Advertisement
MIRROR FOCUS

ಫೆ.25 ರಂದು ನಡೆಯಲಿರುವ ನಮ್ಮ ಕರಾವಳಿ ಉತ್ಸವದಲ್ಲಿ ಒಂದು ಲಕ್ಷ ಜನ ಭಾಗಿಯಾಗೋ ನಿರೀಕ್ಷೆ

Share

ನಮ್ಮ ಕರಾವಳಿ ಉತ್ಸವಕ್ಕೆ(Karavali Utsava) ಒಂದು ಲಕ್ಷ ಜನ ಸೇರುವ ನಿರೀಕ್ಷೆ ಎಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ(Bengaluru press club) ಪೂರ್ವಭಾವಿಯಾಗಿ ಸುದ್ದಿಗೋಷ್ಟಿ ನಡೆಸಿದ ಕರಾವಳಿ ಒಕ್ಕೂಟ ಬೆಂಗಳೂರಿನ ಅಧ್ಯಕ್ಷ ಕೆ. ಸುಬ್ರಾಯ ಭಟ್ ಹೇಳಿದ್ದಾರೆ. ಬೆಂಗಳೂರಿನ ಜೆ.ಪಿ ನಗರದ ಆರ್ ಬಿ ಐ ಲೇಔಟ್(RBI Lau Out) ಬಿಬಿಎಂಪಿ(BBMP) ಆಟದ ಮೈದಾನದಲ್ಲಿ ನಮ್ಮ ಕರಾವಳಿ ಉತ್ಸವ ಆಯೋಜಿಸಲಾಗಿದೆ. ಕರಾವಳಿಗರ ಒಕ್ಕೂಟ (ರಿ)ಬೆಂಗಳೂರು ಇವರ ನೇತೃತ್ವದಲ್ಲಿ ಫೆಬ್ರವರಿ 25ರ ಭಾನುವಾರ ನಮ್ಮ ಕರಾವಳಿ ಉತ್ಸವ ನಡೆಯಲಿದೆ.

ಈ ಉತ್ಸವದಲ್ಲಿ ಕರಾವಳಿಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಮನು ಹಂದಾಡಿ ಯವರಿಂದ ನಗೆ ಹಬ್ಬ, ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ಮೂಡಬಿದ್ರೆ ಇವರ ನಗೆ ಬುಗ್ಗೆ, ಅಂಭಾಭವಾನಿ ಮರಾಠಿ ಸಾಂಸ್ಕೃತಿಕ ಕಲಾ ವೇದಿಕೆ (ರಿ) ಪರ್ಕಳ ಇವರಿಂದ ಕರಾವಳಿ ಕಲಾ ವೈಭವ, ಹುಲಿ ಕುಣಿತ, ಮಹಾಗಣಪತಿ ಯಕ್ಷಗಾನ ಮಂಡಳಿ ನಡೂರು ಮಂದಾರ್ತಿ ಇವರಿಂದ ಶಿವದೂತ ಪಂಜುರ್ಲಿ ಯಕ್ಷಗಾನ, ಕರಾವಳಿಯ ಹುಲಿವೇಷ, ಗ್ರಾಮೀಣ ಕ್ರೀಡೆಗಳಾದ ಹಗ್ಗ ಜಗ್ಗಾಟ, ಮಡಿಕೆ ಒಡೆಯುವ ಸ್ಪರ್ಧೆ, ಚುಕ್ಕಿ ರಂಗೋಲಿ, ಚಿತ್ರಕಲೆ, ಕೊಟ್ಟೆ ಕಟ್ಟುವ ಸ್ಪರ್ಧೆ ಹಾಗೂ ಇನ್ನೂ ಹಲವಾರು ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ಕರಾವಳಿಯ ಸ್ವಾದಿಷ್ಟ ಖಾದ್ಯಗಳ ಆಹಾರ ಮೇಳ ದಲ್ಲಿ ರುಚಿ ರುಚಿಯ ಕರಾವಳಿ ಖಾದ್ಯಗಳ ಅನಾವರಣ ನಡೆಯಲಿದ್ದು ವಿಶೇಷ ತಿಂಡಿ ತಿನಿಸುಗಳು ಜನರನ್ನ ಆಕರ್ಷಿಸಲಿದೆ‌. ಸುಮಾರು ಒಂದು‌ ಲಕ್ಷಕ್ಕೂ ಹೆಚ್ಚು ಜನ ಈ ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆಯಿದ್ದು ಅದಕ್ಕೆ ಬೇಕಾದ ಸಿದ್ದತೆ ಮಾಡಲಾಗಿದೆ. ಪ್ರಸಿದ್ದ ನಟ ನಟಿಯರು, ಪ್ರಮುಖ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ‌ ಎಂದು ಕರಾವಳಿ ಒಕ್ಕೂಟದ ಅಧ್ಯಕ್ಷರಾದ ಕೆ.ಸುಬ್ರಾಯ್ ಭಟ್ ಮಾಹಿತಿ ಹಂಚಿಕೊಂಡಿದ್ದಾರೆ.ಹಾಗೇ ಕರಾವಳಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಚರಣ್ ಬೈಂದೂರ್ ಮಾತನಾಡಿ ಕಾಸರಗೋಡು ನಿಂದ ಕಾರವಾರದ ವರೆಗಿನ ಕರಾವಳಿಗರನ್ನು ಸೇರಿಸಿಕೊಂಡು ಕರಾವಳಿ ಉತ್ಸವ ಮಾಡುತ್ತಿದ್ದೆವೆ.

ಕರಾವಳಿ ಕಂಪನ್ನ ಎಲ್ಲೆಡೆ ಪಸರಿಸಬೇಕು: ಭೂತಾರಾಧನೆ, ಹುಲಿ ಕುಣಿತ,ಯಕ್ಷಗಾನ, ಅಹಾರ,ಆಚಾರ ವಿಚಾರವನ್ನು ಹೆಚ್ಚಿನ ಬೆಂಗಳೂರಿನ ಜನರಿಗೆ ತಲುಪಿಸುವ ಕೆಲಸ ಮಾಡಬೇಕಿದ್ದು ಈ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದೆ.ಹಾಗೇ ಬೆಳಗ್ಗೆ ೯ ಕ್ಕೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು ರಾತ್ರಿಯವರೆಗೂ ಕಾರ್ಯಕ್ರಮ ನಡೆಯಲಿದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಬಿ ಆರ್ ದೇವಾಡಿಗ,ಮಂಜುನಾಥ್ ಸಿ, ಸಂಘಟನಾ ಕಾರ್ಯದರ್ಶಿ ಸುರೇಶ್ ಪೈ ಸೇರಿ ಹಲವರು ಉಪಸ್ಥಿತರಿದ್ದರು.

The President of the Coastal Federation of Bengaluru, K.K. Subraya Bhatt said. Our Coastal Utsav is organized at BBMP Playground, RBI Lau Out, JP Nagar, Bangalore. Our Coastal Utsav will be held on Sunday, February 25 under the leadership of Coastal Association (Re)Bangalore.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 15-03-2026 | ಬಿಸಿಲಿನ ಮಧ್ಯೆ ಮಳೆ ಅಬ್ಬರ – ರಾಜ್ಯದ ಹಲವೆಡೆ ಸಂಜೆ ಗುಡುಗು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

7 hours ago

ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ

ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…

8 hours ago

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

24 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

1 day ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

2 days ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

2 days ago