Advertisement
MIRROR FOCUS

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

Share

ಈರುಳ್ಳಿ ಬೆಳೆಯಲ್ಲಿ ಹೆಚ್ಚಿನ ಇಳುವರಿ ಪಡೆಯಲು ಜೇನುನೊಣಗಳ ಪರಾಗಸ್ಪರ್ಶ ಅತ್ಯಂತ ಪರಿಣಾಮಕಾರಿ ವಿಧಾನವಾಗಿದ್ದು, ರೈತರಿಗೆ ಉತ್ತಮ ಫಲಿತಾಂಶ ನೀಡುತ್ತದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಜೇನು ಕೃಷಿ ತಜ್ಞ ಡಾ. ಈಶ್ವರಪ್ಪ  ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊಟ್ಟಿಗೆ ಮಾಚೇನಹಳ್ಳಿ ಮತ್ತು ಹೊಸಹಳ್ಳಿ ಗ್ರಾಮಗಳಲ್ಲಿ ‘ಜೇನುನೊಣಗಳ ಪರಾಗಸ್ಪರ್ಶ’ ಕುರಿತ ಮುಂಚೂಣಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಪರಾಗಸ್ಪರ್ಶದ ಮಹತ್ವ ಏನು? :  ಈರುಳ್ಳಿ ಬೆಳೆಯಲ್ಲಿ ಪರಕೀಯ ಪರಾಗಸ್ಪರ್ಶ (cross pollination) ಅಗತ್ಯವಾಗಿದ್ದು, ಜೇನುನೊಣಗಳು ಹೂವಿನಿಂದ ಹೂವಿಗೆ ಪರಾಗವನ್ನು ಸಾಗಿಸುವ ಮೂಲಕ ಉತ್ತಮ ಪರಾಗಸ್ಪರ್ಶವನ್ನು ನೆರವೇರಿಸುತ್ತವೆ. ಇದರಿಂದ ಪ್ರತಿ ಹೂಗುಚ್ಛದಿಂದ ಹೆಚ್ಚಿನ ಬೀಜ ಉತ್ಪಾದನೆ, ಉತ್ತಮ ಗುಣಮಟ್ಟದ ಬೀಜ ಹಾಗೂ ಇಳುವರಿ ಹೆಚ್ಚಳವಾಗುತ್ತದೆ ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಜೇನುನೊಣಗಳ ಪಾತ್ರ:  ಹೂವಿನಿಂದ ಹೂವಿಗೆ ಪರಾಗ ಸಾಗಣೆ, ಬೆಳೆ ಉತ್ಪಾದನೆಗೆ ನೈಸರ್ಗಿಕ ಸಹಾಯ ಹಾಗೂ ರಾಸಾಯನಿಕ ಅವಲಂಬನೆ ಕಡಿತಗಳಿಗೆ ಜೇನುನೊಣಗಳು ಕಾರಣವಾಗುತ್ತವೆ. ಇದರಿಂದ ರೈತರಿಗೆ ಇಳುವರಿ ಹೆಚ್ಚಳ, ಹೆಚ್ಚುವರಿ ಆದಾಯ,  ನೈಸರ್ಗಿಕ ವಿಧಾನದಲ್ಲಿ ಉತ್ಪಾದನೆ,  ಕಡಿಮೆ ವೆಚ್ಚದಲ್ಲಿ ಉತ್ತಮ ಫಲಿತಾಂಶ ಕಾಣಲು ಸಾಧ್ಯವಿದೆ. ಹೀಗಾಗಿ ಜೇನುನೊಣಗಳ ಪರಾಗಸ್ಪರ್ಶ ವಿಧಾನವನ್ನು ಅನುಸರಿಸುವ ಮೂಲಕ ಈರುಳ್ಳಿ ಬೆಳೆಯಲ್ಲಿ ಉತ್ತಮ ಉತ್ಪಾದನೆ ಸಾಧ್ಯ ಅಲ್ಲದೆ  ರೈತರು ಜೇನು ಸಾಕಾಣಿಕೆಯನ್ನು ಕೃಷಿಯ ಜೊತೆಗೆ ಅಳವಡಿಸಿಕೊಂಡರೆ ಹೆಚ್ಚಿನ ಲಾಭ ಪಡೆಯಬಹುದು.

Beekeeping expert Dr. Ishwarappa highlighted that bee pollination significantly improves onion yield by enhancing cross-pollination and seed production. Demonstrations were conducted in Bengaluru Rural district to educate farmers.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

19 hours ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

19 hours ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

1 day ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

2 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

2 days ago