ವಾಟ್ಸ್ ಆಪ್ ಮೂಲಕ ಮದುವೆಯ ಆಮಂತ್ರಣ ಪತ್ರಿಕೆಗಳನ್ನು ಕಳುಹಿಸಿ, ಮೊಬೈಲ್ ಹ್ಯಾಕ್ ಮಾಡುವ ಪ್ರವೃತ್ತಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಸಾರ್ವಜನಿಕರು ಇಂತಹ ಆಮಂತ್ರಣ ಪತ್ರಿಕೆಗಳ ಕುರಿತು ಎಚ್ಚರಿಕೆಯಿಂದ ಇರಬೇಕೆಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಮನವಿ ಮಾಡಿದ್ದಾರೆ.
ಹೆಚ್ಚುತ್ತಿರುವ ಆನ್ಲೈನ್ ವಂಚನೆಗಳ ಕುರಿತು ಜಿಲ್ಲೆಯ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮದ ಭಾಗವಾಗಿ ಮಾಹಿತಿ ನೀಡಿರುವ ಅವರು, ವಾಟ್ಸ್ ಆಪ್ ಮೂಲಕ ಡಿಜಿಟಲ್ ಮದುವೆ ಆಮಂತ್ರಣ ಪತ್ರಿಕೆಗಳ ಹಂಚಿಕೆ ಮಾಡುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದ್ದು, ಈ ಆಮಂತ್ರಣ ಪತ್ರಿಕೆಗಳ ಲಿಂಕ್ ತೆರೆಯಲು ಹೋಗಿ, ಮೊಬೈಲ್ ಹ್ಯಾಕ್ ಆಗಿ, ಸಾರ್ವಜನಿಕರು ತೊಂದರೆಗಳಿಗೆ ಸಿಲುಕುತ್ತಿದ್ದಾರೆ ಎಂದು ವಿವರಿಸಿದರು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಯಾವುದೇ ಅಪರಿಚಿತ ಲಿಂಕ್ಗಳನ್ನು ತೆರೆಯುವ ಮುನ್ನ ಎಚ್ಚರ ವಹಿಸಬೇಕು. ಸಹಾಯಕ್ಕಾಗಿ ಹತ್ತಿರದ ಪೊಲೀಸ್ ಠಾಣೆ ಅಥವಾ 1930 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಹೇಳಿದರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…