ಕಡಬ ತಾಲೂಕಿನ ರೆಂಜಿಲಾಡಿ ಬಳಿ ಇಬ್ಬರನ್ನು ಬಲಿ ತೆಗೆದುಕೊಂಡ ಆನೆಯ ಹಿಂಡಿನಿಂದ ನರ ಹಂತಕ ಆನೆಯನ್ನು ಹಿಡಿಯುವ ಪ್ರಯತ್ನದಲ್ಲಿ ಅರಣ್ಯ ಇಲಾಖಾ ಸಿಬಂದಿಗಳು ಯಶಸ್ಸಾಗಿದ್ದಾರೆ. ಮೂರು ದಿನಗಳ ಕಾರ್ಯಾಚರಣೆ ಬಳಿಕ ಕಾಡಾನೆ ಸೆರೆಯಾಗಿದೆ.
ಕಡಬದ ಕೊಂಬಾರು ರಕ್ಷಿತಾರಣ್ಯದಲ್ಲಿ ಕಾಡಾನೆ ಪತ್ತೆ ಹಚ್ಚಿ ಅರಿವಳಿಕೆ ಔಷಧಿ ನೀಡಿ ದುಬಾರೆ ಸಾಕಾನೆ ಶಿಬಿರದಿಂದ ಆಗಮಿಸಿದ 5 ಆನೆಗಳ ಸಹಕಾರದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.ಕಾಡಾನೆ ಸೆರೆ ಹಿಡಿಯುವುದರಲ್ಲಿ ಪಳಗಿರುವ ಅಭಿಮನ್ಯು,ಪ್ರಶಾಂತ್, ಹರ್ಷ,ಕಂಜನ್ ಹಾಗು ಮಹೇಂದ್ರ ಎಂಬ ಸಾಕಾನೆಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದೆ. ಮಂಗಳವಾರ ಬೆಳಗ್ಗಿನಿಂದ ಆರಂಭಗೊಂಡ ಅರಣ್ಯ ಇಲಾಖೆಯ ಕಾರ್ಯಾಚರಣೆ ಗುರುವಾರ ಸಂಜೆಯ ವೇಳೆಗೆ ಯಶಸ್ವಿಯಾಗಿದೆ. ಮುಂದೆ ಸಾಕಾನೆಗಳ ಸಹಕಾರದಲ್ಲಿ ಕಾಡಾನೆಯನ್ನು ಬಂಧಿಸಿ ಆನೆ ಶಿಬಿರಕ್ಕೆ ಕರೆದೊಯ್ಯಲಾಗುತ್ತದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ದಿನೇಶ್ ಕುಮಾರ್ ತಿಳಿಸಿದ್ದಾರೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…