Advertisement
ಪ್ರಮುಖ

ಆಪರೇಷನ್‌ ಹಸ್ತದಿಂದ ಬಿಜೆಪಿಗೆ ಭೀತಿ | ಬಿಎಸ್‌ವೈ ನೇತೃತ್ವದಲ್ಲಿ ಗಂಭೀರ ಚರ್ಚೆ | ವಲಸಿಗರ ಜೊತೆ ಸಮಾಲೋಚನೆ |

Share

ಮೊನ್ನೆ ಮೊನ್ನೆಯವರೆಗೆ ಆಪರೇಷನ್‌ ಕಮಲ ಸದ್ದು ಮಾಡಿತ್ತು. ಈಗ ರಾಜ್ಯದಲ್ಲಿ ಆಪರೇಶಷನ್‌  ಹಸ್ತ ಸದ್ದು ಮಾಡುತ್ತಿದೆ. ಈ ನಿಟ್ಟಿನಲ್ಲಿ ವಲಸಿಗರನ್ನು ತನ್ನ ಉಳಿಸಿಕೊಳ್ಳುವ ಹಾಗೂ ಬಿಜೆಪಿಯ ಯಾವ ನಾಯಕರೂ ಕಾಂಗ್ರೆಸ್‌  ಕಡೆ ವಾಲದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಬಿಜೆಪಿ ಹೈಕಮಾಂಡ್‌  ಬಿಎಸ್‌ವೈ ಹೆಗಲಿಗೆ ಹಾಕಿದೆ. ಈ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆ ತಯಾರಿ, ಆಪರೇಷನ್ ಹಸ್ತ, ಪಕ್ಷ ಸಂಘಟನೆ, ಸರ್ಕಾರದ ವಿರುದ್ಧ ಹೋರಾಟ ಸೇರಿದಂತೆ ಅನೇಕ ಪ್ರಮುಖ ವಿಚಾರಗಳ ಬಗ್ಗೆ ಬಿಜೆಪಿ ಕೋರ್ ಕಮಿಟಿ  ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಹಿರಿಯ ನಾಯಕರು ಸಭೆ ನಡೆಸಿ ಚರ್ಚಿಸಿದರು. ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಆಪರೇಷನ್ ಹಸ್ತದ ಬಗ್ಗೆ ಗಂಭೀರ ಚರ್ಚೆ ನಡೆಯಿತು. ಆಪರೇಷನ್ ಹಸ್ತಕ್ಕೆ ಬ್ರೇಕ್ ಹಾಕುವ ಬಗ್ಗೆ ನಾಯಕರು ಚರ್ಚಿಸಿದರು.  135 ಸ್ಥಾನ ಗೆದ್ದಿದ್ರೂ ನಮ್ಮ ಶಾಸಕರ ಮೇಲೆ ಕಣ್ಣು ಹಾಕಿದ್ದಾರೆ ಎಂದು ಕೆಲ ನಾಯಕರು ಆಕ್ರೋಶ ಹೊರಹಾಕಿದರು. ವಲಸಿಗರಲ್ಲಿ ಯಾರ‍್ಯಾರು ಹೋಗಬಹುದು? ಅವರನ್ನು ಹೇಗೆ ತಡೆಯಬಹುದು ಎಂಬ ಬಗ್ಗೆ ಮಾತುಕತೆ ನಡೆಸಿದರು. ಈ ವೇಳೆ, ವಲಸಿಗರ ಜೊತೆ ಸಮಾಲೋಚನೆ ಮಾಡುವುದಾಗಿ ಸಭೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ರಾಜ್ಯ ಸರ್ಕಾರದ ಮೇಲೆ ಬಂದಿರುವ ಕಮಿಷನ್ ಆರೋಪ ವಿಚಾರದಲ್ಲಿ ಹೋರಾಟಕ್ಕೆ ತಂತ್ರ, ಗುತ್ತಿಗೆದಾರರು ಮಾಡಿರುವ ಆರೋಪಕ್ಕೆ ರಾಜ್ಯಾದ್ಯಂತ ಹೋರಾಟಕ್ಕೆ ರೂಪುರೇಷೆ, ಎನ್‌ಇಪಿ ರದ್ದು ಮಾಡುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಹೋರಾಟಕ್ಕೆ ಪ್ಲಾನ್, ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಮಾಡುವ ರಾಜ್ಯ ಸರ್ಕಾರದ ನಡೆಗೆ ವಿವಿಧ ಸ್ವರೂಪದ ಹೋರಾಟಕ್ಕೆ ರೂಪುರೇಷೆ, ಕಾಂಗ್ರೆಸ್‌ಗೆ ಮರಳುತ್ತಾರೆ ಎನ್ನಲಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಬೈರತಿ ಬಸವರಾಜ್ ಮತ್ತಿತರರ ಉಳಿಸಿಕೊಳ್ಳುವ ಬಗ್ಗೆ ಚರ್ಚೆ ಬಿಬಿಎಂಪಿ ಚುನಾವಣೆ, ವಾರ್ಡ್ ಮರುವಿಂಗಡಣೆ ಅವೈಜ್ಞಾನಿಕ ಎಂದು ಕಾನೂನು ಹೋರಾಟದ ಚರ್ಚೆ, ಲೋಕಸಭೆ ಚುನಾವಣಾ ತಯಾರಿ, ಪಕ್ಷ ಸಂಘಟನೆ ಬಗ್ಗೆ ಚರ್ಚೆ, ಲೋಕಸಭೆ ಚುನಾವಣೆಗೆ ರಿವರ್ಸ್ ಆಪರೇಷನ್ ಮೊದಲಾದ ವಿಷಯಗಳ ಬಗ್ಗೆ ಸಮಿತಿ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಡಿ.ವಿ. ಸದಾನಂದ ಗೌಡ, ಮಾಜಿ ಸಚಿವರಾದ ಗೋವಿಂದ ಕಾರಜೋಳ, ಆರ್. ಅಶೋಕ್, ಕೆ.ಎಸ್. ಈಶ್ವರಪ್ಪ, ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಬಿ. ಶ್ರೀರಾಮುಲು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ. ರಾಜೇಶ್ ಸೇರಿ ಅನೇಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

Source : Digital Media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

19 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago