ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲವಾದ ಅವಕಾಶಗಳಿದ್ದು, ಪಶ್ಚಿಮಘಟ್ಟ, ಅರಣ್ಯ, ನದಿ ಮತ್ತು ಸಮುದ್ರಗಳ ಸಮ್ಮಿಲನವಾಗಿರುವ ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವ ಮಂಕಾಳ ವೈದ್ಯ ತಿಳಿಸಿದ್ದಾರೆ.
ಕಾರವಾರದ ಅಜ್ವಿ ಓಷನ್ ಸಭಾಂಗಣದಲ್ಲಿ, ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ವತಿಯಿಂದ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕಡಲು ಪ್ರವಾಸೋದ್ಯಮ, ದೇಗುಲ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಅವಕಾಶಗಳಿದ್ದು, ಇದಕ್ಕಾಗಿ ಎಲ್ಲಾ ಇಲಾಖೆಗಳ ನೆರವು ಪಡೆಯಲು ಯೋಜನೆ ರೂಪಿಸಲಾಗುತ್ತಿದೆ ಎಂದರು. ರಾಜ್ಯ ಸರ್ಕಾರದ ವತಿಯಿಂದ ಎಲ್ಲಾ ಜಿಲ್ಲೆಗಳಲ್ಲಿ ಪಂಚತಾರಾ ಹೋಟೆಲ್ಗಳನ್ನು ಸರ್ಕಾರದ ವತಿಯಿಂದ ಅಥವಾ ಖಾಸಗಿ ಸಾರ್ವಜನಿಕ ಸಹಯೋಗದಲ್ಲಿ ನಿರ್ಮಿಸಲು ಚಿಂತನೆ ನಡೆಸಲಾಗಿದೆ. ಜಿಲ್ಲೆಗೆ ವಿದೇಶಿ ಪ್ರವಾಸಿಗರನ್ನು ಆಕರ್ಷಿಸಲು ಮಂಗಳೂರಿನಲ್ಲಿ 1 ಸಾವಿರದ 500 ಕೋಟಿ ರೂಪಾಯಿ ವೆಚ್ಚದಲ್ಲಿ ಬಂದರು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಅಂಕೋಲದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾದಲ್ಲಿ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ದೊರೆಯಲಿದೆ. ಮಂಗಳೂರಿನಿಂದ ಕಾರವಾರದವರೆಗಿನ 13 ದ್ವೀಪಗಳನ್ನು ಸರ್ಕಾರದಿಂದ ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದೆ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…