Advertisement
ಪ್ರಮುಖ

#Coffee | ಕಾಫಿ ಬೆಳಗಾರರಿಗೆ ವ್ಯಾಪಾರ ವೃದ್ಧಿಗೆ ಅವಕಾಶ | ಏಷ್ಯಾದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಾಫಿ ಸಮ್ಮೇಳನ |

Share

ಕಾಫಿ ಬೆಳೆ ಕರ್ನಾಟಕದಲ್ಲಿ ಬೆಳೆಯುತ್ತಿದೆಯಾದರೂ ಅದಕ್ಕೆ ತಕ್ಕ ಮಾರುಕಟ್ಟೆ, ಉದ್ಯಮ ಬೆಳವಣಿಗೆಗೆ ನಡೆಯುವ ಯೋಜನೆಗಳು ಬೆರಳಿಕೆಯಷ್ಟು ಮಾತ್ರ. ಕರ್ನಾಟಕವನ್ನು ಭಾರತದ ಕಾಫಿ #Coffee ರಾಜಧಾನಿ ಅಂತಾರೆ. ಈ ಬಾರಿ ಕಾಫಿ ಬೆಳೆಗಾರರು ಹಾಗೂ ಉದ್ಯಮಿಗಳಿಗೆ ಹೊಸ ಅವಕಾಶ ಸೃಷ್ಟಿ ಹಾಗೂ ಮಾರುಕಟ್ಟೆಯ ವಿಸ್ತರಣೆಯ ಉದ್ದೇಶದಿಂದ ಏಷ್ಯಾದಲ್ಲಿಇದೇ ಮೊದಲ ಬಾರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೆ.25 ರಿಂದ 28ರವರೆಗೆ 5ನೇ “ವಿಶ್ವ ಕಾಫಿ ಸಮ್ಮೇಳನ ”#WorldCoffeeConference (WCC 2023)” ಆಯೋಜಿಸಲಾಗಿದೆ.

ಭಾರತೀಯ ಕಾಫಿ ಮಂಡಳಿ, ಅಂತರಾಷ್ಟ್ರೀಯ ಕಾಫಿ ಸಂಘಟನೆಗಳು ಹಾಗೂ ಕಾಫಿ ಉದ್ಯಮದ ಸಹಯೋಗದಲ್ಲಿ ಈ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ. ಸಮ್ಮೇಳನದ ಬ್ರ್ಯಾಂಡ್​ ಅಂಬಾಸಿಡರ್​ ಆಗಿರವ ಟೆನಿಸ್​ ಆಟಗಾರ ಮತ್ತು ಅರ್ಜುನ ಪ್ರಶಸ್ತಿ ಪುರಸೃತ ರೋಹನ್​ ಬೋಪಣ್ಣ ಅವರು  ಲಾಂಛನ ಅನಾವರಣಗೊಳಿಸಿದರು. ಭಾರತೀಯ ಕಾಫಿ ಮಂಡಳಿ ಸಿಇಒ ಕೆ.ಜಿ ಜಗದೀಶ್​ ಮಾತನಾಡಿ ಜಾಗತಿಕವಾಗಿ ಕಾಫಿಯ ಆರ್ಥಿಕ ಪ್ರಾಮುಖ್ಯತೆಯನ್ನು ಹೆಚ್ಚಿಸಲು ವಿಶ್ವಸಂಸ್ಥೆಯ ಆಶ್ರಯದಲ್ಲಿ 1963 ರಲ್ಲಿ ಅಂತರಾಷ್ಟ್ರೀಯ ಕಾಫಿ ಸಂಘಟನೆಯನ್ನು (ಐಸಿಒ) ಸ್ಥಾಪಿಸಲಾಯಿತು. 2001ರಲ್ಲಿ ಲಂಡನ್​, ಬೆಜಿಲ್​ನಲ್ಲಿ 2005, ಗ್ವಾಟೆಮಾಲಾದಲ್ಲಿ 2010 ಮತ್ತು ಮತ್ತು ಇಥಿಯೋಪಿಯಾದಲ್ಲಿ ಸಮ್ಮೇಳನ ನಡೆದಿದ್ದವು. ಏಷ್ಯಾದಲ್ಲಿ ಮೊದಲ ಸಮ್ಮೇಳನ ಆಯೋಜಿಸಲಾಗುತ್ತಿದೆ. ಅದರಲ್ಲೂ ಬೆಂಗಳೂರು ವೇದಿಕೆಯಾಗುತ್ತಿರುವುದು ಹೆಮ್ಮೆಯ ವಿಚಾರ ಎಂದು ಹೇಳಿದರು.

ವಿಶ್ವದಲ್ಲಿ ಭಾರತವು ಕಾಫಿ ಉತ್ಪಾದನೆಯಲ್ಲಿ 7ನೇ ಸ್ಥಾನದಲ್ಲಿದೆ. ರಫ್ತಿನಲ್ಲಿ 5ನೇ ಸ್ಥಾನದಲ್ಲಿದೆ. ದೇಶದ ರಪ್ತು ಪ್ರಮಾಣದಲ್ಲಿ ಕರ್ನಾಟಕದ ಕೊಡುಗೆಯು ಶೇ 70ರಷ್ಟಿದೆ. ದೇಶದಲ್ಲಿ ಕರ್ನಾಟಕ ಕಾಫಿ ರಾಜಧಾನಿಯಾಗಿದೆ. ಸಮ್ಮೇಳನದಿಂದ ಕಾಫಿ ಬೆಳೆಗಾರರಿಗೆ ಸಾಕಷ್ಟು ಪ್ರಯೋಜನವಾಗಲಿದೆ. 100 ಮಿಲಿಯನ್ ಕುಟುಂಬಗಳಿಗೆ ಉದ್ಯೋಗ ಮತ್ತು ಜೀವನೋಪಾಯವನ್ನು ಒದಗಿಸುವ 200 ಶತಕೋಟಿ ಮೌಲ್ಯದ ವಿಶ್ವದ ಅತಿದೊಡ್ಡ ವ್ಯಾಪಾರದ ಸರಕು ಕಾಫಿಯಾಗಿದೆ ಎಂದು ತಿಳಿಸಿದರು. ಜಾಗತಿಕ ಮಟ್ಟದಲ್ಲಿ ಭಾರತೀಯ ಕಾಫಿಯನ್ನು ಪ್ರಚಾರ ಮಾಡುವ ಮೂಲಕ ಈ ಸಮ್ಮೇಳನವು ಕಾಫಿ ಬೆಳೆಗಾರರಿಗೆ ಹೊಸ ಅವಕಾಶಗಳನ್ನು ಒದಗಿಸುತ್ತದೆ. ಹಾಗೇ ಮಾರುಕಟ್ಟೆಗಳನ್ನು ಸೃಷ್ಟಿಸಲಿದೆ. ಕಾಫಿ ತೋಟದಿಂದ ಕೆಫೆಗಳವರೆಗೆ ನಮ್ಮ ಪ್ರತಿಭೆಗಳಿಗೆ ಹೆಚ್ಚಿನ ಉದ್ಯೋಗವಕಾಶಗಳು ದೊರೆಯಲಿವೆ ಎಂದರು.

News Source: Online 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ

ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…

54 minutes ago

ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!

ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…

1 hour ago

ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ

ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…

2 hours ago

ಅಡಿಕೆ ಹಳದಿ ಎಲೆ, ಎಲೆ ಚುಕ್ಕಿ ರೋಗಕ್ಕೆ ತುರ್ತು ಪರಿಹಾರಕ್ಕೆ ಒತ್ತಾಯ – ಕೇಂದ್ರ ಕೃಷಿ ಸಚಿವರಿಗೆ ಸಂಸದ ಬ್ರಿಜೇಶ್ ಚೌಟ ಮನವಿ

ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…

2 hours ago

ಅಡಿಕೆ ಆಮದು ಬೆಲೆ ಹೆಚ್ಚಳಕ್ಕೆ ಒತ್ತಾಯ – ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಭೇಟಿ ಮಾಡಿದ ನಿಯೋಗ

ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…

2 hours ago

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…

11 hours ago