ರೈತರ ಬದುಕೇ ಹಾಗೆ…. ಲಾಭವೋ ನಷ್ಟವೋ ತಾವು ಬೆಳೆ ಬೆಳೆಯೋದನ್ನು ಮಾತ್ರ ನಿಲ್ಲಿಸೋದಿಲ್ಲ.ತಾನು ಪಟ್ಟ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಎನ್ನುವ ಭರವಸೆಯೇ ಕೃಷಿ. ಈಗ ಈರುಳ್ಳಿ ಬೆಳೆಗಾರರಿಗೆ ಈ ಭರವಸೆ ಸ್ವಲ್ಪ ಕಷ್ಟವಾಯಿತು. 30 ರೂಪಾಯಿ ಇದ್ದ ಕೆಜಿ ಈರುಳ್ಳಿ ಬೆಲೆ ಇಳಿಕೆಯಾಗಿದೆ. ದ್ವಿತೀಯ ದರ್ಜೆಯ ಈರುಳ್ಳಿ 2-5 ರೂಪಾಯಿಗೆ ಇಳಿಕೆಯಾದರೆ, ಉತ್ತಮ ಗುಣಮಟ್ಟದ ಈರುಳ್ಳಿ ಕೆ.ಜಿಗೆ 5-10 ರೂ. ಗೆ ಮಾರಾಟವಾಗುತ್ತಿದೆ. ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಕಳೆದ ಒಂದು ತಿಂಗಳಿಂದ ಈರುಳ್ಳಿ ಬೆಲೆ ಏಕಾಏಕಿ ಕುಸಿತವಾಗುತ್ತಿದೆ. ಈರುಳ್ಳಿ ಬೆಳಗಾರರಿಗೆ ಸಂಕಷ್ಟ ಎದುರಾಗಿದೆ. ಏಕಾಏಕಿ ಸೋಮವಾರ , ದುಪ್ಪಟ್ಟು ಪ್ರಮಾಣ ಈರುಳ್ಳಿ ಮಾರುಕಟ್ಟೆಗೆ ಬಂದಿದೆ. ಹೆಚ್ಚು ಈರುಳ್ಳಿ ಮಾರುಕಟ್ಟೆಗೆ ಬಂದಿರುವ ಕಾರಣ ಬೆಲೆ ಕುಸಿತವಾಗಿದೆ. ಇದರಿಂದ ಈರುಳ್ಳಿ ಬೆಳೆಗಾರರಿಗೆ ಸಂಕಷ್ಟ ಎದುರಾಗಿದೆ.
ತೆಲುಗು ರಾಜ್ಯಗಳಲ್ಲಿ ಗುಣಮಟ್ಟದ ಈರುಳ್ಳಿ ಬೆಲೆ ಸದ್ಯ ಕೆಜಿಗೆ 30 ರೂ.ವರೆಗೆ ಇದೆ, ಆದರೆ ಮಹಾರಾಷ್ಟ್ರದಲ್ಲಿ ಈರುಳ್ಳಿ ಬೆಲೆ ಕೆಜಿಗೆ 2 ರೂಪಾಯಿಗೆ ಇಳಿದಿದ್ದು, ಇದರಿಂದ ಈರುಳ್ಳಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಚಾಲೀಸಗಾಂವ್ ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ಬೆಲೆ ಕೇವಲ 2 ರಿಂದ 4 ರೂಪಾಯಿಗೆ ಮಾರಾಟವಾಗುತ್ತಿದೆ. ಮಾರುಕಟ್ಟೆಗೆ ಕ್ವಿಂಟಲ್ ಈರುಳ್ಳಿ ಬೆಲೆ 2,500 ರಿಂದ 3,000ಗೆ ಹಾಕಲಾಗುತ್ತಿದೆ. ವರ್ತಕರು 200 ರಿಂದ 850 ರೂ. ಪಡೆದುಕೊಳ್ತಿದ್ದಾರೆ. ಹೀಗಾಗಿ ಈರುಳ್ಳಿ ಬೆಲೆ ಭಾರೀ ಪ್ರಮಾಣದಲ್ಲಿ ಕುಸಿದಿರುವುದರಿಂದ ಮಹಾರಾಷ್ಟ್ರದ ರೈತರು ದಿಕ್ಕೇ ತೋಚದಂತಾಗಿದ್ದಾರೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…
ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…
ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…