Advertisement
ಸುದ್ದಿಗಳು

ಪಿಲಿಕುಳದಲ್ಲಿ ಖಗ್ರಾಸ ಚಂದ್ರಗ್ರಹಣ ವೀಕ್ಷಣೆಗೆ ಅವಕಾಶ

Share

ಸೆಪ್ಟೆಂಬರ್ 7 ರಂದು ಖಗ್ರಾಸ ಚಂದ್ರಗ್ರಹಣವು ಸಂಭವಿಸಲಿದ್ದು, ಅಂದು ರಾತ್ರಿ ಸುಮಾರು 9:57 ಕ್ಕೆ  ಚಂದ್ರಗ್ರಹಣವು ಆರಂಭವಾಗಲಿದೆ. 11 ಗಂಟೆಯಿಂದ ಚಂದ್ರನು ಸಂಪೂರ್ಣವಾಗಿ ಭೂಮಿಯ ಗಾಢ ನೆರಳಿನಲ್ಲಿ ಮರೆಯಾಗುತ್ತಾನೆ. ಈ ಕ್ಷಣದಿಂದ ಮಧ್ಯರಾತ್ರಿ 12:22 ರವರೆಗೆ (ಸುಮಾರು 1 ಗಂಟೆ 22 ನಿಮಿಷ) ಖಗ್ರಾಸ ಚಂದ್ರಗ್ರಹಣವನ್ನು ವೀಕ್ಷಿಸಬಹುದು. ರಾತ್ರಿ ಸುಮಾರು 1:26ಕ್ಕೆ ಗ್ರಹಣವು ಮುಕ್ತಾಯಗೊಳ್ಳಲಿದ್ದು, ಈ ವಿದ್ಯಮಾನವನ್ನು ಬರಿಗಣ್ಣಿನಿಂದ ನೋಡಬಹುದು. ಈ ಸಮಯದಲ್ಲಿ ಭೂಮಿಯ ವಾತಾವರಣದ ಮೂಲಕ ಹಾದುಹೋಗುವ ಸೂರ್ಯನ ಕಿರಣಗಳ ಚದುರುವಿಕೆಯಿಂದ ಚಂದ್ರನು ತಾಮ್ರದಂತೆ ರಕ್ತವರ್ಣದಲ್ಲಿ ಕಂಡುಬರುತ್ತಾನೆ.

ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ರಾತ್ರಿ 9 ಗಂಟೆಯಿಂದ ನಡುರಾತ್ರಿ 1:30 ರವರೆಗೆ ಈ ವಿಶೇಷ ಖಗೋಳ ವಿದ್ಯಮಾನವನ್ನು ವೀಕ್ಷಿಸಲು ದೂರದರ್ಶಕ ಮತ್ತು ದುರ್ಬೀನುಗಳ ವ್ಯವಸ್ಥೆ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಕಾಣುವ ಇತರ ಗ್ರಹಗಳು, ನಕ್ಷತ್ರಗಳು ಮತ್ತು ನಕ್ಷತ್ರ ಸಮೂಹಗಳ ಬಗ್ಗೆ ವಿವರಣೆ ನೀಡಲಾಗುತ್ತದೆ. ಮಳೆ, ಮೋಡಗಳ ಅಡಚಣೆ ಇಲ್ಲದಿದ್ದಲ್ಲಿ ಆಸಕ್ತ ವೀಕ್ಷಕರು ಇದರ ಸದುಪಯೋಗ ಪಡಿಸಿಕೊಳ್ಳಬಹುದು ಎಂದು  ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

7 minutes ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

2 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

5 hours ago

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

7 hours ago