Advertisement
ಸುದ್ದಿಗಳು

ಪಿಲಿಕುಳದಲ್ಲಿ ಖಗ್ರಾಸ ಚಂದ್ರಗ್ರಹಣ ವೀಕ್ಷಣೆಗೆ ಅವಕಾಶ

Share

ಸೆಪ್ಟೆಂಬರ್ 7 ರಂದು ಖಗ್ರಾಸ ಚಂದ್ರಗ್ರಹಣವು ಸಂಭವಿಸಲಿದ್ದು, ಅಂದು ರಾತ್ರಿ ಸುಮಾರು 9:57 ಕ್ಕೆ  ಚಂದ್ರಗ್ರಹಣವು ಆರಂಭವಾಗಲಿದೆ. 11 ಗಂಟೆಯಿಂದ ಚಂದ್ರನು ಸಂಪೂರ್ಣವಾಗಿ ಭೂಮಿಯ ಗಾಢ ನೆರಳಿನಲ್ಲಿ ಮರೆಯಾಗುತ್ತಾನೆ. ಈ ಕ್ಷಣದಿಂದ ಮಧ್ಯರಾತ್ರಿ 12:22 ರವರೆಗೆ (ಸುಮಾರು 1 ಗಂಟೆ 22 ನಿಮಿಷ) ಖಗ್ರಾಸ ಚಂದ್ರಗ್ರಹಣವನ್ನು ವೀಕ್ಷಿಸಬಹುದು. ರಾತ್ರಿ ಸುಮಾರು 1:26ಕ್ಕೆ ಗ್ರಹಣವು ಮುಕ್ತಾಯಗೊಳ್ಳಲಿದ್ದು, ಈ ವಿದ್ಯಮಾನವನ್ನು ಬರಿಗಣ್ಣಿನಿಂದ ನೋಡಬಹುದು. ಈ ಸಮಯದಲ್ಲಿ ಭೂಮಿಯ ವಾತಾವರಣದ ಮೂಲಕ ಹಾದುಹೋಗುವ ಸೂರ್ಯನ ಕಿರಣಗಳ ಚದುರುವಿಕೆಯಿಂದ ಚಂದ್ರನು ತಾಮ್ರದಂತೆ ರಕ್ತವರ್ಣದಲ್ಲಿ ಕಂಡುಬರುತ್ತಾನೆ.

ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ರಾತ್ರಿ 9 ಗಂಟೆಯಿಂದ ನಡುರಾತ್ರಿ 1:30 ರವರೆಗೆ ಈ ವಿಶೇಷ ಖಗೋಳ ವಿದ್ಯಮಾನವನ್ನು ವೀಕ್ಷಿಸಲು ದೂರದರ್ಶಕ ಮತ್ತು ದುರ್ಬೀನುಗಳ ವ್ಯವಸ್ಥೆ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಕಾಣುವ ಇತರ ಗ್ರಹಗಳು, ನಕ್ಷತ್ರಗಳು ಮತ್ತು ನಕ್ಷತ್ರ ಸಮೂಹಗಳ ಬಗ್ಗೆ ವಿವರಣೆ ನೀಡಲಾಗುತ್ತದೆ. ಮಳೆ, ಮೋಡಗಳ ಅಡಚಣೆ ಇಲ್ಲದಿದ್ದಲ್ಲಿ ಆಸಕ್ತ ವೀಕ್ಷಕರು ಇದರ ಸದುಪಯೋಗ ಪಡಿಸಿಕೊಳ್ಳಬಹುದು ಎಂದು  ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

5 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

12 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

12 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

12 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

21 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

21 hours ago