ವಾಟ್ಸ್ ಆಪ್ ಮೂಲಕ ಮದುವೆಯ ಆಮಂತ್ರಣ ಪತ್ರಿಕೆಗಳನ್ನು ಕಳುಹಿಸಿ, ಮೊಬೈಲ್ ಹ್ಯಾಕ್ ಮಾಡುವ ಪ್ರವೃತ್ತಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಸಾರ್ವಜನಿಕರು ಇಂತಹ ಆಮಂತ್ರಣ ಪತ್ರಿಕೆಗಳ ಕುರಿತು ಎಚ್ಚರಿಕೆಯಿಂದ ಇರಬೇಕೆಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಮನವಿ ಮಾಡಿದ್ದಾರೆ.
ಹೆಚ್ಚುತ್ತಿರುವ ಆನ್ಲೈನ್ ವಂಚನೆಗಳ ಕುರಿತು ಜಿಲ್ಲೆಯ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮದ ಭಾಗವಾಗಿ ಮಾಹಿತಿ ನೀಡಿರುವ ಅವರು, ವಾಟ್ಸ್ ಆಪ್ ಮೂಲಕ ಡಿಜಿಟಲ್ ಮದುವೆ ಆಮಂತ್ರಣ ಪತ್ರಿಕೆಗಳ ಹಂಚಿಕೆ ಮಾಡುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದ್ದು, ಈ ಆಮಂತ್ರಣ ಪತ್ರಿಕೆಗಳ ಲಿಂಕ್ ತೆರೆಯಲು ಹೋಗಿ, ಮೊಬೈಲ್ ಹ್ಯಾಕ್ ಆಗಿ, ಸಾರ್ವಜನಿಕರು ತೊಂದರೆಗಳಿಗೆ ಸಿಲುಕುತ್ತಿದ್ದಾರೆ ಎಂದು ವಿವರಿಸಿದರು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಯಾವುದೇ ಅಪರಿಚಿತ ಲಿಂಕ್ಗಳನ್ನು ತೆರೆಯುವ ಮುನ್ನ ಎಚ್ಚರ ವಹಿಸಬೇಕು. ಸಹಾಯಕ್ಕಾಗಿ ಹತ್ತಿರದ ಪೊಲೀಸ್ ಠಾಣೆ ಅಥವಾ 1930 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಹೇಳಿದರು.
ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…
ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…
ನಿಷೇಧವು ಶಾಶ್ವತವಲ್ಲ, ಮತ್ತು ವೈಜ್ಞಾನಿಕ, ತಾಂತ್ರಿಕ, ಮತ್ತು ವಾಣಿಜ್ಯ ರಾಜತಾಂತ್ರಿಕ ಮಾರ್ಗದಿಂದ ಈ…
ಆಹಾರ ಧಾನ್ಯಗಳನ್ನು ಬೆಳೆಸುತ್ತಿದ್ದ ಕೃಷಿಕರು ಅಡಿಕೆ ಕೃಷಿಗೆ ಪರಿವರ್ತನೆ ಆಗಿ ಆಹಾರಕ್ಕಾಗಿ ಪರಾವಲಂಬಿಗಳು…
ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…
ಹೆಚ್ಚಿನ ಮಾಹಿತಿಗಾಗಿರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490