ಸುದ್ದಿಗಳು

ಮುಂಬೈ ತಲುಪಿದ ಆಪರೇಷನ್ ಕಾವೇರಿ 2ನೇ ವಿಮಾನ, ಸುಡಾನ್‌ನಿಂದ ತವರಿಗೆ ಮರಳಿದ 246 ಭಾರತೀಯರು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಿಂಸಾಚಾರ ಪೀಡಿತ ಸುಡಾನ್‌ನಲ್ಲಿ ಸಿಲುಕಿ, ಸ್ಥಳಾಂತರಗೊಂಡಿದ್ದ ಎರಡನೇ ತಂಡದ ಭಾರತೀಯರು ಗುರುವಾರ ಮಧ್ಯಾಹ್ನ ಮುಂಬೈ ತಲುಪಿದ್ದಾರೆ. ಇಂದು ಮುಂಜಾನೆ ಜಿದ್ದಾದಿಂದ ಟೇಕಾಫ್ ಆದ ಭಾರತೀಯ ವಾಯುಪಡೆಯ ವಿಮಾನದ ಮೂಲಕ 246 ಭಾರತೀಯರನ್ನು ಆಪರೇಷನ್ ಕಾವೇರಿ ಅಡಿಯಲ್ಲಿ ಮರಳಿ ಕರೆತರಲಾಗಿದೆ.

ಸುದ್ದಿ ಸಂಸ್ಥೆ ANI ವರದಿಯ ಪ್ರಕಾರ, ಸುಡಾನ್‌ನಿಂದ 246 ಭಾರತೀಯರನ್ನು ಹೊತ್ತ ಮತ್ತೊಂದು ವಿಮಾನ ಮುಂಬೈ ತಲುಪಿದೆ. ನಿನ್ನೆ 360 ಭಾರತೀಯರ ಮೊದಲ ಬ್ಯಾಚ್ ನವದೆಹಲಿ ತಲುಪಿತ್ತು. ಮತ್ತೊಂದು ಆಪರೇಷನ್ ಕಾವೇರಿ ವಿಮಾನ ಮುಂಬೈಗೆ ಆಗಮಿಸಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ ಮಾಡಿದ್ದಾರೆ.

Advertisement
Advertisement

“ಆಪರೇಷನ್ ಕಾವೇರಿ” ಎಂಬುದು ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರನ್ನು ಸ್ಥಳಾಂತರಿಸಲು ಸರ್ಕಾರವು ಪ್ರಾರಂಭಿಸಿದ ರಕ್ಷಣಾ ಕಾರ್ಯಾಚರಣೆಯಾಗಿದೆ. ಸುಡಾನ್‌ನಲ್ಲಿ ಸೇನೆ ಮತ್ತು ಅರೆಸೈನಿಕ ಗುಂಪುಗಳು ಘರ್ಷಣೆ ನಡೆಯುತ್ತಿದ್ದು, ಕರ್ನಾಟಕದವರೂ ಸೇರಿದಂತ ದೇಶದ ಸಾವಿರಾರು ಮಂದಿ ಸಿಲುಕಿದ್ದರು.

246 ಮಂದಿ ಭಾರತೀಯರಿದ್ದ ಯುದ್ಧ ವಿಮಾನ ಗುರುವಾರ ಬೆಳಿಗ್ಗೆ 11 ಗಂಟೆಗೆ ಜಿದ್ದಾದಿಂದ ಹೊರಟಿತ್ತು. ಮಧ್ಯಾಹ್ಮ 3.30ರ ವೇಳೆಗೆ ಮುಂಬೈ ತಲುಪಿದೆ ಎಂದು ಅಧಿಕಾರಿಯೊಬ್ಬರು ಎಎನ್​ಐಗೆ ತಿಳಿಸಿದ್ದಾರೆ.

ಸುಡಾನ್‌ನಲ್ಲಿ ಯುಎಸ್ ಮತ್ತು ಸೌದಿ ಅರೇಬಿಯಾ ಮಧ್ಯಸ್ಥಿಕೆಯಲ್ಲಿ 72 ಗಂಟೆಗಳ ಕದನ ವಿರಾಮ ಘೋಷಿಸಲಾಗಿದೆ ಎಲ್ಲಾ ದೇಶಗಳು ತಮ್ಮ ನಾಗರಿಕರನ್ನು ಸುಡಾನ್‌ನಿಂದ ಸ್ಥಳಾಂತರಿಸುವಲ್ಲಿ ನಿರತವಾಗಿವೆ. ಭಾರತೀಯರನ್ನು ಆಪರೇಷನ್​ ಕಾವೇರಿ ಕಾರ್ಯಾಚರಣೆ ಅಡಿ ಪೋರ್ಟ್​ ಸುಡಾನ್​ಗೆ ಬಸ್ಸುಗಳ ಮೂಲಕ ಕರೆತಂದು, ಅಲ್ಲಿಂದ ಸೌದಿ ಅರೇಬಿಯಾದ ಜಿದ್ದಾಗೆ ಯುದ್ದ ವಿಮಾನಗಳ ಮೂಲಕ ಕರೆತಂದು ರಕ್ಷಿಸಲಾಗುತ್ತದೆ.

ಸೋಮವಾರ ಆರಂಭಿಸಲಾದ ‘ಆಪರೇಷನ್ ಕಾವೇರಿ’ ಮಿಷನ್ ಅಡಿಯಲ್ಲಿ ಭಾರತವು ಜಿದ್ದಾದಲ್ಲಿ ಸಾರಿಗೆ ಸೌಲಭ್ಯವನ್ನು ಸ್ಥಾಪಿಸಿದೆ. ಸುಡಾನ್‌ನಿಂದ ಸ್ಥಳಾಂತರಿಸಿದ ನಂತರ ಎಲ್ಲಾ ಭಾರತೀಯರನ್ನು ಸೌದಿ ಅರೇಬಿಯಾಕ್ಕೆ ಕರೆದೊಯ್ಯಲಾಗಿದೆ.

Advertisement

ಭಾರತೀಯ ವಾಯುಪಡೆಯ (IAF) ಎರಡು ಮಿಲಿಟರಿ ಸಾರಿಗೆ ವಿಮಾನಗಳು ಸುಡಾನ್‌ನಿಂದ 500 ಕ್ಕೂ ಹೆಚ್ಚು ಭಾರತೀಯರನ್ನು ಸ್ಥಳಾಂತರಿಸಿದರೆ, ನೌಕಾಪಡೆಯ ಹಡಗು ಸಂಘರ್ಷದಿಂದ ಪೀಡಿತ ಸ್ಥಳದಿಂದ  278 ನಾಗರಿಕರನ್ನು ರಕ್ಷಿಸಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಇದುವರೆಗೆ ಸುಡಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಒಟ್ಟು ಭಾರತೀಯರ ಸಂಖ್ಯೆ ಸುಮಾರು 530 ಎಂದು ತಿಳಿದುಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

10 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

11 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

12 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

13 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

14 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

15 hours ago