ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಿನ್ನೆಯಷ್ಟೇ ನಡೆಸಿತು. ಇದಕ್ಕೆ ಸರ್ವ ಪಕ್ಷಗಳು ಬೆಂಬಲ ಸೂಚಿಸಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಇಂದು ನಡೆದ ಸರ್ವಪಕ್ಷಗಳ ಸಭೆಯ ಬಳಿಕ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಅವರು, ಹಲವು ನಾಯಕರು ಭಾರತದ ಕ್ರಮವನ್ನು ಶ್ಲಾಘಿಸಿ ಸಕಾರಾತ್ಮಕ ವಿವರಣೆಗಳನ್ನು ನೀಡಿದ್ದಾರೆ. ಸರ್ಕಾರವು ಕೈಗೊಂಡ ನಿರ್ಣಯಕ್ಕೆ ಬೆಂಬಲ ಸೂಚಿಸಿ ಶ್ಲಾಘನೆ ವ್ಯಕ್ತಪಡಿಸಿದರು ಎಂದು ವಿವರಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಸುಳ್ಳು ಮಾಹಿತಿಯನ್ನೊಳಗೊಂಡ ದೃಶ್ಯ ತುಣುಕುಗಳನ್ನು ಬಿತ್ತರಿಸಲಾಗುತ್ತಿದೆ. ಇರದಲ್ಲಿ ಯಾವುದೇ ಹುರುಳಿಲ್ಲ. ಇವುಗಳನ್ನು ನಂಬುವ ಅಗತ್ಯವು ಸಹ ಇಲ್ಲ ಎಂದು ಹೇಳಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel