Advertisement
MIRROR FOCUS

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

Share

ಈರುಳ್ಳಿ ಬೆಳೆಯಲ್ಲಿ ಹೆಚ್ಚಿನ ಇಳುವರಿ ಪಡೆಯಲು ಜೇನುನೊಣಗಳ ಪರಾಗಸ್ಪರ್ಶ ಅತ್ಯಂತ ಪರಿಣಾಮಕಾರಿ ವಿಧಾನವಾಗಿದ್ದು, ರೈತರಿಗೆ ಉತ್ತಮ ಫಲಿತಾಂಶ ನೀಡುತ್ತದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಜೇನು ಕೃಷಿ ತಜ್ಞ ಡಾ. ಈಶ್ವರಪ್ಪ  ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊಟ್ಟಿಗೆ ಮಾಚೇನಹಳ್ಳಿ ಮತ್ತು ಹೊಸಹಳ್ಳಿ ಗ್ರಾಮಗಳಲ್ಲಿ ‘ಜೇನುನೊಣಗಳ ಪರಾಗಸ್ಪರ್ಶ’ ಕುರಿತ ಮುಂಚೂಣಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಪರಾಗಸ್ಪರ್ಶದ ಮಹತ್ವ ಏನು? :  ಈರುಳ್ಳಿ ಬೆಳೆಯಲ್ಲಿ ಪರಕೀಯ ಪರಾಗಸ್ಪರ್ಶ (cross pollination) ಅಗತ್ಯವಾಗಿದ್ದು, ಜೇನುನೊಣಗಳು ಹೂವಿನಿಂದ ಹೂವಿಗೆ ಪರಾಗವನ್ನು ಸಾಗಿಸುವ ಮೂಲಕ ಉತ್ತಮ ಪರಾಗಸ್ಪರ್ಶವನ್ನು ನೆರವೇರಿಸುತ್ತವೆ. ಇದರಿಂದ ಪ್ರತಿ ಹೂಗುಚ್ಛದಿಂದ ಹೆಚ್ಚಿನ ಬೀಜ ಉತ್ಪಾದನೆ, ಉತ್ತಮ ಗುಣಮಟ್ಟದ ಬೀಜ ಹಾಗೂ ಇಳುವರಿ ಹೆಚ್ಚಳವಾಗುತ್ತದೆ ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಜೇನುನೊಣಗಳ ಪಾತ್ರ:  ಹೂವಿನಿಂದ ಹೂವಿಗೆ ಪರಾಗ ಸಾಗಣೆ, ಬೆಳೆ ಉತ್ಪಾದನೆಗೆ ನೈಸರ್ಗಿಕ ಸಹಾಯ ಹಾಗೂ ರಾಸಾಯನಿಕ ಅವಲಂಬನೆ ಕಡಿತಗಳಿಗೆ ಜೇನುನೊಣಗಳು ಕಾರಣವಾಗುತ್ತವೆ. ಇದರಿಂದ ರೈತರಿಗೆ ಇಳುವರಿ ಹೆಚ್ಚಳ, ಹೆಚ್ಚುವರಿ ಆದಾಯ,  ನೈಸರ್ಗಿಕ ವಿಧಾನದಲ್ಲಿ ಉತ್ಪಾದನೆ,  ಕಡಿಮೆ ವೆಚ್ಚದಲ್ಲಿ ಉತ್ತಮ ಫಲಿತಾಂಶ ಕಾಣಲು ಸಾಧ್ಯವಿದೆ. ಹೀಗಾಗಿ ಜೇನುನೊಣಗಳ ಪರಾಗಸ್ಪರ್ಶ ವಿಧಾನವನ್ನು ಅನುಸರಿಸುವ ಮೂಲಕ ಈರುಳ್ಳಿ ಬೆಳೆಯಲ್ಲಿ ಉತ್ತಮ ಉತ್ಪಾದನೆ ಸಾಧ್ಯ ಅಲ್ಲದೆ  ರೈತರು ಜೇನು ಸಾಕಾಣಿಕೆಯನ್ನು ಕೃಷಿಯ ಜೊತೆಗೆ ಅಳವಡಿಸಿಕೊಂಡರೆ ಹೆಚ್ಚಿನ ಲಾಭ ಪಡೆಯಬಹುದು.

Beekeeping expert Dr. Ishwarappa highlighted that bee pollination significantly improves onion yield by enhancing cross-pollination and seed production. Demonstrations were conducted in Bengaluru Rural district to educate farmers.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

2 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

3 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

10 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

11 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

20 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

21 hours ago