Advertisement
MIRROR FOCUS

ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೂಡಿಕೆಗೆ ಅವಕಾಶ

Share

ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ ಕೇಂದ್ರ ಸ್ಥಾಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ದೆಹಲಿಯಲ್ಲಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ಸಲ್ಲಿಸಿದ ಪ್ರಸ್ತಾವನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಆಲೂಗಡ್ಡೆ, ಸಿಹಿ ಗೆಣಸು ಹಾಗೂ ಸುಗ್ಗಿ ನಂತರದಲ್ಲಿ ಇವುಗಳ ಆಹಾರೋತ್ಪನ್ನ, ಮೌಲ್ಯವರ್ದಿತ ಆಹಾರ ಪದಾರ್ಥ, ಪೌಷ್ಟಿಕಾಂಶ ಭರಿತ ಆಹಾರ ಭದ್ರತೆ, ರೈತರ ಆದಾಯ ಹೆಚ್ಚಳ ಹಾಗೂ ಉದ್ಯೋಗಾವಕಾಶ ಕಲ್ಪಿಸಲು ಈ ಕೇಂದ್ರ ನೆರವಾಗಲಿದೆ ಎಂದರು. ಅಂತಾರಾಷ್ಟ್ರೀಯ ಆಲೂಗಡ್ಡೆ ಪ್ರಾದೇಶಿಕ ಕೇಂದ್ರ ಸ್ಥಾಪನೆಯಿಂದ ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೂಡಿಕೆ ಆಕರ್ಷಿಸಲು ನೆರವಾಗಲಿದೆ. ದೇಶದಲ್ಲಿ ಆಲೂಗಡ್ಡೆ ವಲಯದ ಸ್ಥಾಪನೆ, ಆಹಾರ ಸಂಸ್ಕರಣೆ, ಸಾರಿಗೆ, ಮಾರುಕಟ್ಟೆ, ಇತ್ಯಾದಿ ಕ್ಷೇತ್ರಗಳಲ್ಲಿ ಉದ್ಯೋಗ ಸೃಷ್ಟಿಸಲಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

22 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

23 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago