ಅರಣ್ಯ ಇಲಾಖಾ ಸಿಬಂದಿಗಳ ಪ್ರಯತ್ನಕ್ಕೆ ಯಶಸ್ಸು | ಕಾಡಾನೆ ಸೆರೆ | ಆನೆ ಶಿಬಿರಕ್ಕೆ ರವಾನೆಗೆ ವ್ಯವಸ್ಥೆ |

February 23, 2023
10:55 PM

ಕಡಬ ತಾಲೂಕಿನ ರೆಂಜಿಲಾಡಿ ಬಳಿ ಇಬ್ಬರನ್ನು ಬಲಿ ತೆಗೆದುಕೊಂಡ ಆನೆಯ ಹಿಂಡಿನಿಂದ ನರ ಹಂತಕ ಆನೆಯನ್ನು ಹಿಡಿಯುವ ಪ್ರಯತ್ನದಲ್ಲಿ ಅರಣ್ಯ ಇಲಾಖಾ ಸಿಬಂದಿಗಳು ಯಶಸ್ಸಾಗಿದ್ದಾರೆ. ಮೂರು ದಿನಗಳ ಕಾರ್ಯಾಚರಣೆ ಬಳಿಕ ಕಾಡಾನೆ ಸೆರೆಯಾಗಿದೆ.

Advertisement
Advertisement

ಕಡಬದ ಕೊಂಬಾರು ರಕ್ಷಿತಾರಣ್ಯದಲ್ಲಿ ಕಾಡಾನೆ ಪತ್ತೆ ಹಚ್ಚಿ ಅರಿವಳಿಕೆ ಔಷಧಿ  ನೀಡಿ ದುಬಾರೆ ಸಾಕಾನೆ ಶಿಬಿರದಿಂದ‌ ಆಗಮಿಸಿದ 5 ಆನೆಗಳ ಸಹಕಾರದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.ಕಾಡಾನೆ ಸೆರೆ ಹಿಡಿಯುವುದರಲ್ಲಿ ಪಳಗಿರುವ ಅಭಿಮನ್ಯು,ಪ್ರಶಾಂತ್, ಹರ್ಷ,ಕಂಜನ್ ಹಾಗು ಮಹೇಂದ್ರ ಎಂಬ ಸಾಕಾನೆಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದೆ. ಮಂಗಳವಾರ ಬೆಳಗ್ಗಿನಿಂದ‌ ಆರಂಭಗೊಂಡ ಅರಣ್ಯ ಇಲಾಖೆಯ ಕಾರ್ಯಾಚರಣೆ  ಗುರುವಾರ ಸಂಜೆಯ ವೇಳೆಗೆ ಯಶಸ್ವಿಯಾಗಿದೆ. ಮುಂದೆ  ಸಾಕಾನೆಗಳ ಸಹಕಾರದಲ್ಲಿ ಕಾಡಾನೆಯನ್ನು ಬಂಧಿಸಿ ಆನೆ ಶಿಬಿರಕ್ಕೆ ಕರೆದೊಯ್ಯಲಾಗುತ್ತದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ದಿನೇಶ್ ಕುಮಾರ್ ತಿಳಿಸಿದ್ದಾರೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ
June 2, 2025
7:33 AM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ
June 2, 2025
7:26 AM
by: ದ ರೂರಲ್ ಮಿರರ್.ಕಾಂ
ಸಿಂಹ ರಾಶಿಯನ್ನು ಪ್ರವೇಶಿಸಲಿರುವ ಮಂಗಳ | ಜೂನ್ 7 ರಿಂದ 3 ರಾಶಿಯವರಿಗೆ ಶುಭ ಫಲ
June 2, 2025
7:16 AM
by: ದ ರೂರಲ್ ಮಿರರ್.ಕಾಂ
ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….
June 1, 2025
6:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group