Advertisement
MIRROR FOCUS

ಕರಾವಳಿ – ಮಲೆನಾಡುಗಳಲ್ಲೂ ವಿಷರಹಿತ ಕೋಸು ಬೆಳೆ…! | ಕಾಸರಗೋಡು – ದಕ, ಉಡುಪಿಗಳಲ್ಲಿ ಕೋಸ್ ಬೆಳೆದ ರೈತರು

Share

ಕೇರಳದಲ್ಲಾಗಲೀ(Kerala) ಕರಾವಳಿ(Coastal), ಮಲೆನಾಡಿನಲ್ಲಾಗಲೀ(Malenadu) ಹೂಕೋಸು(Cauliflower), ಎಲೆಕೋಸು(Cabbage) ಕೃಷಿ(cultivation) ಸಾಧ್ಯವಾಗುವುದಿಲ್ಲ. ಆದರೆ ಕೇರಳ ಕೃಷಿ ವಿಶ್ವವಿದ್ಯಾಲಯದ ಡಾ. ನಾರಾಯಣನ್ ಕುಟ್ಟಿ ( ಈಗ ವಿಶ್ರಾಂತ) ಅವರ ಸತತ ಪ್ರಯತ್ನದಿಂದ ಈಗ ಚಳಿಗಾಲದಲ್ಲಿ ರಾಸಾಯನಿಕ ಬಳಸದೆ ಕ್ಯಾಬೇಜ್, ಕಾಲಿಫ್ಲವರ್, ಬ್ರೊಕೊಲಿಗಳನ್ನು(Broccoli) ಕೇರಳದಾದ್ಯಂತ ಬೆಳೆಸಲು ಸಾಧ್ಯವಾಗುತ್ತಿದೆ. ಕೋಸುಗಳನ್ನು ವಾಣಿಜ್ಯ(Commercial crop) ಮಟ್ಟದಲ್ಲೂ ಬೆಳೆಯುವವರಿದ್ದಾರೆ. ಕೆಲವರು ಕಾಸರಗೋಡು(Kasargodu) ಜಿಲ್ಲೆಯಲ್ಲೂ ಬೆಳೆದು ಮಾರುತ್ತಾರೆ. ಹಾಗಾಗಿ ಉಕ, ಸಾಗರ, ಸಕ್ಲೇಶಪುರದಲ್ಲೂ ಸಾಧ್ಯ ಅನಿಸುತ್ತಿದೆ.

ಕೆಲವೊಂದು ನಿರ್ದಿಷ್ಟ ತಳಿಗಳು ಮಾತ್ರ ಈ ಪ್ರದೇಶದಲ್ಲಿ ಬೆಳೆ ಕೊಡುತ್ತದೆ. ಈ ತಳಿಗಳಲ್ಲಿ ಹಲವನ್ನು ಕೇಕೃವಿಯವರು ಗುರುತಿಸಿ ಪ್ರಕಟಿಸಿದ್ದಾರೆ. ಆಯ್ಕೆ ಮಾಡುವ ತಳಿ ಬಹಳ ಮುಖ್ಯ. ನಮ್ಮಲ್ಲಿಗೆ ಹೊಂದದ ತಳಿಯಾದರೆ, ಅದು ಎಲೆ ಬೆಳೆಸೀತು ಆದರೆ ಹೂಕೋಸು, ಎಲೆಕೋಸುಗಳ ಖಾದ್ಯ ಭಾಗ ಬೆಳೆಯದು! ನೆಂಟರು – ಸ್ನೇಹಿತರ ಬಳಿ ಹೇಳಿ ಯಾವುದೋ ತಳಿಯ ಬೀಜ ಬಿತ್ತಿ ಬೆಳೆದು ಸೋತವರಿದ್ದಾರೆ.

“ ಈ ಬೆಳೆಗಳಿಗೆ ರಾತ್ರಿ ಸೂಕ್ತ ಉಷ್ಣತೆ ಇರಬೇಕು. ಹಗಲಿನದು ಲೆಕ್ಕವಿಲ್ಲ. 15ರಿಂದ 20 ಡಿಗ್ರಿ ಸೆಲ್ಶಿಯಸ್ ಅತ್ಯುತ್ತಮ. 18ರಿಂದ 22ರ ವರೆಗೂ ನಡೆಯುತ್ತದೆ. ಈ ಉಷ್ಣತೆಯ ಶ್ರೇಣಿ ಇರುವಲ್ಲಿ ಬೆಳೆಸಬಹುದು” ಎನ್ನುತ್ತಾರೆ ನಾರಾಯಣನ್ ಕುಟ್ಟಿ. ಕೋಸಿನದು ಎರಡೂವರೆ ತಿಂಗಳ ಬೆಳೆ. ನವೆಂಬರ್ ಮೊದಲ ವಾರದಲ್ಲಿ ನೆಡಬೇಕು. ದಶಂಬರ ಮೊದಲ ವಾರಕ್ಕಿಂತ ತಡ ಆಗಬಾರದು. ಕಾಸರಗೋಡು, ದಕ, ಉಡುಪಿ ಜಿಲ್ಲೆಗಳಲ್ಲಿ ಮನೆ ಮಟ್ಟಿಗೆ ಕೋಸು ಬೆಳೆದು ಗೆದ್ದವರಿದ್ದಾರೆ. ಉಕ, ಸಾಗರ, ಚಿಕ್ಕಮಗಳೂರು ಊರುಗಳಲ್ಲಿ ಸಾಧ್ಯವೇ? ಹವಾಮಾನದ ಅಂಕಿ-ಅಂಶ ಗಮನಿಸಿದರೆ ಸಾಧ್ಯ. ಕೃಷಿಯ ಪ್ರಯೋಗ ಮಾಡಬೇಕಾದರೆ ಸೂಕ್ತ ತಳಿಯ ಬೀಜ ಬೇಕು. ಅದನ್ನು ಪ್ರೋ ಟ್ರೇಯಲ್ಲಿ ಗಿಡ ಮಾಡಲು ಕಲಿಯಬೇಕು. “ಫೆಬ್ರವರಿ 15ರೊಳಗೆ ಕೊಯ್ಲು ಮುಗಿಯಬೇಕು. ಅನಂತರ ರಾತ್ರಿಯ ಉಷ್ಣತೆ ಏರುತ್ತದೆ” ಎನ್ನುತ್ತಾರೆ ಡಾ. ನಾರಾಯಣನ್ ಕುಟ್ಟಿ. ಪ್ರಯೋಗಕ್ಕೆ ಮುಂದಾಗುವ ಆಸಕ್ತರಿದ್ದಾರೆಯೇ?

ಬರಹ :
ಶ್ರೀ ಪಡ್ರೆ
, ಸಂಪಾದಕರು, ಅಡಿಕೆ ಪತ್ರಿಕೆ ( ತಮ್ಮ ಪೇಸ್‌ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದರು )
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

11 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

19 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 day ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

1 day ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

1 day ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

1 day ago