ವಿಧಾನ ಮಂಡಲದ ಉಭಯ ಸದನಗಳ ಕಾರ್ಯಕಲಾಪಗಳನ್ನು ನೇರವಾಗಿ ವೀಕ್ಷಿಸುವ ಯುವ ಜನಾಂಗದ ಮನಸ್ಸುಗಳು ಹೇಗೆ ಯೋಚಿಸಬಹುದು……
ಕನಿಷ್ಠ ಶಾಲೆಗಳಲ್ಲಿ ಇರುವಷ್ಟು ಶಿಸ್ತು ಅಥವಾ ಬಸ್ಸು ರೈಲು ನಿಲ್ದಾಣಗಳಲ್ಲಿ ಇರಬಹುದಾದಷ್ಟು ಶಿಸ್ತು, ಮದುವೆಯ ಆರತಕ್ಷತೆಯಲ್ಲಿ ಇರುವ ಶಿಸ್ತು, ಮತದಾನ ಮಾಡುವಾಗ ಇರುವಷ್ಟು ಶಿಸ್ತು, ಉಪನ್ಯಾಸ – ವಿಚಾರ ಸಂಕಿರಣಗಳಲ್ಲಿ ಇರುವ ಶಿಸ್ತು ಅಥವಾ ಸಿನಿಮಾ ಮಂದಿರಗಳಲ್ಲಿ ಇರಬಹುದಾದಷ್ಟು ಶಿಸ್ತು ಕೂಡ ಇವರಲ್ಲಿ ಇಲ್ಲವಾಯಿತೇ ಎಂದು ಒಂದು ಕ್ಷಣ ಅನಿಸಬಹುದೇ….
ಇತ್ತೀಚೆಗಷ್ಟೆ ರಾಜ್ಯದ ದೊಡ್ಡ ದೊಡ್ಡ ಆಧ್ಯಾತ್ಮಿಕ ಚಿಂತಕರಿಂದ ಇವರಿಗೆ ಉಪನ್ಯಾಸ – ತರಬೇತಿ - ಕೌನ್ಸಿಲಿಂಗ್ ಕೊಡಿಸಿ ಉತ್ತಮ ನಡವಳಿಕೆ ರೂಪಿಸಿಕೊಳ್ಳಲು ಮಾಡಿದ ಪ್ರಯತ್ನ ವ್ಯರ್ಥವಾಯಿತೆ…..
ಅವನು ಲಂಚ ತಿಂದ, ಇವನ ಲಂಚದ ದಾಖಲೆ ನನ್ನ ಬಳಿ ಇದೆ, ಸರ್ಕಾರ ದಿವಾಳಿಯಾಗುತ್ತದೆ, ಸರ್ಕಾರ ಇನ್ನೇನು ಕೆಲವೇ ತಿಂಗಳುಗಳಲ್ಲಿ ಬಿದ್ದು ಹೋಗುತ್ತದೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸೀಟು ಗಳಿಸುವುದಕ್ಕೆ ಯಾವ ಕುತಂತ್ರ ಮಾಡಬೇಕು. ಯಾವ ಪಕ್ಷದ ಯಾರಿಗೆ ಗಾಳ ಹಾಕಿ ಅವರನ್ನು ಸೆಳೆದು ಪ್ರಜಾಪ್ರಭುತ್ವದ ಬೆನ್ನಿಗೆ ಚೂರಿ ಹಾಕಬೇಕು ಇವೇ ಚರ್ಚೆಯ ವಿಷಯಗಳಾದರೆ ನಾವು ಮತದಾನ ಮಾಡುವುದಾದರು ಏಕೆ ?
ಬೆಳಗಿನ ಸಮಯದಲ್ಲಿ ಕೆಲವು ಪ್ರಮುಖ ವಿಷಯಗಳನ್ನು ಇಟ್ಟುಕೊಂಡು ಕ್ರಮಬದ್ಧವಾಗಿ ಪರಿಹಾರ ಸೂಚಕ ಚರ್ಚೆಗಳು ಆಗಬೇಕು, ಮಧ್ಯಾಹ್ನದ ನಂತರ ಪ್ರಶ್ನೋತ್ತರ, ವಾರದ ಕೊನೆಗೆ ಹೊಸ ಕಾನೂನು ಅಥವಾ ತಿದ್ದುಪಡಿ ಅಥವಾ ಸಮಸ್ಯೆಗಳು ಪರಿಹಾರವಾದ ಬಗ್ಗೆ ಮಾಹಿತಿ ಅಥವಾ ಆ ತಕ್ಷಣದ ಸಮಸ್ಯೆಗಳ ಚರ್ಚೆ ಹೀಗೆ ಗುಣಾತ್ಮಕ ಚಿಂತನೆಗಳು ನಡೆದರೆ ಅದಕ್ಕೆ ಒಂದು ಸಾರ್ಥಕತೆ ಇರುತ್ತದೆ.
ಆದರೆ ಈ ಪಕ್ಷಗಳು ಮೊದಲೇ ನಿರ್ಧರಿಸಿ ಅಧಿವೇಶನ ನಡೆಯದೇ ಇರುವಂತೆ ಮಾಡಿ ಹಿಂದಿನ ಸರ್ಕಾರದ ವಿರುದ್ಧ ಸೇಡು ತೀರಿಸಿಕೊಳ್ಳುವ ಸಂಪ್ರದಾಯವನ್ನು ಹಾಗೇ ಮುಂದುವರಿಸಿ ಜನರಿಗೆ ವಂಚಿಸುತ್ತಲೇ ಇವೆ.
ಜನ ಪ್ರತಿನಿಧಿಗಳು ಮಾದರಿಯಾಗಬೇಕು, ಆದರ್ಶವಾಗಬೇಕು, ಸ್ಪೂರ್ತಿಯಾಗಬೇಕು,
ವಿಧಾನ ಮಂಡಲ ಅನುಭಾವ ತುಂಬಿದ ಅನುಭವ ಮಂಟಪವಾಗಬೇಕೆ ಹೊರತು ಹುಚ್ಚರ ಸಂತೆಯಾಗಬಾರದು…….
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…