ಅರಣ್ಯ ಇಲಾಖಾ ಸಿಬಂದಿಗಳ ಪ್ರಯತ್ನಕ್ಕೆ ಯಶಸ್ಸು | ಕಾಡಾನೆ ಸೆರೆ | ಆನೆ ಶಿಬಿರಕ್ಕೆ ರವಾನೆಗೆ ವ್ಯವಸ್ಥೆ |

February 23, 2023
10:55 PM

ಕಡಬ ತಾಲೂಕಿನ ರೆಂಜಿಲಾಡಿ ಬಳಿ ಇಬ್ಬರನ್ನು ಬಲಿ ತೆಗೆದುಕೊಂಡ ಆನೆಯ ಹಿಂಡಿನಿಂದ ನರ ಹಂತಕ ಆನೆಯನ್ನು ಹಿಡಿಯುವ ಪ್ರಯತ್ನದಲ್ಲಿ ಅರಣ್ಯ ಇಲಾಖಾ ಸಿಬಂದಿಗಳು ಯಶಸ್ಸಾಗಿದ್ದಾರೆ. ಮೂರು ದಿನಗಳ ಕಾರ್ಯಾಚರಣೆ ಬಳಿಕ ಕಾಡಾನೆ ಸೆರೆಯಾಗಿದೆ.

ಕಡಬದ ಕೊಂಬಾರು ರಕ್ಷಿತಾರಣ್ಯದಲ್ಲಿ ಕಾಡಾನೆ ಪತ್ತೆ ಹಚ್ಚಿ ಅರಿವಳಿಕೆ ಔಷಧಿ  ನೀಡಿ ದುಬಾರೆ ಸಾಕಾನೆ ಶಿಬಿರದಿಂದ‌ ಆಗಮಿಸಿದ 5 ಆನೆಗಳ ಸಹಕಾರದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.ಕಾಡಾನೆ ಸೆರೆ ಹಿಡಿಯುವುದರಲ್ಲಿ ಪಳಗಿರುವ ಅಭಿಮನ್ಯು,ಪ್ರಶಾಂತ್, ಹರ್ಷ,ಕಂಜನ್ ಹಾಗು ಮಹೇಂದ್ರ ಎಂಬ ಸಾಕಾನೆಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದೆ. ಮಂಗಳವಾರ ಬೆಳಗ್ಗಿನಿಂದ‌ ಆರಂಭಗೊಂಡ ಅರಣ್ಯ ಇಲಾಖೆಯ ಕಾರ್ಯಾಚರಣೆ  ಗುರುವಾರ ಸಂಜೆಯ ವೇಳೆಗೆ ಯಶಸ್ವಿಯಾಗಿದೆ. ಮುಂದೆ  ಸಾಕಾನೆಗಳ ಸಹಕಾರದಲ್ಲಿ ಕಾಡಾನೆಯನ್ನು ಬಂಧಿಸಿ ಆನೆ ಶಿಬಿರಕ್ಕೆ ಕರೆದೊಯ್ಯಲಾಗುತ್ತದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ದಿನೇಶ್ ಕುಮಾರ್ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌
March 14, 2026
6:55 AM
by: ಮಿರರ್‌ ಡೆಸ್ಕ್
ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
March 13, 2026
10:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror