Advertisement
MIRROR FOCUS

ಅಪರೇಷನ್ ಸಿಂಧೂರ | ಭಾರತೀಯ ಸೇನೆಯ ಕಾರ್ಯಾಚರಣೆಗೆ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ

Share

ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪರವಾಗಿ ಭಾರತೀಯ ಸೇನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಪಕ್ಷಾತೀತವಾಗಿ ಎಲ್ಲರೂ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ರಾಜ್ಯ ಸರ್ಕಾರ ಸೇನೆ ಕೈಗೊಂಡಿರುವ ಕ್ರಮವನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ ಎಂದು ಹೇಳಿದರು. ಆಪರೇಷನ್ ಸಿಂಧೂರ ಮೂಲಕ ಸುಮಾರು  9 ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿದೆ. ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದೆ. ಭಾರತೀಯ ಸೈನಿಕರು ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ, ದಾಳಿ ಮಾಡಿದ್ದು, ಅಮಾಯಕ ಜನರ ಸಾವು-ನೋವು ತಪ್ಪಿಸಿದ್ದಾರೆ. ನಮ್ಮ ಸೈನಿಕರ ಕಾರ್ಯದಕ್ಷತೆ ಅಭಿನಂದನೀಯ. ಈ ದಾಳಿಯನ್ನು ನಾವು ಸ್ವಾಗತಿಸುತ್ತೇವೆ ಎಂದರು. ರಾಜ್ಯದಲ್ಲಿ ಸುರಕ್ಷತೆಯ ಕುರಿತು ಎಲ್ಲಾ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪಾಕಿಸ್ತಾನದ ಉಗ್ರರ ತಾಣಗಳ ಮೇಲೆ ಭಾರತದ ದಾಳಿ ’ಅಪರೇಷನ್ ಸಿಂಧೂರ’ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಸಂಭ್ರಮಾಚರಣೆ ನಡೆಸಿದರು. ಮಾಜಿ ಸೈನಿಕರು ಭಾರತ ಧ್ವಜ ಹಿಡಿದು, ಸಿಹಿ ಹಂಚಿ, ಭಾರತೀಯ ಸೇನೆ ಪರ ಘೋಷಣೆ ಕೂಗಿದರು.

ಬೆಳಗಾವಿಯ ಬಡಕಲ್ ಗಲ್ಲಿಯ ನಿವಾಸಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.  ಈ ಸಂದರ್ಭದಲ್ಲಿ ಮಾಜಿ ಸೈನಿಕ ರಮೇಶ್ ಚೌಗಲಾ ಮಾತನಾಡಿ, ಭಾರತೀಯರು ಸೌಮ್ಯವಾದಿಗಳು. ಆದರೆ ದೇಶಕ್ಕೆ ಆತಂಕ ಉಂಟು ಮಾಡಿದರೆ, ಹೋರಾಟಕ್ಕೂ ಸಿದ್ಧ ಎಂಬುದಕ್ಕೆ ಈ ದಾಳಿ ನಿದರ್ಶನವಾಗಿದೆ. ಪಾಕಿಸ್ತಾನ ಇದನ್ನು ಅರಿತುಕೊಳ್ಳಬೇಕು ಎಂದು ಹೇಳಿದ್ದಾರೆ.

’ಅಪರೇಷನ್ ಸಿಂಧೂರ’ ಭಾಗವಾಗಿ ಭಾರತೀಯ ಸೈನಿಕರು ಪಾಕಿಸ್ತಾನದ ಉಗ್ರರ ತಾಣಗಳ ಮೇಲೆ ದಾಳಿ ನಡೆಸಿರುವುದನ್ನು ಬೆಂಬಲಿಸಿ ಚನ್ನಪಟ್ಟಣದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ವಿಜಯೋತ್ಸವ ಆಚರಣೆ ಮಾಡಿದರು.

ಇದೇ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ  ಕರ್ನಾಟಕ ರಕ್ಷಣಾ  ವೇದಿಕೆಯ ಕಾರ್ಯಕರ್ತರು, ಸಿಹಿ ಹಂಚಿ ವಿಜಯೋತ್ಸವ ಆಚರಣೆ ಮಾಡಿದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

42 minutes ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

49 minutes ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

1 hour ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

1 hour ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

18 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago