Advertisement
ಸುದ್ದಿಗಳು

ದೇಶದಲ್ಲಿ ಈರುಳ್ಳಿ ದರ ಭಾರಿ ಕುಸಿತ | ಬೆಲೆ ಸಿಗದೆ ಅನ್ನದಾತ ಕಣ್ಣೀರು | ಎಪಿಎಂಸಿಯಲ್ಲಿ ಹರಾಜು ಪ್ರಕ್ರಿಯೆ ಸ್ಥಗಿತ |

Share

ಮಹಾರಾಷ್ಟ್ರದ ರೈತನೊಬ್ಬ 512 ಕೆಜಿ ಈರುಳ್ಳಿ ಮಾರಿ ಕೇವಲ 2 ರೂಪಾಯಿ ಗಳಿಸಿದ್ದ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇಷ್ಟೇನಾ ಅನ್ನದಾತನ ಬದುಕು ಎಂಬ ಪ್ರಶ್ನೆ ಹಲವರಲ್ಲಿ ಮೂಡಿತ್ತು. ಸದ್ಯ ದೇಶದಲ್ಲಿ ಈರುಳ್ಳಿ ಬೆಲೆ ಪಾತಾಳಕ್ಕೆ ಕುಸಿದಿದೆ.

ಅನೇಕ ದೇಶಗಳಲ್ಲಿ ಹಠಾತ್ ಈರುಳ್ಳಿ ಬಿಕ್ಕಟ್ಟು ಕಂಡುಬಂದಿದೆ. ತಜ್ಞರ ಪ್ರಕಾರ ಈ ವರ್ಷ ಹಲವು ದೇಶಗಳಲ್ಲಿ ಈರುಳ್ಳಿ ಇಳುವರಿ ಉತ್ತಮವಾಗಿಲ್ಲ. ವಿಶ್ವಸಂಸ್ಥೆ ಮತ್ತು ವಿಶ್ವಬ್ಯಾಂಕ್‌ನ ವರದಿಗಳು ಕೂಡ ವಿಶ್ವದಾದ್ಯಂತ ಈರುಳ್ಳಿ ಬೆಲೆ ಏರಿಕೆಯನ್ನು ಉಲ್ಲೇಖಿಸಿವೆ. ಅಮೆರಿಕದ ಪರಿಸ್ಥಿತಿಯೂ ತುಂಬಾ ಕೆಟ್ಟದಾಗಿದೆ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ. ಮೂಲತಃ, ದಕ್ಷಿಣ ಸ್ಪೇನ್ ಮತ್ತು ಉತ್ತರ ಆಫ್ರಿಕಾದಲ್ಲಿ ಈ ಬಾರಿ ಈರುಳ್ಳಿ ಉತ್ತಮ ಇಳುವರಿಯನ್ನು ಹೊಂದಿಲ್ಲ. ಭಾರತದಲ್ಲಿ ಈರುಳ್ಳಿ ದರ ಪಾತಾಳಕ್ಕೆ ಕುಸಿದಿದ್ದು, ಎಪಿಎಂಸಿಯಲ್ಲಿ ಹರಾಜು ಪ್ರಕ್ರಿಯೆ ಸ್ಥಗಿತಗೊಂಡಿದೆ.

ಕಳೆದ ವರ್ಷ ಪಾಕಿಸ್ತಾನದಲ್ಲಿ ಜಲಪ್ರಳಯ, ಉಕ್ರೇನ್ ಯುದ್ಧ, ಮಧ್ಯ ಏಷ್ಯಾದಲ್ಲಿ ಸಂಭವಿಸಿದ ಭಾರಿ ಹಿಮಪಾತ ಎಲ್ಲವೂ ಬೆಳೆಗಳನ್ನು ನಾಶ ಮಾಡಿತ್ತು. ಉತ್ತರ ಆಫ್ರಿಕಾದಲ್ಲಿ ಬರ ಮತ್ತು ಹೆಚ್ಚುತ್ತಿರುವ ರಸಗೊಬ್ಬರ ಬೆಲೆಗಳಿಂದ ಇಳುವರಿ ಸುಧಾರಿಸಿಲ್ಲ. ಪ್ರತಿಕೂಲ ಹವಾಮಾನದಿಂದಾಗಿ ಮೊರಾಕೊದಲ್ಲಿ ಈರುಳ್ಳಿ ಬೆಳೆಗಳು ಹಾನಿಗೊಳಗಾಗಿದ್ದವು. ಇದು ವಿಶ್ವ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ. ಮಧ್ಯ ಏಷ್ಯಾದ ಹಲವು ದೇಶಗಳಲ್ಲಿ ಈರುಳ್ಳಿ ದಾಸ್ತಾನುಗಳ ಮೇಲೆ ನಿಗಾ ಇರಿಸಲಾಗಿದೆ. ಕಿರ್ಗಿಸ್ತಾನ್, ಉಜ್ಬೇಕಿಸ್ತಾನ್ ಮತ್ತು ತಜಿಕಿಸ್ತಾನ್‌ಗೆ ಈರುಳ್ಳಿ ರಫ್ತುಗಳನ್ನು ಸಹ ನಿರ್ಬಂಧಿಸಲಾಗಿದೆ.

ವಿಶ್ವದಾದ್ಯಂತ ಈರುಳ್ಳಿ ಕೊರತೆಯಿದೆ, ಆದರೆ ಭಾರತದಲ್ಲಿನ ಚಿತ್ರಣ ವಿರುದ್ಧ ದಿಕ್ಕಿನಲ್ಲಿದೆ. ಮಹಾರಾಷ್ಟ್ರದಲ್ಲಿ ಈ ಬಾರಿ ಈರುಳ್ಳಿ ಇಳುವರಿ ಉತ್ತಮವಾಗಿದೆ. ಇಳುವರಿ ಹೆಚ್ಚಾಗಿದ್ದು ಸೂಕ್ತ ಮಾರುಕಟ್ಟೆ ಸಿಗದೆ ಗೋದಾಮಿನಲ್ಲಿ ಸಾವಿರಾರು ಟನ್ ಈರುಳ್ಳಿ ಕೊಳೆಯುತ್ತಿದೆ. ರೈತರು ಈರುಳ್ಳಿಯನ್ನು ಅತ್ಯಂತ ಕಡಿಮೆ ಬೆಲೆಗೆ ಮಾರಾಟ ಮಾಡುವ ಅನಿವಾರ್ಯತೆ ಎದುರಾಗಿದೆ. ಈ ಪರಿಸ್ಥಿತಿಯಲ್ಲಿ ನಾಸಿಕ್‌ನಿಂದ ಹೆಚ್ಚುವರಿ ಈರುಳ್ಳಿ ತೆಗೆದುಕೊಂಡು ಬೇರೆ ರಾಜ್ಯಗಳಲ್ಲಿ ಮಾರಾಟ ಮಾಡುವಂತೆ ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರಿ ಮಾರಾಟ ಒಕ್ಕೂಟಕ್ಕೆ ಕೇಂದ್ರ ನಿರ್ದೇಶನ ನೀಡಿದೆ.

ವರದಿ ಪ್ರಕಾರ, ಡಿಸೆಂಬರ್ 26 ರಂದು ಸಗಟು ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕ್ವಿಂಟಲ್‌ಗೆ 1,850 ಟಿಕೆ ಇತ್ತು. ಫೆಬ್ರವರಿ ಅಂತ್ಯಕ್ಕೆ 550 ರೂ.ಗೆ ಇಳಿಕೆಯಾಗಿದೆ. ರೈತರ ಆತಂಕ ನಿವಾರಿಸಲು ವಿದೇಶಕ್ಕೆ ಈರುಳ್ಳಿ ರಫ್ತಿಗೆ ಯಾವುದೇ ನಿರ್ಬಂಧವಿಲ್ಲ ಎಂದು ಕೇಂದ್ರ ತಿಳಿಸಿದೆ. ಈ ವಾತಾವರಣದಲ್ಲಿ ಈರುಳ್ಳಿ ರಫ್ತು ಆರಂಭವಾದರೆ ರೈತರು ಸ್ವಲ್ಪ ಲಾಭ ಪಡೆಯುವ ನಿರೀಕ್ಷೆ ಇದೆ.

ರೈತರು ಸಗಟು ಮಾರುಕಟ್ಟೆಯಲ್ಲಿ ಕೆಜಿಗೆ 1 ರೂ. ದರದಲ್ಲಿ ಈರುಳ್ಳಿ ಮಾರಾಟ ಮಾಡುತ್ತಿದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ಅಷ್ಟು ಕಡಿಮೆ ಬೆಲೆಗೆ ಈರುಳ್ಳಿ ಸಿಗುತ್ತಿಲ್ಲ. ದೇಶದ ವಿವಿಧ ನಗರಗಳಲ್ಲಿ, ಚಿಲ್ಲರೆ ಮಾರುಕಟ್ಟೆಯಲ್ಲಿ ಈರುಳ್ಳಿಯ ಸರಾಸರಿ ಬೆಲೆ ಕೆಜಿಗೆ 30 ರ ಅಸುಪಾಸಿನಲ್ಲಿದೆ. ಆದ್ದರಿಂದ ಸಾಮಾನ್ಯ ಖರೀದಿದಾರರಿಗೂ ಬೇಸರವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

8 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

24 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago