ಅಕ್ಕಿ(Rice).. ದಕ್ಷಿಣ ಭಾರತದ(South India) ಬಹುತೇಕರ ದಿನನಿತ್ಯದ ಆಹಾರ(Food). ಆದರೆ ಅಕ್ಕಿ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ(Rice Rate). ಆದರೆ ಗ್ರಾಹಕರಿಗೆ(Customer) ಅಕ್ಕಿ ಬೆಲೆ ಬಿಸಿಯಾದ್ರೆ, ರೈತನಿಗೆ(Farmer) ಕನಿಷ್ಠ ಬೆಲೆ ಇಲ್ಲದೆ ಪರದಾಟ. ಮಧ್ಯವರ್ತಿಗಳ(mediator) ಹಾವಳಿಯಿಂದ ರೈತ ಬೆಲೆ ಸಿಗದೆ ವ್ಯಥೆ ಪಟ್ಟರೆ, ಗ್ರಾಹಕ ಅಕ್ಕಿ ಬೆಲೆ ಜಾಸ್ತಿಯಾಗಿ ಕೊಂಡುಕೊಳ್ಳಲು ಹಿಂದೆ ಮುಂದೆ ನೋಡುವ ಪರಿಸ್ಥಿತಿ. ಈ ಅವ್ಯವಸ್ಥೆಯಿಂದ ಹೊರ ಬರುವ ಸಲುವಾಗಿ ರೈತರಿಂದ ನೇರವಾಗಿ ಅಕ್ಕಿ ಖರೀದಿಸಿ ಕಡಿಮೆ ಬೆಲೆಗೆ ವಿತರಣೆ ಮಾಡಲು ಸಿದ್ಧತೆ ನಡೆಸಲಾಗಿದೆ.
ಇಂದಿನಿಂದ (ಫೆಬ್ರವರಿ 6) 29 ರೂಪಾಯಿಗೆ ಸಿಗಲಿದೆ ಒಂದು ಕೆಜಿ ಅಕ್ಕಿ! ಹೌದು, ಇದು ಆಶ್ಚರ್ಯ ಅನಿಸಿದ್ರೂ ಸತ್ಯ. ರೈತರಿಂದ ನೇರವಾಗಿ ಅಕ್ಕಿ ಖರೀದಿಸಿ ಕಡಿಮೆ ಬೆಲೆಗೆ ವಿತರಣೆ ಮಾಡುವ ವಿಶೇಷ ಯೋಜನೆಯೊಂದಕ್ಕೆ ಇಂದು ಚಾಲನೆ ದೊರೆಯುತ್ತಿದೆ.
ಜನರಿಗೆ ಕಡಿಮೆ ದರದಲ್ಲಿ ಅಕ್ಕಿ ನೀಡುವ ಉದ್ದೇಶದಿಂದ ಸಂಜೆ 4 ಗಂಟೆಗೆ ಮೊಬೈಲ್ ಅಕ್ಕಿ ವ್ಯಾನ್ ಉದ್ಘಾಟನೆಗೊಳ್ಳಲಿದೆ. ಒಟ್ಟು 25 ಮೊಬೈಲ್ ವ್ಯಾನ್ ಗಳ ಮೂಲಕ ಅಕ್ಕಿ ವಿತರಣೆ ನಡೆಸಲಾಗುತ್ತಿದ್ದು, ಬೆಂಗಳೂರಿನಲ್ಲಿ 5 ಕಡೆಗಳಲ್ಲಿ ಮೊಬೈಲ್ ವ್ಯಾನ್ ಸೇವೆ ದೊರೆಯಲಿದೆ. ಇದನ್ನ ಹೊರತುಪಡಿಸಿ ರಾಜ್ಯಾದ್ಯಂತ 20 ಮೊಬೈಲ್ ವ್ಯಾನ್ಗಳು(Mobile Van) ಸಂಚರಿಸಲಿವೆ.
ಈಗಾಗಲೇ ಕಡಲೆಬೇಳೆ ಹಾಗೂ ಗೋಧಿ ಹಿಟ್ಟನ್ನ ಕಡಿಮೆ ಬೆಲೆಗೆ ನೀಡಲಾಗುತ್ತಿದೆ. ಈ ಯೋಜನೆಯ ಮುಂದಿನ ಭಾಗವಾಗಿ ಅಕ್ಕಿಯನ್ನು ವ್ಯಾನ್ಗಳಲ್ಲಿ ವಿತರಣೆ ಮಾಡಲಾಗುತ್ತಿದೆ. ಎಲ್ಲಾ ರಿಲಾಯನ್ಸ್ ಮಾರ್ಟ್ ನಲ್ಲೂ ಮುಂದಿನ ನಾಲ್ಕು ದಿನಗಳ ಕಾಲ 29ರೂಪಾಯಿ ದರದ ಅಕ್ಕಿ ಸಿಗಲಿದೆ. ಆನ್ ಲೈನ್ ಹೋಂ ಡೆಲಿವರಿ ಆ್ಯಪ್ಗಳಲ್ಲೂ ಅಕ್ಕಿ ದೊರೆಯಲಿದೆ ಎಂದು ನಾಫೆಡ್ ಮುಖ್ಯಸ್ಥೆ ಜ್ಯೋತಿ ಪಾಟೀಲ್ ಮಾಹಿತಿ ನೀಡಿದ್ದಾರೆ.
ಈ ಭಾರತ್ ರೈಸ್ ಅನ್ನು ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ (ನಾಫೆಡ್)(NAFED), ನ್ಯಾಷನಲ್ ಕೋಆಪರೇಟಿವ್ ಕನ್ಸ್ಯೂಮರ್ಸ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಎನ್ಸಿಸಿಎಫ್), ಕೇಂದ್ರೀಯ ಭಂಡಾರ್ ಮಳಿಗೆಗಳು ಮತ್ತು ಮೊಬೈಲ್ ವ್ಯಾನ್ಗಳ ಮೂಲಕ ಮಾರಾಟ ಮಾಡಲಾಗುವುದು ಎಂದು ತಿಳಿದಿದೆ.
From today (February 6), one kg of rice will be available for 29 rupees! Yes, this is surprising but true. A special scheme to buy rice directly from farmers and distribute it at a low price is being launched today.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…