ಸುದ್ದಿ ಸಂಸ್ಥೆ ANI ವರದಿಯ ಪ್ರಕಾರ, ಸುಡಾನ್ನಿಂದ 246 ಭಾರತೀಯರನ್ನು ಹೊತ್ತ ಮತ್ತೊಂದು ವಿಮಾನ ಮುಂಬೈ ತಲುಪಿದೆ. ನಿನ್ನೆ 360 ಭಾರತೀಯರ ಮೊದಲ ಬ್ಯಾಚ್ ನವದೆಹಲಿ ತಲುಪಿತ್ತು. ಮತ್ತೊಂದು ಆಪರೇಷನ್ ಕಾವೇರಿ ವಿಮಾನ ಮುಂಬೈಗೆ ಆಗಮಿಸಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ ಮಾಡಿದ್ದಾರೆ.
“ಆಪರೇಷನ್ ಕಾವೇರಿ” ಎಂಬುದು ಸುಡಾನ್ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರನ್ನು ಸ್ಥಳಾಂತರಿಸಲು ಸರ್ಕಾರವು ಪ್ರಾರಂಭಿಸಿದ ರಕ್ಷಣಾ ಕಾರ್ಯಾಚರಣೆಯಾಗಿದೆ. ಸುಡಾನ್ನಲ್ಲಿ ಸೇನೆ ಮತ್ತು ಅರೆಸೈನಿಕ ಗುಂಪುಗಳು ಘರ್ಷಣೆ ನಡೆಯುತ್ತಿದ್ದು, ಕರ್ನಾಟಕದವರೂ ಸೇರಿದಂತ ದೇಶದ ಸಾವಿರಾರು ಮಂದಿ ಸಿಲುಕಿದ್ದರು.
246 ಮಂದಿ ಭಾರತೀಯರಿದ್ದ ಯುದ್ಧ ವಿಮಾನ ಗುರುವಾರ ಬೆಳಿಗ್ಗೆ 11 ಗಂಟೆಗೆ ಜಿದ್ದಾದಿಂದ ಹೊರಟಿತ್ತು. ಮಧ್ಯಾಹ್ಮ 3.30ರ ವೇಳೆಗೆ ಮುಂಬೈ ತಲುಪಿದೆ ಎಂದು ಅಧಿಕಾರಿಯೊಬ್ಬರು ಎಎನ್ಐಗೆ ತಿಳಿಸಿದ್ದಾರೆ.
ಸುಡಾನ್ನಲ್ಲಿ ಯುಎಸ್ ಮತ್ತು ಸೌದಿ ಅರೇಬಿಯಾ ಮಧ್ಯಸ್ಥಿಕೆಯಲ್ಲಿ 72 ಗಂಟೆಗಳ ಕದನ ವಿರಾಮ ಘೋಷಿಸಲಾಗಿದೆ ಎಲ್ಲಾ ದೇಶಗಳು ತಮ್ಮ ನಾಗರಿಕರನ್ನು ಸುಡಾನ್ನಿಂದ ಸ್ಥಳಾಂತರಿಸುವಲ್ಲಿ ನಿರತವಾಗಿವೆ. ಭಾರತೀಯರನ್ನು ಆಪರೇಷನ್ ಕಾವೇರಿ ಕಾರ್ಯಾಚರಣೆ ಅಡಿ ಪೋರ್ಟ್ ಸುಡಾನ್ಗೆ ಬಸ್ಸುಗಳ ಮೂಲಕ ಕರೆತಂದು, ಅಲ್ಲಿಂದ ಸೌದಿ ಅರೇಬಿಯಾದ ಜಿದ್ದಾಗೆ ಯುದ್ದ ವಿಮಾನಗಳ ಮೂಲಕ ಕರೆತಂದು ರಕ್ಷಿಸಲಾಗುತ್ತದೆ.
ಸೋಮವಾರ ಆರಂಭಿಸಲಾದ ‘ಆಪರೇಷನ್ ಕಾವೇರಿ’ ಮಿಷನ್ ಅಡಿಯಲ್ಲಿ ಭಾರತವು ಜಿದ್ದಾದಲ್ಲಿ ಸಾರಿಗೆ ಸೌಲಭ್ಯವನ್ನು ಸ್ಥಾಪಿಸಿದೆ. ಸುಡಾನ್ನಿಂದ ಸ್ಥಳಾಂತರಿಸಿದ ನಂತರ ಎಲ್ಲಾ ಭಾರತೀಯರನ್ನು ಸೌದಿ ಅರೇಬಿಯಾಕ್ಕೆ ಕರೆದೊಯ್ಯಲಾಗಿದೆ.
ಭಾರತೀಯ ವಾಯುಪಡೆಯ (IAF) ಎರಡು ಮಿಲಿಟರಿ ಸಾರಿಗೆ ವಿಮಾನಗಳು ಸುಡಾನ್ನಿಂದ 500 ಕ್ಕೂ ಹೆಚ್ಚು ಭಾರತೀಯರನ್ನು ಸ್ಥಳಾಂತರಿಸಿದರೆ, ನೌಕಾಪಡೆಯ ಹಡಗು ಸಂಘರ್ಷದಿಂದ ಪೀಡಿತ ಸ್ಥಳದಿಂದ 278 ನಾಗರಿಕರನ್ನು ರಕ್ಷಿಸಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಇದುವರೆಗೆ ಸುಡಾನ್ನಿಂದ ಸ್ಥಳಾಂತರಿಸಲ್ಪಟ್ಟ ಒಟ್ಟು ಭಾರತೀಯರ ಸಂಖ್ಯೆ ಸುಮಾರು 530 ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…