Advertisement
ಸುದ್ದಿಗಳು

ಮುಂಬೈ ತಲುಪಿದ ಆಪರೇಷನ್ ಕಾವೇರಿ 2ನೇ ವಿಮಾನ, ಸುಡಾನ್‌ನಿಂದ ತವರಿಗೆ ಮರಳಿದ 246 ಭಾರತೀಯರು

Share

ಹಿಂಸಾಚಾರ ಪೀಡಿತ ಸುಡಾನ್‌ನಲ್ಲಿ ಸಿಲುಕಿ, ಸ್ಥಳಾಂತರಗೊಂಡಿದ್ದ ಎರಡನೇ ತಂಡದ ಭಾರತೀಯರು ಗುರುವಾರ ಮಧ್ಯಾಹ್ನ ಮುಂಬೈ ತಲುಪಿದ್ದಾರೆ. ಇಂದು ಮುಂಜಾನೆ ಜಿದ್ದಾದಿಂದ ಟೇಕಾಫ್ ಆದ ಭಾರತೀಯ ವಾಯುಪಡೆಯ ವಿಮಾನದ ಮೂಲಕ 246 ಭಾರತೀಯರನ್ನು ಆಪರೇಷನ್ ಕಾವೇರಿ ಅಡಿಯಲ್ಲಿ ಮರಳಿ ಕರೆತರಲಾಗಿದೆ.

ಸುದ್ದಿ ಸಂಸ್ಥೆ ANI ವರದಿಯ ಪ್ರಕಾರ, ಸುಡಾನ್‌ನಿಂದ 246 ಭಾರತೀಯರನ್ನು ಹೊತ್ತ ಮತ್ತೊಂದು ವಿಮಾನ ಮುಂಬೈ ತಲುಪಿದೆ. ನಿನ್ನೆ 360 ಭಾರತೀಯರ ಮೊದಲ ಬ್ಯಾಚ್ ನವದೆಹಲಿ ತಲುಪಿತ್ತು. ಮತ್ತೊಂದು ಆಪರೇಷನ್ ಕಾವೇರಿ ವಿಮಾನ ಮುಂಬೈಗೆ ಆಗಮಿಸಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ ಮಾಡಿದ್ದಾರೆ.

“ಆಪರೇಷನ್ ಕಾವೇರಿ” ಎಂಬುದು ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರನ್ನು ಸ್ಥಳಾಂತರಿಸಲು ಸರ್ಕಾರವು ಪ್ರಾರಂಭಿಸಿದ ರಕ್ಷಣಾ ಕಾರ್ಯಾಚರಣೆಯಾಗಿದೆ. ಸುಡಾನ್‌ನಲ್ಲಿ ಸೇನೆ ಮತ್ತು ಅರೆಸೈನಿಕ ಗುಂಪುಗಳು ಘರ್ಷಣೆ ನಡೆಯುತ್ತಿದ್ದು, ಕರ್ನಾಟಕದವರೂ ಸೇರಿದಂತ ದೇಶದ ಸಾವಿರಾರು ಮಂದಿ ಸಿಲುಕಿದ್ದರು.

246 ಮಂದಿ ಭಾರತೀಯರಿದ್ದ ಯುದ್ಧ ವಿಮಾನ ಗುರುವಾರ ಬೆಳಿಗ್ಗೆ 11 ಗಂಟೆಗೆ ಜಿದ್ದಾದಿಂದ ಹೊರಟಿತ್ತು. ಮಧ್ಯಾಹ್ಮ 3.30ರ ವೇಳೆಗೆ ಮುಂಬೈ ತಲುಪಿದೆ ಎಂದು ಅಧಿಕಾರಿಯೊಬ್ಬರು ಎಎನ್​ಐಗೆ ತಿಳಿಸಿದ್ದಾರೆ.

ಸುಡಾನ್‌ನಲ್ಲಿ ಯುಎಸ್ ಮತ್ತು ಸೌದಿ ಅರೇಬಿಯಾ ಮಧ್ಯಸ್ಥಿಕೆಯಲ್ಲಿ 72 ಗಂಟೆಗಳ ಕದನ ವಿರಾಮ ಘೋಷಿಸಲಾಗಿದೆ ಎಲ್ಲಾ ದೇಶಗಳು ತಮ್ಮ ನಾಗರಿಕರನ್ನು ಸುಡಾನ್‌ನಿಂದ ಸ್ಥಳಾಂತರಿಸುವಲ್ಲಿ ನಿರತವಾಗಿವೆ. ಭಾರತೀಯರನ್ನು ಆಪರೇಷನ್​ ಕಾವೇರಿ ಕಾರ್ಯಾಚರಣೆ ಅಡಿ ಪೋರ್ಟ್​ ಸುಡಾನ್​ಗೆ ಬಸ್ಸುಗಳ ಮೂಲಕ ಕರೆತಂದು, ಅಲ್ಲಿಂದ ಸೌದಿ ಅರೇಬಿಯಾದ ಜಿದ್ದಾಗೆ ಯುದ್ದ ವಿಮಾನಗಳ ಮೂಲಕ ಕರೆತಂದು ರಕ್ಷಿಸಲಾಗುತ್ತದೆ.

ಸೋಮವಾರ ಆರಂಭಿಸಲಾದ ‘ಆಪರೇಷನ್ ಕಾವೇರಿ’ ಮಿಷನ್ ಅಡಿಯಲ್ಲಿ ಭಾರತವು ಜಿದ್ದಾದಲ್ಲಿ ಸಾರಿಗೆ ಸೌಲಭ್ಯವನ್ನು ಸ್ಥಾಪಿಸಿದೆ. ಸುಡಾನ್‌ನಿಂದ ಸ್ಥಳಾಂತರಿಸಿದ ನಂತರ ಎಲ್ಲಾ ಭಾರತೀಯರನ್ನು ಸೌದಿ ಅರೇಬಿಯಾಕ್ಕೆ ಕರೆದೊಯ್ಯಲಾಗಿದೆ.

ಭಾರತೀಯ ವಾಯುಪಡೆಯ (IAF) ಎರಡು ಮಿಲಿಟರಿ ಸಾರಿಗೆ ವಿಮಾನಗಳು ಸುಡಾನ್‌ನಿಂದ 500 ಕ್ಕೂ ಹೆಚ್ಚು ಭಾರತೀಯರನ್ನು ಸ್ಥಳಾಂತರಿಸಿದರೆ, ನೌಕಾಪಡೆಯ ಹಡಗು ಸಂಘರ್ಷದಿಂದ ಪೀಡಿತ ಸ್ಥಳದಿಂದ  278 ನಾಗರಿಕರನ್ನು ರಕ್ಷಿಸಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಇದುವರೆಗೆ ಸುಡಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಒಟ್ಟು ಭಾರತೀಯರ ಸಂಖ್ಯೆ ಸುಮಾರು 530 ಎಂದು ತಿಳಿದುಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

6 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

13 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

21 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago