Advertisement
ಸುದ್ದಿಗಳು

ಮುಂಬೈ ತಲುಪಿದ ಆಪರೇಷನ್ ಕಾವೇರಿ 2ನೇ ವಿಮಾನ, ಸುಡಾನ್‌ನಿಂದ ತವರಿಗೆ ಮರಳಿದ 246 ಭಾರತೀಯರು

Share

ಹಿಂಸಾಚಾರ ಪೀಡಿತ ಸುಡಾನ್‌ನಲ್ಲಿ ಸಿಲುಕಿ, ಸ್ಥಳಾಂತರಗೊಂಡಿದ್ದ ಎರಡನೇ ತಂಡದ ಭಾರತೀಯರು ಗುರುವಾರ ಮಧ್ಯಾಹ್ನ ಮುಂಬೈ ತಲುಪಿದ್ದಾರೆ. ಇಂದು ಮುಂಜಾನೆ ಜಿದ್ದಾದಿಂದ ಟೇಕಾಫ್ ಆದ ಭಾರತೀಯ ವಾಯುಪಡೆಯ ವಿಮಾನದ ಮೂಲಕ 246 ಭಾರತೀಯರನ್ನು ಆಪರೇಷನ್ ಕಾವೇರಿ ಅಡಿಯಲ್ಲಿ ಮರಳಿ ಕರೆತರಲಾಗಿದೆ.

ಸುದ್ದಿ ಸಂಸ್ಥೆ ANI ವರದಿಯ ಪ್ರಕಾರ, ಸುಡಾನ್‌ನಿಂದ 246 ಭಾರತೀಯರನ್ನು ಹೊತ್ತ ಮತ್ತೊಂದು ವಿಮಾನ ಮುಂಬೈ ತಲುಪಿದೆ. ನಿನ್ನೆ 360 ಭಾರತೀಯರ ಮೊದಲ ಬ್ಯಾಚ್ ನವದೆಹಲಿ ತಲುಪಿತ್ತು. ಮತ್ತೊಂದು ಆಪರೇಷನ್ ಕಾವೇರಿ ವಿಮಾನ ಮುಂಬೈಗೆ ಆಗಮಿಸಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ ಮಾಡಿದ್ದಾರೆ.

Advertisement
Advertisement

“ಆಪರೇಷನ್ ಕಾವೇರಿ” ಎಂಬುದು ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರನ್ನು ಸ್ಥಳಾಂತರಿಸಲು ಸರ್ಕಾರವು ಪ್ರಾರಂಭಿಸಿದ ರಕ್ಷಣಾ ಕಾರ್ಯಾಚರಣೆಯಾಗಿದೆ. ಸುಡಾನ್‌ನಲ್ಲಿ ಸೇನೆ ಮತ್ತು ಅರೆಸೈನಿಕ ಗುಂಪುಗಳು ಘರ್ಷಣೆ ನಡೆಯುತ್ತಿದ್ದು, ಕರ್ನಾಟಕದವರೂ ಸೇರಿದಂತ ದೇಶದ ಸಾವಿರಾರು ಮಂದಿ ಸಿಲುಕಿದ್ದರು.

Advertisement

246 ಮಂದಿ ಭಾರತೀಯರಿದ್ದ ಯುದ್ಧ ವಿಮಾನ ಗುರುವಾರ ಬೆಳಿಗ್ಗೆ 11 ಗಂಟೆಗೆ ಜಿದ್ದಾದಿಂದ ಹೊರಟಿತ್ತು. ಮಧ್ಯಾಹ್ಮ 3.30ರ ವೇಳೆಗೆ ಮುಂಬೈ ತಲುಪಿದೆ ಎಂದು ಅಧಿಕಾರಿಯೊಬ್ಬರು ಎಎನ್​ಐಗೆ ತಿಳಿಸಿದ್ದಾರೆ.

ಸುಡಾನ್‌ನಲ್ಲಿ ಯುಎಸ್ ಮತ್ತು ಸೌದಿ ಅರೇಬಿಯಾ ಮಧ್ಯಸ್ಥಿಕೆಯಲ್ಲಿ 72 ಗಂಟೆಗಳ ಕದನ ವಿರಾಮ ಘೋಷಿಸಲಾಗಿದೆ ಎಲ್ಲಾ ದೇಶಗಳು ತಮ್ಮ ನಾಗರಿಕರನ್ನು ಸುಡಾನ್‌ನಿಂದ ಸ್ಥಳಾಂತರಿಸುವಲ್ಲಿ ನಿರತವಾಗಿವೆ. ಭಾರತೀಯರನ್ನು ಆಪರೇಷನ್​ ಕಾವೇರಿ ಕಾರ್ಯಾಚರಣೆ ಅಡಿ ಪೋರ್ಟ್​ ಸುಡಾನ್​ಗೆ ಬಸ್ಸುಗಳ ಮೂಲಕ ಕರೆತಂದು, ಅಲ್ಲಿಂದ ಸೌದಿ ಅರೇಬಿಯಾದ ಜಿದ್ದಾಗೆ ಯುದ್ದ ವಿಮಾನಗಳ ಮೂಲಕ ಕರೆತಂದು ರಕ್ಷಿಸಲಾಗುತ್ತದೆ.

Advertisement

ಸೋಮವಾರ ಆರಂಭಿಸಲಾದ ‘ಆಪರೇಷನ್ ಕಾವೇರಿ’ ಮಿಷನ್ ಅಡಿಯಲ್ಲಿ ಭಾರತವು ಜಿದ್ದಾದಲ್ಲಿ ಸಾರಿಗೆ ಸೌಲಭ್ಯವನ್ನು ಸ್ಥಾಪಿಸಿದೆ. ಸುಡಾನ್‌ನಿಂದ ಸ್ಥಳಾಂತರಿಸಿದ ನಂತರ ಎಲ್ಲಾ ಭಾರತೀಯರನ್ನು ಸೌದಿ ಅರೇಬಿಯಾಕ್ಕೆ ಕರೆದೊಯ್ಯಲಾಗಿದೆ.

ಭಾರತೀಯ ವಾಯುಪಡೆಯ (IAF) ಎರಡು ಮಿಲಿಟರಿ ಸಾರಿಗೆ ವಿಮಾನಗಳು ಸುಡಾನ್‌ನಿಂದ 500 ಕ್ಕೂ ಹೆಚ್ಚು ಭಾರತೀಯರನ್ನು ಸ್ಥಳಾಂತರಿಸಿದರೆ, ನೌಕಾಪಡೆಯ ಹಡಗು ಸಂಘರ್ಷದಿಂದ ಪೀಡಿತ ಸ್ಥಳದಿಂದ  278 ನಾಗರಿಕರನ್ನು ರಕ್ಷಿಸಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಇದುವರೆಗೆ ಸುಡಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಒಟ್ಟು ಭಾರತೀಯರ ಸಂಖ್ಯೆ ಸುಮಾರು 530 ಎಂದು ತಿಳಿದುಬಂದಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

8 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

10 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago