ಕೃಷಿ

ಅಡಿಕೆ ಎಲೆಚುಕ್ಕಿ ರೋಗ | ವಿಜ್ಞಾನಿಗಳ ಸಲಹೆ ಅಡಿಕೆ ಬೆಳೆಗಾರರ ಆತ್ಮಾವಲೋಕನಕ್ಕೆ ದಾರಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರೂರಲ್ ಮಿರರ್ ಡಿಜಿಟಲ್ ಪತ್ರಿಕೆಯನ್ನು ಓದುತ್ತಿದ್ದೆ. ಗುತ್ತಿಗಾರಿನಲ್ಲಿ ನಡೆದ ಅಡಿಕೆ ಎಲೆ ಚುಕ್ಕಿ ರೋಗ ಕಾರಣ ಮತ್ತು ಪರಿಹಾರ ಈ ಬಗ್ಗೆ ವಿಜ್ಞಾನಿ ಡಾ.ಭವಿಷ್ಯ ಅವರ ಭಾಷಣದ ಧ್ವನಿಮುದ್ರಿಕೆಯನ್ನು ಪ್ರಕಟಿಸಿದ್ದರು. ಒಂದು ಗಂಟೆಯಿಂದ ಜಾಸ್ತಿ ಹೊತ್ತು ಬಹಳ ಸುಂದರ ವಿವರಣೆಯ ಮೂಲಕ ವಿಷಯವನ್ನು ಪ್ರಸ್ತುತಪಡಿಸಿದ್ದರು. ವಿಜ್ಞಾನಿಯೊಬ್ಬರು ಈ ರೀತಿ ಮಾತನಾಡಬಲ್ಲರೇ? ಎಂದು ಆಶ್ಚರ್ಯ ಚಕಿತನಾಗಿದ್ದೆ. ಕೆಲ ದಿನದ ಹಿಂದೆ ನಾನು ಬರೆದ ಲೇಖನ ಅಡಿಕೆ ಕೃಷಿಕರಾದ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಡವೇ? ಎಂಬುದಕ್ಕೆ ಪೂರಕವಾಗಿತ್ತು ಅವರ ಮಾತುಗಳು.‌

Advertisement

20 ವರ್ಷಗಳಿಗಿಂತ ಮೊದಲು ಅನೇಕ ಬಾರಿ ವಿಜ್ಞಾನಿಗಳೊಡನೆ ಸಂವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದೆ. ಅಲ್ಲೆಲ್ಲ ಕೇಳಿದ ಮಾತುಗಳಿಗೂ ಇವರ ಮಾತುಗಳಿಗೂ ಅಜಗಜಾಂತರ ವ್ಯತ್ಯಾಸಗಳನ್ನು ಕಂಡೆ. ಸಾವಯವ ಶಬ್ದವನ್ನು ಬಳಸದೆ ಸಾವಯವಕ್ಕೆ ಪೂರ್ತಿ ಒತ್ತು ಕೊಟ್ಟಂತೆ ಕಂಡಿತು. 16 ಬಗೆಯ ಲವಣಾಂಶದ ಕೊರತೆಯೇ ಅಧಿಕ ಇಳುವರಿಗೆ ಮಾರಕ ಎಂಬ ಪುಂಕಾನುಪುಂಕ ಮಾಹಿತಿಗಳಿಗೆ ಸಂಪೂರ್ಣ ಭಿನ್ನ ಅಭಿಪ್ರಾಯವನ್ನು ಪ್ರಸ್ತುತಪಡಿಸಿದ್ದರು. ಲವಣಾಂಶಗಳ ವಿವೇಚನಾ ರಹಿತ ಬಳಕೆಯೇ ಎಲ್ಲಾ ರೋಗಗಳ ಮೂಲ ಎಂಬುದನ್ನು ಒತ್ತಿ ಹೇಳಿದ್ದರು. ಸುಲಭವೆಂದು ಬಳಸುವ ಸಂಕೀರ್ಣ ಗೊಬ್ಬರಗಳು ಜೀವನವನ್ನೇ ಸಂಕೀರ್ಣಗೊಳಿಸಬಹುದು ಎಂಬುದನ್ನು ಸುಂದರ ವಿಶ್ಲೇಷಣೆಯೊಂದಿಗೆ ತಿಳಿಸಿದ್ದರು. ಆದರೂ ನನ್ನ ಮನಸ್ಸಿನಲ್ಲಿ ಎದ್ದ ಕೆಲ ಪ್ರಶ್ನೆಗಳನ್ನು ಮುಂದಿರಿಸುವೆ.

1) ನಮ್ಮ ಅಡಿಕೆ ಕೃಷಿಗೆ ಶತಮಾನಗಳ ಇತಿಹಾಸ. ಬಳಸುತ್ತಿದ್ದುದು ಹೆಚ್ಚೆಂದರೆ ಹಟ್ಟಿಗೊಬ್ಬರ ಮಾತ್ರ.ಅದನ್ನು ಬಳಸುತ್ತಿರಬೇಕಾದರೆ ಮಹಾಳಿಯ ಹೊರತಾಗಿ ಹೆಚ್ಚಿನ ರೋಗಲಕ್ಷಣಗಳನ್ನು ಕಾಣುತ್ತಿರಲಿಲ್ಲ. ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಮಾತನಾಡುವಾಗ ಹಟ್ಟಿ ಗೊಬ್ಬರದ ಬಗ್ಗೆ ಚಕಾರ ಎತ್ತಲಿಲ್ಲ ಕಾರಣವೇನು?.

2) ಪೋಷಕಾಂಶಗಳ ವಿವೇಚನಾ ರಹಿತ ಬಳಕೆಯೇ ಖಾಯಿಲೆಗಳ ಮೂಲ ಎಂದು ಹೇಳುವಾಗ, ಒಂದು ಎಕರೆಯಲ್ಲಿ ಒಂದು ಮರಕ್ಕೋ ಎರಡು ಮರಕ್ಕೋ ಮುಂಡುಸಿರಿ ಬಂದರೆ, ಓರೆಗಂಟು ಬಂದರೆ ಆ ಮರಕ್ಕೆ ಮಾತ್ರ ಪೋಷಕಾಂಶಗಳನ್ನು ಬಳಸಬೇಕೆ ವಿನಃ ಇನ್ನುಳಿದ 500ಕ್ಕೂ ಬಳಸುವ ಅಗತ್ಯವಿದೆಯೇ?.
3) ಮನೆಯ ಸದಸ್ಯನೋರ್ವನಿಗೆ ನ್ಯೂನತೆಯನ್ನು ಕಂಡರೆ ಪ್ರತಿಯೊಬ್ಬರಿಗೂ ಔಷಧಿ ಕೊಡುವ ಕ್ರಮವಿದೆಯೇ?
4) ಹಾಗೆ ಪ್ರತಿಮರಕ್ಕೂ ಅನಗತ್ಯವಾಗಿ ಕೊಡುವ ಕಾರಣವೇ ಅಲ್ಲವೇ ಇಂತಹ ರೋಗಗಳು ಉಲ್ಬಣವಾದದ್ದು?
5) ಆಗಸ್ಟ್ ಕೊನೆಯ ವಾರ ಅಥವಾ ಸೆಪ್ಟೆಂಬರ್ ಮೊದಲ ವಾರದಲ್ಲಿ ಶಿಲೀಂದ್ರ ನಾಶಕಗಳನ್ನು ಸಾಮೂಹಿಕವಾಗಿ ಸಿಂಪಡಿಸಿದರೆ ಮಾತ್ರ ಹದ್ದು ಬಸ್ತಿಗೆ ಬರಬಹುದು ( ಬರುತ್ತದೆ ಎಂಬುದಕ್ಕೆ ಖಾತ್ರಿ ಇಲ್ಲ ) ಎಂದಾಗ ಸಾವಿರಾರು ಎಕ್ಕರೆಗಳಲ್ಲಿ ಇದು ಸಾಧ್ಯವೇ?ಎಂಬುದು ಸಾಮೂಹಿಕ ಪ್ರಶ್ನೆ ಆಗಲಾರದೆ? ಅದೂ 60,70,80 ಅಡಿಯ ಹಳೆ ತೋಟಗಳಲ್ಲಿ!
6) ಕೃಷಿ ಪ್ರಯೋಗ ಪರಿವಾರದ ಮಿತ್ರರೊಬ್ಬರಲ್ಲಿ ಈ ಬಗ್ಗೆ ಮಾತನಾಡಿದಾಗ ಅವರು ಕೊಟ್ಟ ಮಾಹಿತಿ ಭಯಾನಕ. ತೀರ್ಥಹಳ್ಳಿ, ಕೊಪ್ಪ, ಶೃಂಗೇರಿ, ಆಗುಂಬೆ ಈ ಭಾಗದಲ್ಲಿ ಸುಮಾರು 2000 ಎಕ್ಕರೆಗಿಂತ ಜಾಸ್ತಿ ತೋಟಗಳು ಸಂಪೂರ್ಣ ನಾಶವಾಗಿದೆಯಂತೆ. ಮಾಡದ ಪರಿಹಾರಗಳೂ ಇಲ್ಲವಂತೆ. ಏನೇ ಮಾಡಿದರೂ ನಿಯಂತ್ರಣ ಇಲ್ಲ. ಇದೇ ರೀತಿ ಮುಂದುವರಿದಲ್ಲಿ ಇನ್ನು ಎರಡು ಮೂರು ವರುಷಗಳಲ್ಲಿ ಅಡಿಕೆ ಕೃಷಿ ಚರಿತ್ರೆಯ ಪುಟಗಳಿಗೆ ಸೇರಬಹುದು ಅಂತಂದರು. ಅವರ ಅಧ್ಯಯನದ ಪ್ರಕಾರ ಆರಂಭವಾದದ್ದು ಎಲ್ಲವೂ ರಾಸಾಯನಿಕ ಅತಿಯಾಗಿ ಬಳಸಿದ ತೋಟಗಳಲ್ಲಿಯೇ. ಹಬ್ಬುವಾಗ ಮಾತ್ರ ಯಾರನ್ನೂ ಬಿಡಲಿಲ್ಲ ಎಂದೂ ಮಾತು ಸೇರಿಸಿದ್ದರು. ಹಾಗಿರುವಾಗ ಪೋಷಕಾಂಶ ನಿರ್ವಹಣೆ ರಾಸಾಯನಿಕಗಳಿಂದಲೇ ಎಂಬ ಮಾತು ಬೇಕೆ?

ಯಾವುದಕ್ಕೆಲ್ಲ ಔಷಧಿ ಬಿಡುತ್ತೀರಿ! ಕಾಯಿಲೆಗಳು ಹೊಸ ಹೊಸತ್ತು ಬಂದಷ್ಟು ಔಷಧಿಗಳೇ ಉದ್ಯೋಗವಾಗಬಹುದು. ಮಣ್ಣಿನ ಸಂರಕ್ಷಣೆ, ಪರಿಸರದ ಸಂರಕ್ಷಣೆ, ರೋಗನಿರೋಧಕ ಶಕ್ತಿಯನ್ನು ಜಾಸ್ತಿ ಮಾಡುವುದು ಮುಂತಾದ ದಾರಿಗಳೇ ಅಂತಿಮ ಪರಿಹಾರ ಎಂಬ ನಿಮ್ಮ ಮಾತು ಸಾರ್ವಕಾಲಿಕ ಸತ್ಯಗಳು. ಆ ದಿಕ್ಕಿನಲ್ಲಿ ಪ್ರಚಾರ ಜಾಸ್ತಿ ಆಗಲಿ.

ಬರಹ:
ಎ.ಪಿ. ಸದಾಶಿವ. ಮರಿಕೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಎ ಪಿ ಸದಾಶಿವ ಮರಿಕೆ

ಸಾವಯವ ಕೃಷಿಕರು, ಪುತ್ತೂರು ಕಳೆದ ಹಲವಾರು ವರ್ಷಗಳಿಂದ ಸಾವಯವ ಕೃಷಿ, ಗೋಆಧಾರಿತ ಕೃಷಿಯ ಮೂಲಕ ಗಮನ ಸೆಳೆದ ಕೃಷಿಕ ಇವರು.

Published by
ಎ ಪಿ ಸದಾಶಿವ ಮರಿಕೆ

Recent Posts

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

4 hours ago

ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

5 hours ago

ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ

ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…

5 hours ago

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…

13 hours ago

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…

24 hours ago

ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…

24 hours ago