ಕೊಡಗು ಜಿಲ್ಲೆಯ ಕಾಫಿ ತೋಟಗಳಲ್ಲಿ ದಾಂಧಲೆ ನಡೆಸುತ್ತಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಗೋಣಿಕೊಪ್ಪ ಬಳಿಯ ಚೆನ್ನಂಗೊಲ್ಲಿ ಗ್ರಾಮದಲ್ಲಿ ಕಳೆದ ವಾರ ಮಹಿಳೆಯೊಬ್ಬರ ಸಾವಿಗೆ ಕಾರಣವಾಗಿದ್ದ ಕಾಡಾನೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಯ ಮೇಲೆ ಒತ್ತಡ ಹೇರಿದ್ದರು. ಕಾಫಿ ತೋಟದಲ್ಲಿ ಕಾರ್ಯಾಚರಣೆ ಕೈಗೊಂಡ ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ಏಳು ಸಾಕಾನೆಗಳ ನೆರವಿನಿಂದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಸೆರೆಸಿಕ್ಕಿದ ಕಾಡಾನೆಯನ್ನು ದುಬಾರೆಯಲ್ಲಿನ ಸಾಕಾನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…