Advertisement
MIRROR FOCUS

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

Share

ಈರುಳ್ಳಿ ಬೆಳೆಯಲ್ಲಿ ಹೆಚ್ಚಿನ ಇಳುವರಿ ಪಡೆಯಲು ಜೇನುನೊಣಗಳ ಪರಾಗಸ್ಪರ್ಶ ಅತ್ಯಂತ ಪರಿಣಾಮಕಾರಿ ವಿಧಾನವಾಗಿದ್ದು, ರೈತರಿಗೆ ಉತ್ತಮ ಫಲಿತಾಂಶ ನೀಡುತ್ತದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಜೇನು ಕೃಷಿ ತಜ್ಞ ಡಾ. ಈಶ್ವರಪ್ಪ  ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊಟ್ಟಿಗೆ ಮಾಚೇನಹಳ್ಳಿ ಮತ್ತು ಹೊಸಹಳ್ಳಿ ಗ್ರಾಮಗಳಲ್ಲಿ ‘ಜೇನುನೊಣಗಳ ಪರಾಗಸ್ಪರ್ಶ’ ಕುರಿತ ಮುಂಚೂಣಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಪರಾಗಸ್ಪರ್ಶದ ಮಹತ್ವ ಏನು? :  ಈರುಳ್ಳಿ ಬೆಳೆಯಲ್ಲಿ ಪರಕೀಯ ಪರಾಗಸ್ಪರ್ಶ (cross pollination) ಅಗತ್ಯವಾಗಿದ್ದು, ಜೇನುನೊಣಗಳು ಹೂವಿನಿಂದ ಹೂವಿಗೆ ಪರಾಗವನ್ನು ಸಾಗಿಸುವ ಮೂಲಕ ಉತ್ತಮ ಪರಾಗಸ್ಪರ್ಶವನ್ನು ನೆರವೇರಿಸುತ್ತವೆ. ಇದರಿಂದ ಪ್ರತಿ ಹೂಗುಚ್ಛದಿಂದ ಹೆಚ್ಚಿನ ಬೀಜ ಉತ್ಪಾದನೆ, ಉತ್ತಮ ಗುಣಮಟ್ಟದ ಬೀಜ ಹಾಗೂ ಇಳುವರಿ ಹೆಚ್ಚಳವಾಗುತ್ತದೆ ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಜೇನುನೊಣಗಳ ಪಾತ್ರ:  ಹೂವಿನಿಂದ ಹೂವಿಗೆ ಪರಾಗ ಸಾಗಣೆ, ಬೆಳೆ ಉತ್ಪಾದನೆಗೆ ನೈಸರ್ಗಿಕ ಸಹಾಯ ಹಾಗೂ ರಾಸಾಯನಿಕ ಅವಲಂಬನೆ ಕಡಿತಗಳಿಗೆ ಜೇನುನೊಣಗಳು ಕಾರಣವಾಗುತ್ತವೆ. ಇದರಿಂದ ರೈತರಿಗೆ ಇಳುವರಿ ಹೆಚ್ಚಳ, ಹೆಚ್ಚುವರಿ ಆದಾಯ,  ನೈಸರ್ಗಿಕ ವಿಧಾನದಲ್ಲಿ ಉತ್ಪಾದನೆ,  ಕಡಿಮೆ ವೆಚ್ಚದಲ್ಲಿ ಉತ್ತಮ ಫಲಿತಾಂಶ ಕಾಣಲು ಸಾಧ್ಯವಿದೆ. ಹೀಗಾಗಿ ಜೇನುನೊಣಗಳ ಪರಾಗಸ್ಪರ್ಶ ವಿಧಾನವನ್ನು ಅನುಸರಿಸುವ ಮೂಲಕ ಈರುಳ್ಳಿ ಬೆಳೆಯಲ್ಲಿ ಉತ್ತಮ ಉತ್ಪಾದನೆ ಸಾಧ್ಯ ಅಲ್ಲದೆ  ರೈತರು ಜೇನು ಸಾಕಾಣಿಕೆಯನ್ನು ಕೃಷಿಯ ಜೊತೆಗೆ ಅಳವಡಿಸಿಕೊಂಡರೆ ಹೆಚ್ಚಿನ ಲಾಭ ಪಡೆಯಬಹುದು.

Beekeeping expert Dr. Ishwarappa highlighted that bee pollination significantly improves onion yield by enhancing cross-pollination and seed production. Demonstrations were conducted in Bengaluru Rural district to educate farmers.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

13 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

20 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 day ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

1 day ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

2 days ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

2 days ago