ರೈತರ ಬದುಕೇ ಹಾಗೆ…. ಲಾಭವೋ ನಷ್ಟವೋ ತಾವು ಬೆಳೆ ಬೆಳೆಯೋದನ್ನು ಮಾತ್ರ ನಿಲ್ಲಿಸೋದಿಲ್ಲ.ತಾನು ಪಟ್ಟ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಎನ್ನುವ ಭರವಸೆಯೇ ಕೃಷಿ. ಈಗ ಈರುಳ್ಳಿ ಬೆಳೆಗಾರರಿಗೆ ಈ ಭರವಸೆ ಸ್ವಲ್ಪ ಕಷ್ಟವಾಯಿತು. 30 ರೂಪಾಯಿ ಇದ್ದ ಕೆಜಿ ಈರುಳ್ಳಿ ಬೆಲೆ ಇಳಿಕೆಯಾಗಿದೆ. ದ್ವಿತೀಯ ದರ್ಜೆಯ ಈರುಳ್ಳಿ 2-5 ರೂಪಾಯಿಗೆ ಇಳಿಕೆಯಾದರೆ, ಉತ್ತಮ ಗುಣಮಟ್ಟದ ಈರುಳ್ಳಿ ಕೆ.ಜಿಗೆ 5-10 ರೂ. ಗೆ ಮಾರಾಟವಾಗುತ್ತಿದೆ. ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಕಳೆದ ಒಂದು ತಿಂಗಳಿಂದ ಈರುಳ್ಳಿ ಬೆಲೆ ಏಕಾಏಕಿ ಕುಸಿತವಾಗುತ್ತಿದೆ. ಈರುಳ್ಳಿ ಬೆಳಗಾರರಿಗೆ ಸಂಕಷ್ಟ ಎದುರಾಗಿದೆ. ಏಕಾಏಕಿ ಸೋಮವಾರ , ದುಪ್ಪಟ್ಟು ಪ್ರಮಾಣ ಈರುಳ್ಳಿ ಮಾರುಕಟ್ಟೆಗೆ ಬಂದಿದೆ. ಹೆಚ್ಚು ಈರುಳ್ಳಿ ಮಾರುಕಟ್ಟೆಗೆ ಬಂದಿರುವ ಕಾರಣ ಬೆಲೆ ಕುಸಿತವಾಗಿದೆ. ಇದರಿಂದ ಈರುಳ್ಳಿ ಬೆಳೆಗಾರರಿಗೆ ಸಂಕಷ್ಟ ಎದುರಾಗಿದೆ.
ತೆಲುಗು ರಾಜ್ಯಗಳಲ್ಲಿ ಗುಣಮಟ್ಟದ ಈರುಳ್ಳಿ ಬೆಲೆ ಸದ್ಯ ಕೆಜಿಗೆ 30 ರೂ.ವರೆಗೆ ಇದೆ, ಆದರೆ ಮಹಾರಾಷ್ಟ್ರದಲ್ಲಿ ಈರುಳ್ಳಿ ಬೆಲೆ ಕೆಜಿಗೆ 2 ರೂಪಾಯಿಗೆ ಇಳಿದಿದ್ದು, ಇದರಿಂದ ಈರುಳ್ಳಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಚಾಲೀಸಗಾಂವ್ ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ಬೆಲೆ ಕೇವಲ 2 ರಿಂದ 4 ರೂಪಾಯಿಗೆ ಮಾರಾಟವಾಗುತ್ತಿದೆ. ಮಾರುಕಟ್ಟೆಗೆ ಕ್ವಿಂಟಲ್ ಈರುಳ್ಳಿ ಬೆಲೆ 2,500 ರಿಂದ 3,000ಗೆ ಹಾಕಲಾಗುತ್ತಿದೆ. ವರ್ತಕರು 200 ರಿಂದ 850 ರೂ. ಪಡೆದುಕೊಳ್ತಿದ್ದಾರೆ. ಹೀಗಾಗಿ ಈರುಳ್ಳಿ ಬೆಲೆ ಭಾರೀ ಪ್ರಮಾಣದಲ್ಲಿ ಕುಸಿದಿರುವುದರಿಂದ ಮಹಾರಾಷ್ಟ್ರದ ರೈತರು ದಿಕ್ಕೇ ತೋಚದಂತಾಗಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…