ರೈತರ ಬದುಕೇ ಹಾಗೆ…. ಲಾಭವೋ ನಷ್ಟವೋ ತಾವು ಬೆಳೆ ಬೆಳೆಯೋದನ್ನು ಮಾತ್ರ ನಿಲ್ಲಿಸೋದಿಲ್ಲ.ತಾನು ಪಟ್ಟ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಎನ್ನುವ ಭರವಸೆಯೇ ಕೃಷಿ. ಈಗ ಈರುಳ್ಳಿ ಬೆಳೆಗಾರರಿಗೆ ಈ ಭರವಸೆ ಸ್ವಲ್ಪ ಕಷ್ಟವಾಯಿತು. 30 ರೂಪಾಯಿ ಇದ್ದ ಕೆಜಿ ಈರುಳ್ಳಿ ಬೆಲೆ ಇಳಿಕೆಯಾಗಿದೆ. ದ್ವಿತೀಯ ದರ್ಜೆಯ ಈರುಳ್ಳಿ 2-5 ರೂಪಾಯಿಗೆ ಇಳಿಕೆಯಾದರೆ, ಉತ್ತಮ ಗುಣಮಟ್ಟದ ಈರುಳ್ಳಿ ಕೆ.ಜಿಗೆ 5-10 ರೂ. ಗೆ ಮಾರಾಟವಾಗುತ್ತಿದೆ. ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಕಳೆದ ಒಂದು ತಿಂಗಳಿಂದ ಈರುಳ್ಳಿ ಬೆಲೆ ಏಕಾಏಕಿ ಕುಸಿತವಾಗುತ್ತಿದೆ. ಈರುಳ್ಳಿ ಬೆಳಗಾರರಿಗೆ ಸಂಕಷ್ಟ ಎದುರಾಗಿದೆ. ಏಕಾಏಕಿ ಸೋಮವಾರ , ದುಪ್ಪಟ್ಟು ಪ್ರಮಾಣ ಈರುಳ್ಳಿ ಮಾರುಕಟ್ಟೆಗೆ ಬಂದಿದೆ. ಹೆಚ್ಚು ಈರುಳ್ಳಿ ಮಾರುಕಟ್ಟೆಗೆ ಬಂದಿರುವ ಕಾರಣ ಬೆಲೆ ಕುಸಿತವಾಗಿದೆ. ಇದರಿಂದ ಈರುಳ್ಳಿ ಬೆಳೆಗಾರರಿಗೆ ಸಂಕಷ್ಟ ಎದುರಾಗಿದೆ.
ತೆಲುಗು ರಾಜ್ಯಗಳಲ್ಲಿ ಗುಣಮಟ್ಟದ ಈರುಳ್ಳಿ ಬೆಲೆ ಸದ್ಯ ಕೆಜಿಗೆ 30 ರೂ.ವರೆಗೆ ಇದೆ, ಆದರೆ ಮಹಾರಾಷ್ಟ್ರದಲ್ಲಿ ಈರುಳ್ಳಿ ಬೆಲೆ ಕೆಜಿಗೆ 2 ರೂಪಾಯಿಗೆ ಇಳಿದಿದ್ದು, ಇದರಿಂದ ಈರುಳ್ಳಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಚಾಲೀಸಗಾಂವ್ ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ಬೆಲೆ ಕೇವಲ 2 ರಿಂದ 4 ರೂಪಾಯಿಗೆ ಮಾರಾಟವಾಗುತ್ತಿದೆ. ಮಾರುಕಟ್ಟೆಗೆ ಕ್ವಿಂಟಲ್ ಈರುಳ್ಳಿ ಬೆಲೆ 2,500 ರಿಂದ 3,000ಗೆ ಹಾಕಲಾಗುತ್ತಿದೆ. ವರ್ತಕರು 200 ರಿಂದ 850 ರೂ. ಪಡೆದುಕೊಳ್ತಿದ್ದಾರೆ. ಹೀಗಾಗಿ ಈರುಳ್ಳಿ ಬೆಲೆ ಭಾರೀ ಪ್ರಮಾಣದಲ್ಲಿ ಕುಸಿದಿರುವುದರಿಂದ ಮಹಾರಾಷ್ಟ್ರದ ರೈತರು ದಿಕ್ಕೇ ತೋಚದಂತಾಗಿದ್ದಾರೆ.
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…