Advertisement
ಪ್ರಮುಖ

#Coffee | ಕಾಫಿ ಬೆಳಗಾರರಿಗೆ ವ್ಯಾಪಾರ ವೃದ್ಧಿಗೆ ಅವಕಾಶ | ಏಷ್ಯಾದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಾಫಿ ಸಮ್ಮೇಳನ |

Share

ಕಾಫಿ ಬೆಳೆ ಕರ್ನಾಟಕದಲ್ಲಿ ಬೆಳೆಯುತ್ತಿದೆಯಾದರೂ ಅದಕ್ಕೆ ತಕ್ಕ ಮಾರುಕಟ್ಟೆ, ಉದ್ಯಮ ಬೆಳವಣಿಗೆಗೆ ನಡೆಯುವ ಯೋಜನೆಗಳು ಬೆರಳಿಕೆಯಷ್ಟು ಮಾತ್ರ. ಕರ್ನಾಟಕವನ್ನು ಭಾರತದ ಕಾಫಿ #Coffee ರಾಜಧಾನಿ ಅಂತಾರೆ. ಈ ಬಾರಿ ಕಾಫಿ ಬೆಳೆಗಾರರು ಹಾಗೂ ಉದ್ಯಮಿಗಳಿಗೆ ಹೊಸ ಅವಕಾಶ ಸೃಷ್ಟಿ ಹಾಗೂ ಮಾರುಕಟ್ಟೆಯ ವಿಸ್ತರಣೆಯ ಉದ್ದೇಶದಿಂದ ಏಷ್ಯಾದಲ್ಲಿಇದೇ ಮೊದಲ ಬಾರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೆ.25 ರಿಂದ 28ರವರೆಗೆ 5ನೇ “ವಿಶ್ವ ಕಾಫಿ ಸಮ್ಮೇಳನ ”#WorldCoffeeConference (WCC 2023)” ಆಯೋಜಿಸಲಾಗಿದೆ.

ಭಾರತೀಯ ಕಾಫಿ ಮಂಡಳಿ, ಅಂತರಾಷ್ಟ್ರೀಯ ಕಾಫಿ ಸಂಘಟನೆಗಳು ಹಾಗೂ ಕಾಫಿ ಉದ್ಯಮದ ಸಹಯೋಗದಲ್ಲಿ ಈ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ. ಸಮ್ಮೇಳನದ ಬ್ರ್ಯಾಂಡ್​ ಅಂಬಾಸಿಡರ್​ ಆಗಿರವ ಟೆನಿಸ್​ ಆಟಗಾರ ಮತ್ತು ಅರ್ಜುನ ಪ್ರಶಸ್ತಿ ಪುರಸೃತ ರೋಹನ್​ ಬೋಪಣ್ಣ ಅವರು  ಲಾಂಛನ ಅನಾವರಣಗೊಳಿಸಿದರು. ಭಾರತೀಯ ಕಾಫಿ ಮಂಡಳಿ ಸಿಇಒ ಕೆ.ಜಿ ಜಗದೀಶ್​ ಮಾತನಾಡಿ ಜಾಗತಿಕವಾಗಿ ಕಾಫಿಯ ಆರ್ಥಿಕ ಪ್ರಾಮುಖ್ಯತೆಯನ್ನು ಹೆಚ್ಚಿಸಲು ವಿಶ್ವಸಂಸ್ಥೆಯ ಆಶ್ರಯದಲ್ಲಿ 1963 ರಲ್ಲಿ ಅಂತರಾಷ್ಟ್ರೀಯ ಕಾಫಿ ಸಂಘಟನೆಯನ್ನು (ಐಸಿಒ) ಸ್ಥಾಪಿಸಲಾಯಿತು. 2001ರಲ್ಲಿ ಲಂಡನ್​, ಬೆಜಿಲ್​ನಲ್ಲಿ 2005, ಗ್ವಾಟೆಮಾಲಾದಲ್ಲಿ 2010 ಮತ್ತು ಮತ್ತು ಇಥಿಯೋಪಿಯಾದಲ್ಲಿ ಸಮ್ಮೇಳನ ನಡೆದಿದ್ದವು. ಏಷ್ಯಾದಲ್ಲಿ ಮೊದಲ ಸಮ್ಮೇಳನ ಆಯೋಜಿಸಲಾಗುತ್ತಿದೆ. ಅದರಲ್ಲೂ ಬೆಂಗಳೂರು ವೇದಿಕೆಯಾಗುತ್ತಿರುವುದು ಹೆಮ್ಮೆಯ ವಿಚಾರ ಎಂದು ಹೇಳಿದರು.

ವಿಶ್ವದಲ್ಲಿ ಭಾರತವು ಕಾಫಿ ಉತ್ಪಾದನೆಯಲ್ಲಿ 7ನೇ ಸ್ಥಾನದಲ್ಲಿದೆ. ರಫ್ತಿನಲ್ಲಿ 5ನೇ ಸ್ಥಾನದಲ್ಲಿದೆ. ದೇಶದ ರಪ್ತು ಪ್ರಮಾಣದಲ್ಲಿ ಕರ್ನಾಟಕದ ಕೊಡುಗೆಯು ಶೇ 70ರಷ್ಟಿದೆ. ದೇಶದಲ್ಲಿ ಕರ್ನಾಟಕ ಕಾಫಿ ರಾಜಧಾನಿಯಾಗಿದೆ. ಸಮ್ಮೇಳನದಿಂದ ಕಾಫಿ ಬೆಳೆಗಾರರಿಗೆ ಸಾಕಷ್ಟು ಪ್ರಯೋಜನವಾಗಲಿದೆ. 100 ಮಿಲಿಯನ್ ಕುಟುಂಬಗಳಿಗೆ ಉದ್ಯೋಗ ಮತ್ತು ಜೀವನೋಪಾಯವನ್ನು ಒದಗಿಸುವ 200 ಶತಕೋಟಿ ಮೌಲ್ಯದ ವಿಶ್ವದ ಅತಿದೊಡ್ಡ ವ್ಯಾಪಾರದ ಸರಕು ಕಾಫಿಯಾಗಿದೆ ಎಂದು ತಿಳಿಸಿದರು. ಜಾಗತಿಕ ಮಟ್ಟದಲ್ಲಿ ಭಾರತೀಯ ಕಾಫಿಯನ್ನು ಪ್ರಚಾರ ಮಾಡುವ ಮೂಲಕ ಈ ಸಮ್ಮೇಳನವು ಕಾಫಿ ಬೆಳೆಗಾರರಿಗೆ ಹೊಸ ಅವಕಾಶಗಳನ್ನು ಒದಗಿಸುತ್ತದೆ. ಹಾಗೇ ಮಾರುಕಟ್ಟೆಗಳನ್ನು ಸೃಷ್ಟಿಸಲಿದೆ. ಕಾಫಿ ತೋಟದಿಂದ ಕೆಫೆಗಳವರೆಗೆ ನಮ್ಮ ಪ್ರತಿಭೆಗಳಿಗೆ ಹೆಚ್ಚಿನ ಉದ್ಯೋಗವಕಾಶಗಳು ದೊರೆಯಲಿವೆ ಎಂದರು.

News Source: Online 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

10 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

16 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago