ರೈತರ ಬದುಕೇ ಹಾಗೆ…. ಲಾಭವೋ ನಷ್ಟವೋ ತಾವು ಬೆಳೆ ಬೆಳೆಯೋದನ್ನು ಮಾತ್ರ ನಿಲ್ಲಿಸೋದಿಲ್ಲ.ತಾನು ಪಟ್ಟ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಎನ್ನುವ ಭರವಸೆಯೇ ಕೃಷಿ. ಈಗ ಈರುಳ್ಳಿ ಬೆಳೆಗಾರರಿಗೆ ಈ ಭರವಸೆ ಸ್ವಲ್ಪ ಕಷ್ಟವಾಯಿತು. 30 ರೂಪಾಯಿ ಇದ್ದ ಕೆಜಿ ಈರುಳ್ಳಿ ಬೆಲೆ ಇಳಿಕೆಯಾಗಿದೆ. ದ್ವಿತೀಯ ದರ್ಜೆಯ ಈರುಳ್ಳಿ 2-5 ರೂಪಾಯಿಗೆ ಇಳಿಕೆಯಾದರೆ, ಉತ್ತಮ ಗುಣಮಟ್ಟದ ಈರುಳ್ಳಿ ಕೆ.ಜಿಗೆ 5-10 ರೂ. ಗೆ ಮಾರಾಟವಾಗುತ್ತಿದೆ. ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಕಳೆದ ಒಂದು ತಿಂಗಳಿಂದ ಈರುಳ್ಳಿ ಬೆಲೆ ಏಕಾಏಕಿ ಕುಸಿತವಾಗುತ್ತಿದೆ. ಈರುಳ್ಳಿ ಬೆಳಗಾರರಿಗೆ ಸಂಕಷ್ಟ ಎದುರಾಗಿದೆ. ಏಕಾಏಕಿ ಸೋಮವಾರ , ದುಪ್ಪಟ್ಟು ಪ್ರಮಾಣ ಈರುಳ್ಳಿ ಮಾರುಕಟ್ಟೆಗೆ ಬಂದಿದೆ. ಹೆಚ್ಚು ಈರುಳ್ಳಿ ಮಾರುಕಟ್ಟೆಗೆ ಬಂದಿರುವ ಕಾರಣ ಬೆಲೆ ಕುಸಿತವಾಗಿದೆ. ಇದರಿಂದ ಈರುಳ್ಳಿ ಬೆಳೆಗಾರರಿಗೆ ಸಂಕಷ್ಟ ಎದುರಾಗಿದೆ.
ತೆಲುಗು ರಾಜ್ಯಗಳಲ್ಲಿ ಗುಣಮಟ್ಟದ ಈರುಳ್ಳಿ ಬೆಲೆ ಸದ್ಯ ಕೆಜಿಗೆ 30 ರೂ.ವರೆಗೆ ಇದೆ, ಆದರೆ ಮಹಾರಾಷ್ಟ್ರದಲ್ಲಿ ಈರುಳ್ಳಿ ಬೆಲೆ ಕೆಜಿಗೆ 2 ರೂಪಾಯಿಗೆ ಇಳಿದಿದ್ದು, ಇದರಿಂದ ಈರುಳ್ಳಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಚಾಲೀಸಗಾಂವ್ ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ಬೆಲೆ ಕೇವಲ 2 ರಿಂದ 4 ರೂಪಾಯಿಗೆ ಮಾರಾಟವಾಗುತ್ತಿದೆ. ಮಾರುಕಟ್ಟೆಗೆ ಕ್ವಿಂಟಲ್ ಈರುಳ್ಳಿ ಬೆಲೆ 2,500 ರಿಂದ 3,000ಗೆ ಹಾಕಲಾಗುತ್ತಿದೆ. ವರ್ತಕರು 200 ರಿಂದ 850 ರೂ. ಪಡೆದುಕೊಳ್ತಿದ್ದಾರೆ. ಹೀಗಾಗಿ ಈರುಳ್ಳಿ ಬೆಲೆ ಭಾರೀ ಪ್ರಮಾಣದಲ್ಲಿ ಕುಸಿದಿರುವುದರಿಂದ ಮಹಾರಾಷ್ಟ್ರದ ರೈತರು ದಿಕ್ಕೇ ತೋಚದಂತಾಗಿದ್ದಾರೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…