ರೂರಲ್ ಮಿರರ್ ಡಿಜಿಟಲ್ ಪತ್ರಿಕೆಯನ್ನು ಓದುತ್ತಿದ್ದೆ. ಗುತ್ತಿಗಾರಿನಲ್ಲಿ ನಡೆದ ಅಡಿಕೆ ಎಲೆ ಚುಕ್ಕಿ ರೋಗ ಕಾರಣ ಮತ್ತು ಪರಿಹಾರ ಈ ಬಗ್ಗೆ ವಿಜ್ಞಾನಿ ಡಾ.ಭವಿಷ್ಯ ಅವರ ಭಾಷಣದ ಧ್ವನಿಮುದ್ರಿಕೆಯನ್ನು ಪ್ರಕಟಿಸಿದ್ದರು. ಒಂದು ಗಂಟೆಯಿಂದ ಜಾಸ್ತಿ ಹೊತ್ತು ಬಹಳ ಸುಂದರ ವಿವರಣೆಯ ಮೂಲಕ ವಿಷಯವನ್ನು ಪ್ರಸ್ತುತಪಡಿಸಿದ್ದರು. ವಿಜ್ಞಾನಿಯೊಬ್ಬರು ಈ ರೀತಿ ಮಾತನಾಡಬಲ್ಲರೇ? ಎಂದು ಆಶ್ಚರ್ಯ ಚಕಿತನಾಗಿದ್ದೆ. ಕೆಲ ದಿನದ ಹಿಂದೆ ನಾನು ಬರೆದ ಲೇಖನ ಅಡಿಕೆ ಕೃಷಿಕರಾದ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಡವೇ? ಎಂಬುದಕ್ಕೆ ಪೂರಕವಾಗಿತ್ತು ಅವರ ಮಾತುಗಳು.
20 ವರ್ಷಗಳಿಗಿಂತ ಮೊದಲು ಅನೇಕ ಬಾರಿ ವಿಜ್ಞಾನಿಗಳೊಡನೆ ಸಂವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದೆ. ಅಲ್ಲೆಲ್ಲ ಕೇಳಿದ ಮಾತುಗಳಿಗೂ ಇವರ ಮಾತುಗಳಿಗೂ ಅಜಗಜಾಂತರ ವ್ಯತ್ಯಾಸಗಳನ್ನು ಕಂಡೆ. ಸಾವಯವ ಶಬ್ದವನ್ನು ಬಳಸದೆ ಸಾವಯವಕ್ಕೆ ಪೂರ್ತಿ ಒತ್ತು ಕೊಟ್ಟಂತೆ ಕಂಡಿತು. 16 ಬಗೆಯ ಲವಣಾಂಶದ ಕೊರತೆಯೇ ಅಧಿಕ ಇಳುವರಿಗೆ ಮಾರಕ ಎಂಬ ಪುಂಕಾನುಪುಂಕ ಮಾಹಿತಿಗಳಿಗೆ ಸಂಪೂರ್ಣ ಭಿನ್ನ ಅಭಿಪ್ರಾಯವನ್ನು ಪ್ರಸ್ತುತಪಡಿಸಿದ್ದರು. ಲವಣಾಂಶಗಳ ವಿವೇಚನಾ ರಹಿತ ಬಳಕೆಯೇ ಎಲ್ಲಾ ರೋಗಗಳ ಮೂಲ ಎಂಬುದನ್ನು ಒತ್ತಿ ಹೇಳಿದ್ದರು. ಸುಲಭವೆಂದು ಬಳಸುವ ಸಂಕೀರ್ಣ ಗೊಬ್ಬರಗಳು ಜೀವನವನ್ನೇ ಸಂಕೀರ್ಣಗೊಳಿಸಬಹುದು ಎಂಬುದನ್ನು ಸುಂದರ ವಿಶ್ಲೇಷಣೆಯೊಂದಿಗೆ ತಿಳಿಸಿದ್ದರು. ಆದರೂ ನನ್ನ ಮನಸ್ಸಿನಲ್ಲಿ ಎದ್ದ ಕೆಲ ಪ್ರಶ್ನೆಗಳನ್ನು ಮುಂದಿರಿಸುವೆ.
1) ನಮ್ಮ ಅಡಿಕೆ ಕೃಷಿಗೆ ಶತಮಾನಗಳ ಇತಿಹಾಸ. ಬಳಸುತ್ತಿದ್ದುದು ಹೆಚ್ಚೆಂದರೆ ಹಟ್ಟಿಗೊಬ್ಬರ ಮಾತ್ರ.ಅದನ್ನು ಬಳಸುತ್ತಿರಬೇಕಾದರೆ ಮಹಾಳಿಯ ಹೊರತಾಗಿ ಹೆಚ್ಚಿನ ರೋಗಲಕ್ಷಣಗಳನ್ನು ಕಾಣುತ್ತಿರಲಿಲ್ಲ. ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಮಾತನಾಡುವಾಗ ಹಟ್ಟಿ ಗೊಬ್ಬರದ ಬಗ್ಗೆ ಚಕಾರ ಎತ್ತಲಿಲ್ಲ ಕಾರಣವೇನು?.
2) ಪೋಷಕಾಂಶಗಳ ವಿವೇಚನಾ ರಹಿತ ಬಳಕೆಯೇ ಖಾಯಿಲೆಗಳ ಮೂಲ ಎಂದು ಹೇಳುವಾಗ, ಒಂದು ಎಕರೆಯಲ್ಲಿ ಒಂದು ಮರಕ್ಕೋ ಎರಡು ಮರಕ್ಕೋ ಮುಂಡುಸಿರಿ ಬಂದರೆ, ಓರೆಗಂಟು ಬಂದರೆ ಆ ಮರಕ್ಕೆ ಮಾತ್ರ ಪೋಷಕಾಂಶಗಳನ್ನು ಬಳಸಬೇಕೆ ವಿನಃ ಇನ್ನುಳಿದ 500ಕ್ಕೂ ಬಳಸುವ ಅಗತ್ಯವಿದೆಯೇ?.ಯಾವುದಕ್ಕೆಲ್ಲ ಔಷಧಿ ಬಿಡುತ್ತೀರಿ! ಕಾಯಿಲೆಗಳು ಹೊಸ ಹೊಸತ್ತು ಬಂದಷ್ಟು ಔಷಧಿಗಳೇ ಉದ್ಯೋಗವಾಗಬಹುದು. ಮಣ್ಣಿನ ಸಂರಕ್ಷಣೆ, ಪರಿಸರದ ಸಂರಕ್ಷಣೆ, ರೋಗನಿರೋಧಕ ಶಕ್ತಿಯನ್ನು ಜಾಸ್ತಿ ಮಾಡುವುದು ಮುಂತಾದ ದಾರಿಗಳೇ ಅಂತಿಮ ಪರಿಹಾರ ಎಂಬ ನಿಮ್ಮ ಮಾತು ಸಾರ್ವಕಾಲಿಕ ಸತ್ಯಗಳು. ಆ ದಿಕ್ಕಿನಲ್ಲಿ ಪ್ರಚಾರ ಜಾಸ್ತಿ ಆಗಲಿ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…