Advertisement
ಸುದ್ದಿಗಳು

ಮುಂಬೈ ತಲುಪಿದ ಆಪರೇಷನ್ ಕಾವೇರಿ 2ನೇ ವಿಮಾನ, ಸುಡಾನ್‌ನಿಂದ ತವರಿಗೆ ಮರಳಿದ 246 ಭಾರತೀಯರು

Share

ಹಿಂಸಾಚಾರ ಪೀಡಿತ ಸುಡಾನ್‌ನಲ್ಲಿ ಸಿಲುಕಿ, ಸ್ಥಳಾಂತರಗೊಂಡಿದ್ದ ಎರಡನೇ ತಂಡದ ಭಾರತೀಯರು ಗುರುವಾರ ಮಧ್ಯಾಹ್ನ ಮುಂಬೈ ತಲುಪಿದ್ದಾರೆ. ಇಂದು ಮುಂಜಾನೆ ಜಿದ್ದಾದಿಂದ ಟೇಕಾಫ್ ಆದ ಭಾರತೀಯ ವಾಯುಪಡೆಯ ವಿಮಾನದ ಮೂಲಕ 246 ಭಾರತೀಯರನ್ನು ಆಪರೇಷನ್ ಕಾವೇರಿ ಅಡಿಯಲ್ಲಿ ಮರಳಿ ಕರೆತರಲಾಗಿದೆ.

ಸುದ್ದಿ ಸಂಸ್ಥೆ ANI ವರದಿಯ ಪ್ರಕಾರ, ಸುಡಾನ್‌ನಿಂದ 246 ಭಾರತೀಯರನ್ನು ಹೊತ್ತ ಮತ್ತೊಂದು ವಿಮಾನ ಮುಂಬೈ ತಲುಪಿದೆ. ನಿನ್ನೆ 360 ಭಾರತೀಯರ ಮೊದಲ ಬ್ಯಾಚ್ ನವದೆಹಲಿ ತಲುಪಿತ್ತು. ಮತ್ತೊಂದು ಆಪರೇಷನ್ ಕಾವೇರಿ ವಿಮಾನ ಮುಂಬೈಗೆ ಆಗಮಿಸಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ ಮಾಡಿದ್ದಾರೆ.

“ಆಪರೇಷನ್ ಕಾವೇರಿ” ಎಂಬುದು ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರನ್ನು ಸ್ಥಳಾಂತರಿಸಲು ಸರ್ಕಾರವು ಪ್ರಾರಂಭಿಸಿದ ರಕ್ಷಣಾ ಕಾರ್ಯಾಚರಣೆಯಾಗಿದೆ. ಸುಡಾನ್‌ನಲ್ಲಿ ಸೇನೆ ಮತ್ತು ಅರೆಸೈನಿಕ ಗುಂಪುಗಳು ಘರ್ಷಣೆ ನಡೆಯುತ್ತಿದ್ದು, ಕರ್ನಾಟಕದವರೂ ಸೇರಿದಂತ ದೇಶದ ಸಾವಿರಾರು ಮಂದಿ ಸಿಲುಕಿದ್ದರು.

246 ಮಂದಿ ಭಾರತೀಯರಿದ್ದ ಯುದ್ಧ ವಿಮಾನ ಗುರುವಾರ ಬೆಳಿಗ್ಗೆ 11 ಗಂಟೆಗೆ ಜಿದ್ದಾದಿಂದ ಹೊರಟಿತ್ತು. ಮಧ್ಯಾಹ್ಮ 3.30ರ ವೇಳೆಗೆ ಮುಂಬೈ ತಲುಪಿದೆ ಎಂದು ಅಧಿಕಾರಿಯೊಬ್ಬರು ಎಎನ್​ಐಗೆ ತಿಳಿಸಿದ್ದಾರೆ.

ಸುಡಾನ್‌ನಲ್ಲಿ ಯುಎಸ್ ಮತ್ತು ಸೌದಿ ಅರೇಬಿಯಾ ಮಧ್ಯಸ್ಥಿಕೆಯಲ್ಲಿ 72 ಗಂಟೆಗಳ ಕದನ ವಿರಾಮ ಘೋಷಿಸಲಾಗಿದೆ ಎಲ್ಲಾ ದೇಶಗಳು ತಮ್ಮ ನಾಗರಿಕರನ್ನು ಸುಡಾನ್‌ನಿಂದ ಸ್ಥಳಾಂತರಿಸುವಲ್ಲಿ ನಿರತವಾಗಿವೆ. ಭಾರತೀಯರನ್ನು ಆಪರೇಷನ್​ ಕಾವೇರಿ ಕಾರ್ಯಾಚರಣೆ ಅಡಿ ಪೋರ್ಟ್​ ಸುಡಾನ್​ಗೆ ಬಸ್ಸುಗಳ ಮೂಲಕ ಕರೆತಂದು, ಅಲ್ಲಿಂದ ಸೌದಿ ಅರೇಬಿಯಾದ ಜಿದ್ದಾಗೆ ಯುದ್ದ ವಿಮಾನಗಳ ಮೂಲಕ ಕರೆತಂದು ರಕ್ಷಿಸಲಾಗುತ್ತದೆ.

ಸೋಮವಾರ ಆರಂಭಿಸಲಾದ ‘ಆಪರೇಷನ್ ಕಾವೇರಿ’ ಮಿಷನ್ ಅಡಿಯಲ್ಲಿ ಭಾರತವು ಜಿದ್ದಾದಲ್ಲಿ ಸಾರಿಗೆ ಸೌಲಭ್ಯವನ್ನು ಸ್ಥಾಪಿಸಿದೆ. ಸುಡಾನ್‌ನಿಂದ ಸ್ಥಳಾಂತರಿಸಿದ ನಂತರ ಎಲ್ಲಾ ಭಾರತೀಯರನ್ನು ಸೌದಿ ಅರೇಬಿಯಾಕ್ಕೆ ಕರೆದೊಯ್ಯಲಾಗಿದೆ.

ಭಾರತೀಯ ವಾಯುಪಡೆಯ (IAF) ಎರಡು ಮಿಲಿಟರಿ ಸಾರಿಗೆ ವಿಮಾನಗಳು ಸುಡಾನ್‌ನಿಂದ 500 ಕ್ಕೂ ಹೆಚ್ಚು ಭಾರತೀಯರನ್ನು ಸ್ಥಳಾಂತರಿಸಿದರೆ, ನೌಕಾಪಡೆಯ ಹಡಗು ಸಂಘರ್ಷದಿಂದ ಪೀಡಿತ ಸ್ಥಳದಿಂದ  278 ನಾಗರಿಕರನ್ನು ರಕ್ಷಿಸಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಇದುವರೆಗೆ ಸುಡಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಒಟ್ಟು ಭಾರತೀಯರ ಸಂಖ್ಯೆ ಸುಮಾರು 530 ಎಂದು ತಿಳಿದುಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

3 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

10 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

18 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

19 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago