ವಾಟ್ಸ್ ಆಪ್ ಮೂಲಕ ಮದುವೆಯ ಆಮಂತ್ರಣ ಪತ್ರಿಕೆಗಳನ್ನು ಕಳುಹಿಸಿ, ಮೊಬೈಲ್ ಹ್ಯಾಕ್ ಮಾಡುವ ಪ್ರವೃತ್ತಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಸಾರ್ವಜನಿಕರು ಇಂತಹ ಆಮಂತ್ರಣ ಪತ್ರಿಕೆಗಳ ಕುರಿತು ಎಚ್ಚರಿಕೆಯಿಂದ ಇರಬೇಕೆಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಮನವಿ ಮಾಡಿದ್ದಾರೆ.
ಹೆಚ್ಚುತ್ತಿರುವ ಆನ್ಲೈನ್ ವಂಚನೆಗಳ ಕುರಿತು ಜಿಲ್ಲೆಯ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮದ ಭಾಗವಾಗಿ ಮಾಹಿತಿ ನೀಡಿರುವ ಅವರು, ವಾಟ್ಸ್ ಆಪ್ ಮೂಲಕ ಡಿಜಿಟಲ್ ಮದುವೆ ಆಮಂತ್ರಣ ಪತ್ರಿಕೆಗಳ ಹಂಚಿಕೆ ಮಾಡುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದ್ದು, ಈ ಆಮಂತ್ರಣ ಪತ್ರಿಕೆಗಳ ಲಿಂಕ್ ತೆರೆಯಲು ಹೋಗಿ, ಮೊಬೈಲ್ ಹ್ಯಾಕ್ ಆಗಿ, ಸಾರ್ವಜನಿಕರು ತೊಂದರೆಗಳಿಗೆ ಸಿಲುಕುತ್ತಿದ್ದಾರೆ ಎಂದು ವಿವರಿಸಿದರು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಯಾವುದೇ ಅಪರಿಚಿತ ಲಿಂಕ್ಗಳನ್ನು ತೆರೆಯುವ ಮುನ್ನ ಎಚ್ಚರ ವಹಿಸಬೇಕು. ಸಹಾಯಕ್ಕಾಗಿ ಹತ್ತಿರದ ಪೊಲೀಸ್ ಠಾಣೆ ಅಥವಾ 1930 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಹೇಳಿದರು.
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…