ಕಡಬ ತಾಲೂಕಿನ ರೆಂಜಿಲಾಡಿ ಬಳಿ ಇಬ್ಬರನ್ನು ಬಲಿ ತೆಗೆದುಕೊಂಡ ಆನೆಯ ಹಿಂಡಿನಿಂದ ನರ ಹಂತಕ ಆನೆಯನ್ನು ಹಿಡಿಯುವ ಪ್ರಯತ್ನದಲ್ಲಿ ಅರಣ್ಯ ಇಲಾಖಾ ಸಿಬಂದಿಗಳು ಯಶಸ್ಸಾಗಿದ್ದಾರೆ. ಮೂರು ದಿನಗಳ ಕಾರ್ಯಾಚರಣೆ ಬಳಿಕ ಕಾಡಾನೆ ಸೆರೆಯಾಗಿದೆ.
ಕಡಬದ ಕೊಂಬಾರು ರಕ್ಷಿತಾರಣ್ಯದಲ್ಲಿ ಕಾಡಾನೆ ಪತ್ತೆ ಹಚ್ಚಿ ಅರಿವಳಿಕೆ ಔಷಧಿ ನೀಡಿ ದುಬಾರೆ ಸಾಕಾನೆ ಶಿಬಿರದಿಂದ ಆಗಮಿಸಿದ 5 ಆನೆಗಳ ಸಹಕಾರದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.ಕಾಡಾನೆ ಸೆರೆ ಹಿಡಿಯುವುದರಲ್ಲಿ ಪಳಗಿರುವ ಅಭಿಮನ್ಯು,ಪ್ರಶಾಂತ್, ಹರ್ಷ,ಕಂಜನ್ ಹಾಗು ಮಹೇಂದ್ರ ಎಂಬ ಸಾಕಾನೆಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದೆ. ಮಂಗಳವಾರ ಬೆಳಗ್ಗಿನಿಂದ ಆರಂಭಗೊಂಡ ಅರಣ್ಯ ಇಲಾಖೆಯ ಕಾರ್ಯಾಚರಣೆ ಗುರುವಾರ ಸಂಜೆಯ ವೇಳೆಗೆ ಯಶಸ್ವಿಯಾಗಿದೆ. ಮುಂದೆ ಸಾಕಾನೆಗಳ ಸಹಕಾರದಲ್ಲಿ ಕಾಡಾನೆಯನ್ನು ಬಂಧಿಸಿ ಆನೆ ಶಿಬಿರಕ್ಕೆ ಕರೆದೊಯ್ಯಲಾಗುತ್ತದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ದಿನೇಶ್ ಕುಮಾರ್ ತಿಳಿಸಿದ್ದಾರೆ.
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…