ಮ ಪೇಸ್‌ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದರು )
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

26 minutes ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

6 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

22 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

23 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

2 days ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

2 days ago