ಸುದ್ದಿ ಸಂಸ್ಥೆ ANI ವರದಿಯ ಪ್ರಕಾರ, ಸುಡಾನ್ನಿಂದ 246 ಭಾರತೀಯರನ್ನು ಹೊತ್ತ ಮತ್ತೊಂದು ವಿಮಾನ ಮುಂಬೈ ತಲುಪಿದೆ. ನಿನ್ನೆ 360 ಭಾರತೀಯರ ಮೊದಲ ಬ್ಯಾಚ್ ನವದೆಹಲಿ ತಲುಪಿತ್ತು. ಮತ್ತೊಂದು ಆಪರೇಷನ್ ಕಾವೇರಿ ವಿಮಾನ ಮುಂಬೈಗೆ ಆಗಮಿಸಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ ಮಾಡಿದ್ದಾರೆ.
“ಆಪರೇಷನ್ ಕಾವೇರಿ” ಎಂಬುದು ಸುಡಾನ್ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರನ್ನು ಸ್ಥಳಾಂತರಿಸಲು ಸರ್ಕಾರವು ಪ್ರಾರಂಭಿಸಿದ ರಕ್ಷಣಾ ಕಾರ್ಯಾಚರಣೆಯಾಗಿದೆ. ಸುಡಾನ್ನಲ್ಲಿ ಸೇನೆ ಮತ್ತು ಅರೆಸೈನಿಕ ಗುಂಪುಗಳು ಘರ್ಷಣೆ ನಡೆಯುತ್ತಿದ್ದು, ಕರ್ನಾಟಕದವರೂ ಸೇರಿದಂತ ದೇಶದ ಸಾವಿರಾರು ಮಂದಿ ಸಿಲುಕಿದ್ದರು.
246 ಮಂದಿ ಭಾರತೀಯರಿದ್ದ ಯುದ್ಧ ವಿಮಾನ ಗುರುವಾರ ಬೆಳಿಗ್ಗೆ 11 ಗಂಟೆಗೆ ಜಿದ್ದಾದಿಂದ ಹೊರಟಿತ್ತು. ಮಧ್ಯಾಹ್ಮ 3.30ರ ವೇಳೆಗೆ ಮುಂಬೈ ತಲುಪಿದೆ ಎಂದು ಅಧಿಕಾರಿಯೊಬ್ಬರು ಎಎನ್ಐಗೆ ತಿಳಿಸಿದ್ದಾರೆ.
ಸುಡಾನ್ನಲ್ಲಿ ಯುಎಸ್ ಮತ್ತು ಸೌದಿ ಅರೇಬಿಯಾ ಮಧ್ಯಸ್ಥಿಕೆಯಲ್ಲಿ 72 ಗಂಟೆಗಳ ಕದನ ವಿರಾಮ ಘೋಷಿಸಲಾಗಿದೆ ಎಲ್ಲಾ ದೇಶಗಳು ತಮ್ಮ ನಾಗರಿಕರನ್ನು ಸುಡಾನ್ನಿಂದ ಸ್ಥಳಾಂತರಿಸುವಲ್ಲಿ ನಿರತವಾಗಿವೆ. ಭಾರತೀಯರನ್ನು ಆಪರೇಷನ್ ಕಾವೇರಿ ಕಾರ್ಯಾಚರಣೆ ಅಡಿ ಪೋರ್ಟ್ ಸುಡಾನ್ಗೆ ಬಸ್ಸುಗಳ ಮೂಲಕ ಕರೆತಂದು, ಅಲ್ಲಿಂದ ಸೌದಿ ಅರೇಬಿಯಾದ ಜಿದ್ದಾಗೆ ಯುದ್ದ ವಿಮಾನಗಳ ಮೂಲಕ ಕರೆತಂದು ರಕ್ಷಿಸಲಾಗುತ್ತದೆ.
ಸೋಮವಾರ ಆರಂಭಿಸಲಾದ ‘ಆಪರೇಷನ್ ಕಾವೇರಿ’ ಮಿಷನ್ ಅಡಿಯಲ್ಲಿ ಭಾರತವು ಜಿದ್ದಾದಲ್ಲಿ ಸಾರಿಗೆ ಸೌಲಭ್ಯವನ್ನು ಸ್ಥಾಪಿಸಿದೆ. ಸುಡಾನ್ನಿಂದ ಸ್ಥಳಾಂತರಿಸಿದ ನಂತರ ಎಲ್ಲಾ ಭಾರತೀಯರನ್ನು ಸೌದಿ ಅರೇಬಿಯಾಕ್ಕೆ ಕರೆದೊಯ್ಯಲಾಗಿದೆ.
ಭಾರತೀಯ ವಾಯುಪಡೆಯ (IAF) ಎರಡು ಮಿಲಿಟರಿ ಸಾರಿಗೆ ವಿಮಾನಗಳು ಸುಡಾನ್ನಿಂದ 500 ಕ್ಕೂ ಹೆಚ್ಚು ಭಾರತೀಯರನ್ನು ಸ್ಥಳಾಂತರಿಸಿದರೆ, ನೌಕಾಪಡೆಯ ಹಡಗು ಸಂಘರ್ಷದಿಂದ ಪೀಡಿತ ಸ್ಥಳದಿಂದ 278 ನಾಗರಿಕರನ್ನು ರಕ್ಷಿಸಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಇದುವರೆಗೆ ಸುಡಾನ್ನಿಂದ ಸ್ಥಳಾಂತರಿಸಲ್ಪಟ್ಟ ಒಟ್ಟು ಭಾರತೀಯರ ಸಂಖ್ಯೆ ಸುಮಾರು 530 ಎಂದು ತಿಳಿದುಬಂದಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…