Advertisement
ಸುದ್ದಿಗಳು

ಈರುಳ್ಳಿ ಬೆಲೆಯಲ್ಲಿ ಭಾರಿ ಕುಸಿತ | ದ್ವಿತೀಯ ದರ್ಜೆ ಈರುಳ್ಳಿ ಬೆಲೆ 2 ರೂಪಾಯಿಗೆ ಇಳಿಕೆ..! | ಕೃಷಿಕರಿಗೆ ಸಂಕಷ್ಟ… |

Share

 ರೈತರ ಬದುಕೇ ಹಾಗೆ…. ಲಾಭವೋ ನಷ್ಟವೋ  ತಾವು ಬೆಳೆ ಬೆಳೆಯೋದನ್ನು ಮಾತ್ರ ನಿಲ್ಲಿಸೋದಿಲ್ಲ.ತಾನು ಪಟ್ಟ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಎನ್ನುವ ಭರವಸೆಯೇ ಕೃಷಿ. ಈಗ ಈರುಳ್ಳಿ ಬೆಳೆಗಾರರಿಗೆ ಈ ಭರವಸೆ ಸ್ವಲ್ಪ ಕಷ್ಟವಾಯಿತು. 30 ರೂಪಾಯಿ ಇದ್ದ ಕೆಜಿ ಈರುಳ್ಳಿ ಬೆಲೆ ಇಳಿಕೆಯಾಗಿದೆ. ದ್ವಿತೀಯ ದರ್ಜೆಯ ಈರುಳ್ಳಿ 2-5 ರೂಪಾಯಿಗೆ ಇಳಿಕೆಯಾದರೆ, ಉತ್ತಮ ಗುಣಮಟ್ಟದ ಈರುಳ್ಳಿ ಕೆ.ಜಿಗೆ 5-10 ರೂ. ಗೆ ಮಾರಾಟವಾಗುತ್ತಿದೆ. ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಕಳೆದ ಒಂದು ತಿಂಗಳಿಂದ ಈರುಳ್ಳಿ ಬೆಲೆ ಏಕಾಏಕಿ ಕುಸಿತವಾಗುತ್ತಿದೆ.  ಈರುಳ್ಳಿ ಬೆಳಗಾರರಿಗೆ  ಸಂಕಷ್ಟ ಎದುರಾಗಿದೆ. ಏಕಾಏಕಿ ಸೋಮವಾರ , ದುಪ್ಪಟ್ಟು ಪ್ರಮಾಣ ಈರುಳ್ಳಿ ಮಾರುಕಟ್ಟೆಗೆ ಬಂದಿದೆ. ಹೆಚ್ಚು ಈರುಳ್ಳಿ ಮಾರುಕಟ್ಟೆಗೆ  ಬಂದಿರುವ  ಕಾರಣ  ಬೆಲೆ ಕುಸಿತವಾಗಿದೆ. ಇದರಿಂದ  ಈರುಳ್ಳಿ ಬೆಳೆಗಾರರಿಗೆ ಸಂಕಷ್ಟ ಎದುರಾಗಿದೆ.

ತೆಲುಗು ರಾಜ್ಯಗಳಲ್ಲಿ ಗುಣಮಟ್ಟದ ಈರುಳ್ಳಿ ಬೆಲೆ ಸದ್ಯ ಕೆಜಿಗೆ 30 ರೂ.ವರೆಗೆ ಇದೆ, ಆದರೆ ಮಹಾರಾಷ್ಟ್ರದಲ್ಲಿ ಈರುಳ್ಳಿ ಬೆಲೆ ಕೆಜಿಗೆ 2 ರೂಪಾಯಿಗೆ ಇಳಿದಿದ್ದು, ಇದರಿಂದ ಈರುಳ್ಳಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಚಾಲೀಸಗಾಂವ್ ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ಬೆಲೆ ಕೇವಲ 2 ರಿಂದ 4 ರೂಪಾಯಿಗೆ ಮಾರಾಟವಾಗುತ್ತಿದೆ. ಮಾರುಕಟ್ಟೆಗೆ ಕ್ವಿಂಟಲ್ ಈರುಳ್ಳಿ ಬೆಲೆ 2,500 ರಿಂದ 3,000ಗೆ ಹಾಕಲಾಗುತ್ತಿದೆ. ವರ್ತಕರು 200 ರಿಂದ 850 ರೂ. ಪಡೆದುಕೊಳ್ತಿದ್ದಾರೆ. ಹೀಗಾಗಿ ಈರುಳ್ಳಿ ಬೆಲೆ ಭಾರೀ ಪ್ರಮಾಣದಲ್ಲಿ ಕುಸಿದಿರುವುದರಿಂದ ಮಹಾರಾಷ್ಟ್ರದ ರೈತರು ದಿಕ್ಕೇ ತೋಚದಂತಾಗಿದ್ದಾರೆ.

ಕಳೆದ ವಾರ ಮಳೆಯಾಗಿದ್ದು, ಈರುಳ್ಳಿ ದೊಡ್ಡ ಪ್ರಮಾಣದಲ್ಲಿ ರಾಜಧಾನಿಯ ಮಾರುಕಟ್ಟೆಗೆ ಬರುತ್ತಿದೆ. ಪಿಎಂಸಿಯಲ್ಲಿ ಉತ್ತಮ ಗುಣಮಟ್ಟದ ಈರುಳ್ಳಿ ಕೆ.ಜಿಗೆ 5-10 ರೂ. ಗೆ ಮಾರಾಟವಾಗುತ್ತಿದ್ದು, ಕಳಪೆ ಈರುಳ್ಳಿ ಬೆಲೆ 2-5 ದರದಲ್ಲಿ ಹರಾಜು ಹಾಕಲಾಗುತ್ತಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಗುಣಮಟ್ಟದ ಈರುಳ್ಳಿಗೆ ಕೆಜಿಗೆ 10- 12 ರೂ. ಗೆ ಮಾರಾಟವಾಗುತ್ತಿದ್ದು, ದ್ವಿತೀಯ ದರ್ಜೆ ಈರುಳ್ಳಿಗೆ  02-05 ರೂ. ಮಾತ್ರವೇ ಬೆಲೆಯಿದೆ. ಯಶವಂತಪುರ ಹಾಗೂ ದಾಸರಹಳ್ಳಿ ಎಪಿಎಂಸಿಗೆ  ಹೆಚ್ಚು ಈರುಳ್ಳಿ ಬರುತ್ತಿದೆ.ಆದ ಕಾರಣ   ಈರುಳ್ಳಿ ಬೆಲೆ ಇಳಿಕೆಯಾಗಿದೆ.  ರಾಜ್ಯದಲ್ಲಿ ಹೆಚ್ಚು ಮಳೆ ಬರುತ್ತಿರುವ ಕಾರಣ , ರೈತರು ಬೆಳೆ ನಾಶದ ಭಯದಿಂದ ಈರುಳ್ಳಿಯನ್ನು ಹೊರತೆಗೆದು ಮಾರುಕಟ್ಟೆಗೆ ತರುತ್ತಿದ್ದಾರೆ.
ರೈತರು ಈರುಳ್ಳಿ ಬೆಳೆಯಲು ಎಕರೆಗೆ 13ರಿಂದ 15 ಸಾವಿರ ರೂಪಾಯಿ ಖರ್ಚು ಮಾಡಿದ್ದಾರೆ. ಈ ಹಿಂದೆ 250ರಿಂದ 300 ರೂ.ಗೆ ಇದ್ದ ಕೂಲಿ, ಈಗ 500 ರೂ.ಗೆ ಏರಿಕೆಯಾಗಿದೆ. ಹೀಗಾಗಿ ಉತ್ಪಾದನಾ ವೆಚ್ಚ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ರೈತರು ಹೇಳುತ್ತಾರೆ. ವಾತಾವರಣದಲ್ಲಿ ತಾಪಮಾನದ ಹೆಚ್ಚಳ ಕೂಡ ಈರುಳ್ಳಿ ಬೆಳೆ ಇಳುವರಿ ಮೇಲೆ ಸ್ವಲ್ಪ ಪರಿಣಾಮ ಬೀರಿದೆ. ಸರಕಾರ ಕೂಡಲೇ ಸ್ಪಂದಿಸಿ ಬೆಂಬಲ ನೀಡಬೇಕು ಎಂಬುದು ಈರುಳ್ಳಿ ಬೆಳೆಗಾರರ ಆಗ್ರಹವಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 hour ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

2 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

15 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

23 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 day ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 days ago