Advertisement
City mirror

ಮಳೆಗೆ ಕೊಳೆತ ಈರುಳ್ಳಿ | ಬೆಲೆಯ ಸಂತಸಕ್ಕೆ ತಣ್ಣೀರು | ಈರುಳ್ಳಿ ಬೆಳೆಗಾರನ ಸಂಕಷ್ಟ

Share
ರಾಜ್ಯದ ವಿವಿದೆಡೆ ಭಾರೀ ಮಳೆಯಾಗಿದೆ. ಅದರಲ್ಲೂ ಉತ್ತರ ಕರ್ನಾಟಕದಲ್ಲಿ  ಸುರಿದ ಮಳೆಗೆ ರೈತರು ಕಂಗಾಲಾಗುವಂತೆ ಮಾಡಿದೆ. ಕೊಪ್ಪಳ ಜಿಲ್ಲೆಯಾದ್ಯಂತ ಸುರಿದ ಮಳೆಗೆ ಈರುಳ್ಳಿ ಬೆಳೆಗಾರರು ಸಂಕಷ್ಟ ಅನುಭವಿಸುವಂತಾಗಿದೆ. ಸತತವಾಗಿ ಸುರಿದ ಮಳೆಗೆ ಈರುಳ್ಳಿ ಕೊಳೆಯುವಂತೆ ಮಾಡಿದೆ. ಇದರಿಂದ ಬೆಲೆ ಇದ್ದರೂ ರೈತರು ಕಣ್ಣೀರು ಸುರಿಸುವಂತಾಗಿದೆ.

ಮಳೆ ಇಲ್ಲ ಎಂದು ನೊಂದಿದ್ದ ರೈತರಿಗೆ ಮಳೆಯಾದರೆ ಸಾಕು ಎಂಬ ಪ್ರಾರ್ಥನೆ ಇತ್ತು. ಆದರೆ ಇದೀಗ 3 ದಿನಗಳ ಮಳೆ ಈರುಳ್ಳಿ ಬೆಳೆದ ರೈತರಿಗೆ ಸಂಕಷ್ಟ ಈಡು ಮಾಡಿದೆ. ಈರುಳ್ಳಿ ಕಟಾವು ಹಂತಕ್ಕೆ ಬರುವಾಗ ಧಾರಾಕಾರ ಮಳೆ ಸುರಿದು ಕೊಳೆಯುವ ಹಂತಕ್ಕೆ ಬಂದಿದೆ. ಹೀಗಾಗಿ ಬೆಳೆದ ಬೆಳೆ ನಾಶವಾಗುವ ಸ್ಥಿತಿ ಬಂದಿದೆ.ಕೊಪ್ಪಳ ಜಿಲ್ಲೆಯ ಕೆಲವು ಭಾಗದ ರೈತರು ಈಗಾಗಲೇ ಈರುಳ್ಳಿ ಕಟಾವು ಮಾಡಿದ್ದರು. ಆದರೆ ಹಲವು ರೈತರು ಇನ್ನೂ ಕಟಾವು ಮಾಡಲು ಬಾಕಿ ಇದ್ದಾರೆ. ಕಿತ್ತು ಹಾಕಿರುವ ಈರುಳ್ಳಿ ಕೆಲವೆಡೆ  ನೆಲದ ‌ ಮೇಲೆ ಬಿದ್ದಿತ್ತು ಧಾರಾಕಾರ ಮಳೆಯಾಗಿರುವುದರಿಂದಾಗಿ ಕೊಳೆತಿದೆ.

ಎಕರೆಗೆ ಸುಮಾರು 40 – 50 ಸಾವಿರ ರೂಪಾಯಿಗೂ ಅಧಿಕ ಹಣ ಖರ್ಚು ಮಾಡಿ, ಉತ್ತಮ ಬೆಳೆ ಬಂದಿತ್ತು. ಆದರೆ ಕಟಾವು ವೇಳೆ ಮಳೆ ಬಂದು ಈರುಳ್ಳಿ ಬೆಳೆ ಕೊಳೆಯುವಂತೆ ಮಾಡಿದೆ ಎಂದು ರೈತರು ಹೇಳಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

4 hours ago

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

2 days ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

2 days ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

3 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

4 days ago