Advertisement
MIRROR FOCUS

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

Share

ಈರುಳ್ಳಿ ಬೆಳೆಯಲ್ಲಿ ಹೆಚ್ಚಿನ ಇಳುವರಿ ಪಡೆಯಲು ಜೇನುನೊಣಗಳ ಪರಾಗಸ್ಪರ್ಶ ಅತ್ಯಂತ ಪರಿಣಾಮಕಾರಿ ವಿಧಾನವಾಗಿದ್ದು, ರೈತರಿಗೆ ಉತ್ತಮ ಫಲಿತಾಂಶ ನೀಡುತ್ತದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಜೇನು ಕೃಷಿ ತಜ್ಞ ಡಾ. ಈಶ್ವರಪ್ಪ  ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊಟ್ಟಿಗೆ ಮಾಚೇನಹಳ್ಳಿ ಮತ್ತು ಹೊಸಹಳ್ಳಿ ಗ್ರಾಮಗಳಲ್ಲಿ ‘ಜೇನುನೊಣಗಳ ಪರಾಗಸ್ಪರ್ಶ’ ಕುರಿತ ಮುಂಚೂಣಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಪರಾಗಸ್ಪರ್ಶದ ಮಹತ್ವ ಏನು? :  ಈರುಳ್ಳಿ ಬೆಳೆಯಲ್ಲಿ ಪರಕೀಯ ಪರಾಗಸ್ಪರ್ಶ (cross pollination) ಅಗತ್ಯವಾಗಿದ್ದು, ಜೇನುನೊಣಗಳು ಹೂವಿನಿಂದ ಹೂವಿಗೆ ಪರಾಗವನ್ನು ಸಾಗಿಸುವ ಮೂಲಕ ಉತ್ತಮ ಪರಾಗಸ್ಪರ್ಶವನ್ನು ನೆರವೇರಿಸುತ್ತವೆ. ಇದರಿಂದ ಪ್ರತಿ ಹೂಗುಚ್ಛದಿಂದ ಹೆಚ್ಚಿನ ಬೀಜ ಉತ್ಪಾದನೆ, ಉತ್ತಮ ಗುಣಮಟ್ಟದ ಬೀಜ ಹಾಗೂ ಇಳುವರಿ ಹೆಚ್ಚಳವಾಗುತ್ತದೆ ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಜೇನುನೊಣಗಳ ಪಾತ್ರ:  ಹೂವಿನಿಂದ ಹೂವಿಗೆ ಪರಾಗ ಸಾಗಣೆ, ಬೆಳೆ ಉತ್ಪಾದನೆಗೆ ನೈಸರ್ಗಿಕ ಸಹಾಯ ಹಾಗೂ ರಾಸಾಯನಿಕ ಅವಲಂಬನೆ ಕಡಿತಗಳಿಗೆ ಜೇನುನೊಣಗಳು ಕಾರಣವಾಗುತ್ತವೆ. ಇದರಿಂದ ರೈತರಿಗೆ ಇಳುವರಿ ಹೆಚ್ಚಳ, ಹೆಚ್ಚುವರಿ ಆದಾಯ,  ನೈಸರ್ಗಿಕ ವಿಧಾನದಲ್ಲಿ ಉತ್ಪಾದನೆ,  ಕಡಿಮೆ ವೆಚ್ಚದಲ್ಲಿ ಉತ್ತಮ ಫಲಿತಾಂಶ ಕಾಣಲು ಸಾಧ್ಯವಿದೆ. ಹೀಗಾಗಿ ಜೇನುನೊಣಗಳ ಪರಾಗಸ್ಪರ್ಶ ವಿಧಾನವನ್ನು ಅನುಸರಿಸುವ ಮೂಲಕ ಈರುಳ್ಳಿ ಬೆಳೆಯಲ್ಲಿ ಉತ್ತಮ ಉತ್ಪಾದನೆ ಸಾಧ್ಯ ಅಲ್ಲದೆ  ರೈತರು ಜೇನು ಸಾಕಾಣಿಕೆಯನ್ನು ಕೃಷಿಯ ಜೊತೆಗೆ ಅಳವಡಿಸಿಕೊಂಡರೆ ಹೆಚ್ಚಿನ ಲಾಭ ಪಡೆಯಬಹುದು.

Beekeeping expert Dr. Ishwarappa highlighted that bee pollination significantly improves onion yield by enhancing cross-pollination and seed production. Demonstrations were conducted in Bengaluru Rural district to educate farmers.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!

ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…

59 minutes ago

ಹಬ್ಬದ ಬೇಡಿಕೆಯನ್ನೇ ಕೃಷಿ ಅವಕಾಶವನ್ನಾಗಿ ಮಾಡಿದ ಕೇರಳ : 2.52 ಲಕ್ಷ ಟನ್ ತರಕಾರಿ ಉತ್ಪಾದನೆ

ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…

8 hours ago

ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…

10 hours ago

ಅಡಿಕೆ ತೋಟಗಳು ಹೆಚ್ಚುತ್ತಿವೆ… ಹಾಗಿದ್ದರೆ ಕರ್ನಾಟಕದಲ್ಲಿ ಇಳುವರಿ ಏಕೆ ಕುಸಿಯುತ್ತಿದೆ?

ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…

10 hours ago

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

1 day ago