ಕೃಷಿ ಭೂಮಿ ಉಳಿಸಿಕೊಳ್ಳಲು- ಆರೋಗ್ಯ ಕಾಪಾಡಲು ಸಾವಯವ ಕೃಷಿಯತ್ತ ಒಲವು ಬೆಳೆಸಿ | ಐಐಟಿ ನಿರ್ದೇಶಕ ಡಾ.ವೆಂಕಪ್ಪಯ್ಯ ಆರ್. ದೇಸಾಯಿ

November 23, 2024
6:12 AM

ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು ಧಾರವಾಡದ ಐಐಟಿ ನಿರ್ದೇಶಕ ಡಾ.ವೆಂಕಪ್ಪಯ್ಯ ಆರ್. ದೇಸಾಯಿ ಹೇಳಿದ್ದಾರೆ.

ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಜರುಗಿದ 19ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವದಲ್ಲಿಯೇ ಸರ್ವಾಧಿಕ ಕೃಷಿ ಯೋಗ್ಯ ಭೂಮಿಯ ಪ್ರಮಾಣವಿರುವ ಕೆಲವೇ ದೇಶಗಳಲ್ಲಿ ಭಾರತ ಕೂಡ ಒಂದಾಗಿದ್ದು, ಪ್ರತಿಶತ 40-45 ರಷ್ಟು ಕೃಷಿಗೆ ಯೋಗ್ಯವಾದ ಭೂಮಿ ಇದೆ. ಅದನ್ನು ಹಾಗೆಯೇ ಉಳಿಸಿಕೊಂಡು ಹೋಗುವುದು ಸವಾಲಾಗಿ ಪರಿಣಮಿಸಿದೆ ಎಂದರು. ಇದ್ದ ಭೂಮಿಯಲ್ಲಿ ಸಾವಯವ ಕೃಷಿ ಪದ್ದತಿ ಬಳಸಿಕೊಂಡು ಹೆಚ್ಚು ಆರೋಗ್ಯದ ಜೊತೆಗೆ ಹೆಚ್ಚು ಆದಾಯ ಪಡೆಯುವ ಕೆಲಸವಾಗಬೇಕು. ಸಾವಯವ ಕೃಷಿ ಪದ್ಧತಿಯಿಂದ ಭೂಮಿ ಫಲವತ್ತತೆಯನ್ನು ಉಳಿಸಿಕೊಳ್ಳಲು ಸಾಧ್ಯ. ಇದರಿಂದ ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಪಡೆಯಬಹುದಾಗಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror